ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.
ಹೆಚ್ಎಸ್ಆರ್ ಲೇಔಟ್ನ ಫ್ರೀಡಂ ಇಂಟರ್ನ್ಯಾಷನಲ್ ಸ್ಕೂಲ್ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ.
ಅದೃಷ್ಟವಶಾತ್ ಘಟನೆ ವೇಳೆ ಬಸ್ನಲ್ಲಿ ಮಕ್ಕಳು ಇರಲಿಲ್ಲ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?