ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಹೆಮ್ಮೆಯ' ಬಿಜೆಪಿ ಕಾರ್ಯಕರ್ತರೊಂದಿಗೆ 'ವಿಶೇಷ' ಸೆಲ್ಫಿ ಕ್ಲಿಕ್ಕಿಸಿಕೊಂಡ ಪ್ರಧಾನಿ ಮೋದಿ

Twitter
Facebook
LinkedIn
WhatsApp
'ಹೆಮ್ಮೆಯ' ಬಿಜೆಪಿ ಕಾರ್ಯಕರ್ತರೊಂದಿಗೆ 'ವಿಶೇಷ' ಸೆಲ್ಫಿ ಕ್ಲಿಕ್ಕಿಸಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಜತೆ ಸೆಲ್ಫಿ(Selfie) ತೆಗೆದುಕೊಳ್ಳಬೇಕು ಎಂಬುದು ಎಷ್ಟೋ ಮಂದಿಯ ಕನಸಾಗಿರುತ್ತದೆ. ಆದರೆ ಮೋದಿಯವರೇ ಬಂದು ನಿಮ್ಮ ಜತೆ ಸೆಲ್ಫಿ ಕ್ಲಿಕ್ಕಿಸಿದಾಗ ಎಷ್ಟು ಸಂತೋಷವಾಗಬಹುದಲ್ಲವೇ. ಅಂತಹ ಒಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಧಾನಿ ಮೋದಿ ಚೆನ್ನೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ತಿರು ಎಸ್. ಮಣಿಕಂಠನ್ ಅವರ ಬಳಿ ಸೆಲ್ಫಿಯನ್ನು ತೆಗೆದುಕೊಂಡು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ಮೋದಿ ಶನಿವಾರ ಚೆನ್ನೈಗೆ ಭೇಟಿ ನೀಡಿದ್ದರು. ಈ ವೇಳೆ ದಿವ್ಯಾಂಗರಾಗಿಯೂ ಒಂದು ಅಂಗಡಿಯನ್ನು ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ತಿರು.ಎಸ್.ಮಣಿಕಂದನ್ ಅವರನ್ನು ಭೇಟಿಯಾಗಿ ಅವರೊಡನೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಇದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅನೇಕರು ಪ್ರೇರೇಪಿತರಾಗಲಿ ಎಂದು ಅವರಿಗೆ ಶುಭಾಶಯ ಕೋರಿದ್ದಾರೆ.

ಚೆನ್ನೈನಲ್ಲಿ ನಾನು ತಿರು ಎಸ್.ಮಣಿಕಂದನ್ ಅವರನ್ನು ಭೇಟಿಯಾದೆ. ಅವರು ಈರೋಡ್‌ನ (Erode) ಬಿಜೆಪಿ ಕಾರ್ಯಕರ್ತ ಹಾಗೂ ಬೂತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ದಿವ್ಯಾಂಗರಾಗಿದ್ದರೂ ತನ್ನದೇ ಸ್ವಂತ ಅಂಗಡಿಯನ್ನು ನಡೆಸುತ್ತಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ. ಅಲ್ಲದೇ ಅವರು ತಮಗೆ ಬಂದ ದೈನಂದಿನ ಲಾಭದಲ್ಲಿ ಗಣನೀಯ ಭಾಗವನ್ನು ಬಿಜೆಪಿಗೆ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರ ಫೋಟೋದೊಂದಿಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಿರು ಎಸ್.ಮಣಿಕಂದನ್ ಅವರಂತಹ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ ಪಕ್ಷದಲ್ಲಿ ನಾನು ಕಾರ್ಯಕರ್ತನಾಗಿರುವುದಕ್ಕೆ ನನಗೆ ತುಂಬಾ ಹೆಮ್ಮೆಯಿದೆ ಎಂದು ಮಣಿಕಂದನ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ನಡೆದ ಜಾಥಾದಲ್ಲಿ ಮೋದಿ ಮಾತನಾಡಿ, ತಮಿಳುನಾಡಿನ ಶ್ರೀಮಂತ ಇತಿಹಾಸವನ್ನು ಹೊಗಳಿದರು. ಇದು ಭಾಷೆ ಮತ್ತು ಸಾಹಿತ್ಯದ ನಾಡು. ದೇಶಭಕ್ತಿ ಮತ್ತು ರಾಷ್ಟ್ರೀಯ ಪ್ರಜ್ಞೆಯ ಕೇಂದ್ರವಾಗಿದೆ. ದೇಶದ ಅನೇಕ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ತಮಿಳುನಾಡಿನವರು ಎಂದು ಹೇಳಿದರು.

2014ರ ನಂತರ ಭಾರತದ ಮೂಲಸೌಕರ್ಯ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವಲ್ಲಿ ಎನ್​ಡಿಎ ಪ್ರಯತ್ನದ ಬಗ್ಗೆ ಮಾತನಾಡಿದರು. ಇನ್ನು, ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಭೇಟಿಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಗೋಬ್ಯಾಕ್ ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ನೆಟ್ಟಿಗರು ಮಾಡಿರುವ ಟ್ವೀಟ್​ಗಳು ಟ್ರೆಂಡ್ ಆಗಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ