ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

₹10 ಲಕ್ಷ ಸುಲಿಗೆ ಮಾಡಲು ಸುಳ್ಳು ಅತ್ಯಾಚಾರ ಆರೋಪ: ಮಹಿಳೆ ವಿರುದ್ಧ ಪ್ರಕರಣ

Twitter
Facebook
LinkedIn
WhatsApp
AA1bxrgd 4

ಗುರುಗ್ರಾಮ: ಅತ್ಯಾಚಾರ ಮಾಡಿದ್ದಾನೆ ಎಂದು ದೂರು ನೀಡಿ ವ್ಯಕ್ತಿಯೊಬ್ಬರಿಂದ 10 ಲಕ್ಷ ರೂ ವಸೂಲಿ ಮಾಡಲು ಪ್ರಯತ್ನಿಸಿದ ಆರೋಪದಡಿ ಹರ್ಯಾಣದ ಗುರುಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಗುರುಗ್ರಾಮದ ಸೆಕ್ಟರ್ 20ರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಳು. ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸುಳ್ಳು ಆರೋಪ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮತ್ತು ಪುರುಷ ಇಬ್ಬರೂ ತಮ್ಮ ಸಾಮಾನ್ಯ ಸ್ನೇಹಿತನ ಮೂಲಕ ಪರಿಚಿತರಾಗಿದ್ದರು. ಏಪ್ರಿಲ್ 13ರಂದು ಸೌತ್ ಸಿಟಿಯಲ್ಲಿನ ಹೋಟೆಲ್ ಕೊಠಡಿಯಲ್ಲಿ ಇಬ್ಬರೂ ಭೇಟಿ ಮಾಡಿದ್ದರು ಎಂದು ಘಟನೆ ಬಗ್ಗೆ ಪೊಲೀಸರು ಭಾನುವಾರ ವಿವರಣೆ ನೀಡಿದ್ದಾರೆ.

ತಮ್ಮ ಸ್ನೇಹಿತ ಹೋಟೆಲ್ ಕೊಠಡಿಯಿಂದ ತೆರಳಿದ ಕೆಲವು ಗಂಟೆಗಳ ನಂತರ ಕೂಡ ಅವರಿಬ್ಬರೂ ಅಲ್ಲಿಯೇ ಉಳಿದುಕೊಂಡಿದ್ದರು. ಮರುದಿನ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದ ಮಹಿಳೆ, ಹೋಟೆಲ್ ಕೊಠಡಿಯಲ್ಲಿ ಆ ವ್ಯಕ್ತಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿದ್ದಳು.

ಇದಾಗಿ ಕೆಲವೇ ಸಮಯದ ನಂತರ ಆರೋಪಿ ಕೂಡ ಪೊಲೀಸ್ ಠಾಣೆಗೆ ಬಂದು, ತನ್ನ ವಿರುದ್ಧದ ದೂರು ವಾಪಸ್ ಪಡೆಯಬೇಕು ಎಂದರೆ 10 ಲಕ್ಷ ರೂ ನೀಡಬೇಕು ಎಂದು ಮಹಿಳೆ ಒತ್ತಾಯಿಸುತ್ತಿದ್ದಾಳೆ ಎಂಬುದಾಗಿ ಆರೋಪಿಸಿದ್ದ. ಎರಡೂ ಕಡೆಯವರ ದೂರುಗಳನ್ನು ದಾಖಲಿಸಿದ ನಂತರ ಪೊಲೀಸರು, ಯಾರು ನಿಜವಾದ ತಪ್ಪಿತಸ್ಥರು ಎಂದು ಕಂಡುಹಿಡಿಯಲು ಉಪಾಯ ಮಾಡಿದ್ದರು. ಶಂಕಿತನ ಕೈಗೆ ಮೊಬೈಲ್ ಫೋನ್ ಒಂದನ್ನು ನೀಡಿ, ಮಹಿಳೆ ಜತೆಗಿನ ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಕರೆ ದಾಖಲೆಯಲ್ಲಿ ಮಹಿಳೆಯು ಆರೋಪಿಯಿಂದ ಹಣಕ್ಕಾಗಿ ಬೇಡಿಕೆ ಇರಿಸುತ್ತಿರುವುದು ಪೊಲೀಸರಿಗೆ ಮನವರಿಕೆಯಾಗಿತ್ತು. ಇದರ ನಂತರ ಆರೋಪಿಯು ಮಹಿಳೆ ವಿರುದ್ಧ ಲಿಖಿತ ದೂರು ದಾಖಲಿಸಿದ್ದ.

ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 389ರ (ಅಪರಾಧದ ಆರೋಪದ ಮೂಲಕ ವ್ಯಕ್ತಿಯಲ್ಲಿ ಭಯ ಮೂಡಿಸಿ ಸುಲಿಗೆ ಮಾಡುವುದು) ಅಡಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾವನ ವಿರುದ್ಧವೇ ಸುಳ್ಳು ಪ್ರಕರಣ

ಕೆಲವು ದಿನಗಳ ಹಿಂದಷ್ಟೇ ದಿಲ್ಲಿಯಲ್ಲಿ ಇಂತಹದೇ ಪ್ರಕರಣ ವರದಿಯಾಗಿತ್ತು. ತಂದೆಯ ಸಹಾಯದೊಂದಿಗೆ ಮಹಿಳೆಯೊಬ್ಬಳು ಮಾವನ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಳು. ಇದು ಸುಳ್ಳು ಆರೋಪ ಎನ್ನುವುದು ತನಿಖೆಯಿಂದ ದಾಖಲಾಗಿತ್ತು. ಈ ಬಗ್ಗೆ ತಂದೆ- ಮಗಳ ವಿರುದ್ಧ ತೀವ್ರ ಕಿಡಿಕಾರಿದ್ದ ದಿಲ್ಲಿಯ ಕೋರ್ಟ್, ಅವರಿಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.

ಮಹಿಳೆಯ ಗಂಡ, ಮಾವ ಹಾಗೂ ನಾದಿನಿ ವಿರುದ್ಧ ದಾಖಲಿಸಲಾಗಿದ್ದ ವರದಕ್ಷಿಣೆ ಕಿರುಕುಳದ ಸುಳ್ಳು ಆರೋಪಗಳಿಂದ ಖುಲಾಸೆಗೊಳಿಸಿ ಹೆಚ್ಚುವರಿ ಸೆಷನ್ಸ್ ಕೋರ್ಟ ನ್ಯಾಯಾಧೀಶರು ತೀರ್ಪು ನೀಡಿದ್ದರು.

“ಅತ್ಯಾಚಾರ ಬಹಳ ಹೇಯ ಅಪರಾಧ. ಆದರೆ ಅತ್ಯಾಚಾರದ ಸುಳ್ಳು ಆರೋಪಗಳನ್ನು ಕೂಡ ಕಠಿಣವಾಗಿ ಪರಿಗಣಿಸಬೇಕಾಗುತ್ತದೆ. ಇದು ಆರೋಪಿಗಳಿಗೆ ತೀವ್ರ ಅವಮಾನ ಉಂಟುಮಾಡುತ್ತದೆ” ಎಂದು 73 ಪುಟಗಳ ತೀರ್ಪಿನಲ್ಲಿ ನ್ಯಾಯಾಧೀಶರು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist