ಮಂಗಳವಾರ, ಏಪ್ರಿಲ್ 23, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

12ನೇ ತರಗತಿಯಲ್ಲಿ ವಧುವಿಗೆ ಕಡಿಮೆ ಮಾರ್ಕ್ಸ್‌ – ಮದುವೆ ರದ್ದು ಮಾಡಿದ ವರ

Twitter
Facebook
LinkedIn
WhatsApp
WhatsApp Image 2023 03 14 at 9.54.47 AM 3

ಲಕ್ನೋ: ವಧುವೊಬ್ಬಳು (Bride) 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ (Groom) ಮದುವೆಯಾಗಲು ನಿರಾಕರಿಸಿದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಉತ್ತರಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ವಧುವಿನ ಕುಟುಂಬಸ್ಥರು ವರದಕ್ಷಿಣೆ (Dowry) ಬೇಡಿಕೆ ಈಡೇರಿಸದ ಕಾರಣ ವರನ ಕುಟುಂಬವು ಮದುವೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದೆ.

ಆದರೆ 12ನೇ ತರಗತಿ ಅಂಕಪಟ್ಟಿಯಲ್ಲಿ ಬಾಲಕಿಗೆ ಕಡಿಮೆ ಅಂಕ ಬಂದಿದೆ. ಇದರಿಂದಾಗಿ ಮದುವೆಯನ್ನು ರದ್ದು ಮಾಡಲಾಗಿದೆ ಎಂದು ವರನ ಕಡೆಯವರು ತಿಳಿಸಿದ್ದಾರೆ.

ಬಾಗನವಾ ಗ್ರಾಮದ ರಾಮಶಂಕರ್ ಎಂಬುವವರ ಪುತ್ರ ಸೋನು ಎಂಬಾತನೊಂದಿಗೆ ಸೋನಿ ಎಂಬಾಕೆಯ ಮದುವೆಯನ್ನು ನಿಶ್ಚಯಿಸಲಾಗಿತ್ತು. ವಧುವಿನ ಕುಟುಂಬಸ್ಥರು 60 ಸಾವಿರಕ್ಕೂ ಅಧಿಕ ಹಣ ಖರ್ಚು ಮಾಡಿ ವರನಿಗೆ 15 ಸಾವಿರ ಮೌಲ್ಯದ ಬಂಗಾರದ ಉಂಗುರ ಕೂಡ ನೀಡಿ ಮದುವೆ ಸಮಾರಂಭ ಏರ್ಪಡಿಸಿದ್ದರು.

ಮರುದಿನವೇ ವರನ ಮನೆಯವರು ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ವಧುವಿನ ತಂದೆ ಹೆಚ್ಚಿನ ವರದಕ್ಷಿಣೆ ನೀಡಲು ಆಗದಿದ್ದರಿಂದ ವರನ ಕುಟುಂಬವು ಹುಡುಗಿಗೆ 12ನೇ ತರಗತಿಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮದುವೆಯನ್ನು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ವಧುವಿನ ಕುಟುಂಬವು ತಮ್ಮ ಸಂಬಂಧಿಕರ ಮೂಲಕ ವರನ ಕುಟುಂಬವನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ವರನ ಕುಟುಂಬವು ವರದಕ್ಷಿಣೆ ನೀಡುವಂತೆ ಪಟ್ಟು ಹಿಡಿದರು. ಇದರಿಂದಾಗಿ ವಧುವಿನ ತಂದೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ