ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಪಿತೋರ್ಘಡ್: 12 ವರ್ಷದ ಅಪ್ರಾಪ್ತ ಮಗಳಿಗೆ ಎರಡೆರಡು ಬಾರಿ ಮದುವೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡ್ನ (Uttarakhand) ಪಿತೋರ್ಘಡ್ದ (Pithoragarh) ಧಾರುಚುಲದಲ್ಲಿ (Dharchula) ಈ ಘಟನೆ ನಡೆದಿದೆ. ಬಾಲಕಿಯ ತಾಯಿ 36 ವರ್ಷದ ಯುವಕನೊಂದಿಗೆ ಬಾಲಕಿಯ ವಿವಾಹ ಮಾಡಿದ್ದಳು.
ಪ್ರಸ್ತುತ ಈ 12 ವರ್ಷದ ಅಪ್ರಾಪ್ತ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದು (pregnant), ಆಕೆಯನ್ನು ಪುನರ್ವಸತಿ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಇದು ಈಕೆಗೆ ಎರಡನೇ ವಿವಾಹವಾಗಿತ್ತು. ಮೊದಲ ವಿವಾಹ ಕೌಟುಂಬಿಕ ಕಲಹದಿಂದಾಗಿ ಮುರಿದು ಬಿದ್ದಿತ್ತು. ಇದಾದ ಬಳಿಕ ಆಕೆಗೆ ತಾಯಿ 36 ವರ್ಷದ ಯುವಕನೊಂದಿಗೆ ಮತ್ತೊಂದು ವಿವಾಹ ಮಾಡಿದ್ದಾಳೆ ಎಂದು ಪಿತೋರ್ಘಡ್ದ ಸೂಪರಿಂಟೆಂಡ್ ಆಫ್ ಪೊಲೀಸ್ ಲೋಕೇಶ್ವರ್ ಸಿಂಗ್ (Lokeshwar Singh) ಹೇಳಿದ್ದಾರೆ.ಬಾಲಕಿಯ ತಾಯಿಯನ್ನು ಬುಧವಾರ ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ 5/6 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಅಪ್ರಾಪ್ತ ಬಾಲಕಿಯ ಪತಿಯನ್ನು ಒಂದೆರಡು ದಿನಗಳ ಹಿಂದೆ ಬಂಧಿಸಲಾಯಿತು ಮತ್ತು ಐಪಿಸಿಯ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ), ಪೋಕ್ಸೊ ಕಾಯ್ದೆಯ 5 (1) 6 ಮತ್ತು ಬಾಲ್ಯ ವಿವಾಹ ತಡೆ ಕಲಂ 9 (ಮಗುವಿಗೆ ಮದುವೆಯಾದ ಪುರುಷನಿಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಂದು ಸಿಂಗ್ ಹೇಳಿದರು ಈ ಬಗ್ಗೆ ಮಕ್ಕಳ ಕಲ್ಯಾಣ ಇಲಾಖೆ ಪೊಲೀಸರಿಗೆ ದೂರು ನೀಡಿತ್ತು ಎಂದು ಪೊಲೀಸ್ ಅಧಿಕಾರಿ ಹೇಳಿದರು. ಪಿತೋರ್ಘರ್ ಜಿಲ್ಲೆಯ ಬೇರಿನಾಗ್ ಉಪ ವಿಭಾಗದ ಡಿಗ್ಟೋಲಿ ಗ್ರಾಮದಲ್ಲಿಯೂ (Digtoli village) ವರನ ಪೋಷಕರಿಗೆ ಮನವರಿಕೆ ಮಾಡಿಕೊಟ್ಟ ನಂತರ ಮತ್ತೊಂದು ಬಾಲ್ಯ ವಿವಾಹವನ್ನು ತಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲ್ಯ ವಿವಾಹದ ಅನಾಹುತಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಕಠಿಣ ಕಾನೂನು ಜಾರಿಯಲ್ಲಿದ್ದರೂ ಅಲ್ಲಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಲೇ ಇದೆ.
ಶಾಲೆಗೆ ಹೋಗುವ ವಯಸ್ಸಿನಲ್ಲಿ ವಿವಾಹ, ಮಕ್ಕಳು, ಸಂಸಾರ, ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ ಸೇರಿದಂತೆ ಸಮಸ್ಯೆಗಳ ಕೂಪದಲ್ಲೇ ಇದ್ದ ಮೂವರು ಸಹೋದರಿಯರು ಶವವಾಗಿ ಪತ್ತೆಯಾದ ಘಟನೆ ರಾಜಸ್ಥಾನ ಜೈಪುರ ಜಿಲ್ಲೆಯ ದುಡು ಪಟ್ಟಣದಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದಿತ್ತು. ಕಳೆದ 15 ದಿನಗಳಿಂದ ಮೂವರು ಸಹೋದರಿಯರು ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದರು. ಪೋಷಕರು ತಮ್ಮ ಮೂವರು ಮಕ್ಕಳು ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು. ಈ ವೇಳೆ ಪೊಲೀಸರ ಮುಂದೆ ಪತಿ ಹಾಗೂ ಆತನ ಮನೆಯವರು ನಾಟಕವಾಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ನಂತರ ಬಾವಿಯಲ್ಲಿ ಒಟ್ಟು 5 ಶವಗಳನ್ನು ಪತ್ತೆ ಮಾಡಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?