ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬುಡಕಟ್ಟು ಜನಾಂಗದವರಿಗೆ ಮನೆ, ಜಮೀನು ಪಹಣಿ ವ್ಯವಸ್ಥೆ: ಶ್ರೀರಾಮುಲು

Twitter
Facebook
LinkedIn
WhatsApp
ಬುಡಕಟ್ಟು ಜನಾಂಗದವರಿಗೆ ಮನೆ, ಜಮೀನು ಪಹಣಿ ವ್ಯವಸ್ಥೆ: ಶ್ರೀರಾಮುಲು

ಯಲ್ಲಾಪುರ (ಡಿ.10) : ಬುಡಕಟ್ಟು ಜನಾಂಗದವರು ಈ ಪ್ರದೇಶದಲ್ಲಿ ನೂರಾರು ವರ್ಷಗಳಿಂದ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿ ನೆಲೆಸಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಸಾರಿಗೆ ಮತ್ತು ಪರಿಶಿಷ್ಟವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ತಾಲೂಕಿನ ನಂದೊಳ್ಳಿ ಗ್ರಾಪಂ ವ್ಯಾಪ್ತಿಯ ಮಾಗೋಡ ಕಾಲನಿಯ ಲಕ್ಷ್ಮೇ ಗಣಪತಿ ಸಿದ್ದಿ ವೇದಿಕೆಯಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ, ಪರಿಶಿಷ್ಟವರ್ಗಗಳ ಕಲ್ಯಾಣ, ವಾಲ್ಮೀಕಿ ಅಭಿವೃದ್ಧಿ ನಿಗಮಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಾಸ್ತವ್ಯ ಮತ್ತು ಸಮುದಾಯದವರೊಂದಿಗೆ ಸಂವಾದ; ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಕುಟುಂಬದವರ ಮನೆ ಮತ್ತು ಜಮೀನುಗಳ ಪಹಣಿ ಪತ್ರಿಕೆ ದೊರಕುವ ವ್ಯವಸ್ಥೆ ಮಾಡುತ್ತೇನೆ. ಸಿದ್ದಿ ಸಮುದಾಯದವರು ಅನೇಕ ಬೇಡಿಕೆಗಳನ್ನು ನೀಡಿದ್ದಾರೆ. ಅವರ ಬೇಡಿಕೆಯಂತೆ ಅತಿಕ್ರಮಣದಾರರಿಗೆ ಮಂಜೂರಿ ನೀಡುವುದು; ಕ್ರೀಡಾಪಟುಗಳಿಗೆ ದೇಶಮಟ್ಟದಲ್ಲಿ ಬೆಳೆಯಲು ತರಬೇತಿ ನೀಡುವುದು; ಇಲ್ಲಿನ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ವಸತಿ ಶಾಲೆ; ಸಿದ್ದಿಗಳ ವೈಯಕ್ತಿಕ ರಕ್ಷಣೆಗಾಗಿ ರೈಫಲ್‌ ನೀಡುವುದು ಸೇರಿದಂತೆ ಸಾಧ್ಯವಾದ ಎಲ್ಲ ರೀತಿಯ ನೆರವನ್ನು ನೀಡುವ ಪ್ರಯತ್ನ ಮಾಡುವ ಭರವಸೆ ನೀಡಿದರು. ಅಲ್ಲದೇ ಅವರು ಬೆಳೆದ ವಸ್ತು ಮತ್ತು ತಯಾರಿಸಿದ ಗುಡಿ ಕೈಕಾರಿಕೆಗಳ ವಸ್ತುಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಕಲ್ಪಿಸಿಕೊಡುವ ಭರವಸೆಯನ್ನೂ ನೀಡಿದರು.

ಇಲ್ಲಿನ ಸಿದ್ದಿ ಸಮಾಜದಲ್ಲಿರುವ ಹಿಂದೂ, ಕ್ರೈಸ್ತ, ಮುಸ್ಲಿಮರೆಲ್ಲರೂ ಒಂದೇ ಕುಟುಂಬದವರಂತೆ ಬಾಳುತ್ತಿರುವುದು ಅವರ ಜೀವನ ಶೈಲಿ, ಕಲೆ, ಸಂಸ್ಕೃತಿಗೆ ಸಾಕ್ಷಿಯಾಗಿದೆ. ನೈಸರ್ಗಿಕ ಸಂಪತ್ತಿಗೆ ಮಾರು ಹೋಗಿದ್ದೇನೆ. 25 ಸಾವಿರ ಸಿದ್ದಿಗಳು ಜಿಲ್ಲೆಯಲ್ಲಿದ್ದಾರೆ. ಈ ಸಮುದಾಯ ಮೇಲೆತ್ತಲೆಂದೇ ಬಿಜೆಪಿ ಶಾಂತಾರಾಮ ಸಿದ್ದಿ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ