ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

128 ಗಂಟೆಗಳ ನಂತರ ಭೂಕಂಪ ಅವಶೇಷಗಳಡಿಯಿಂದ ಬದುಕಿ ಬಂದ 2 ತಿಂಗಳ ಮಗು!

Twitter
Facebook
LinkedIn
WhatsApp
128 ಗಂಟೆಗಳ ನಂತರ ಭೂಕಂಪ ಅವಶೇಷಗಳಡಿಯಿಂದ ಬದುಕಿ ಬಂದ 2 ತಿಂಗಳ ಮಗು!

ಇಸ್ಲಾಂಬುಲ್: ಸಿರಿಯಾ (Syria Earthquake) ಮತ್ತು ಟರ್ಕಿಯಲ್ಲಿ (Turkey Earthquake) ಸಂಭವಿಸಿರುವ ಭೀಕರ ಭೂಕಂಪದಲ್ಲಿ ಇದುವರೆಗೂ 28,000 ಜನರು ಸಾವನ್ನಪ್ಪಿದ್ದು, 6,000 ಕಟ್ಟಡಗಳು ಕುಸಿದುಬಿದ್ದಿವೆ. ಕಳೆದ ಸೋಮವಾರ ಸಂಭವಿಸಿದ 7.8 ತೀವ್ರತೆಯ ಭೂಕಂಪದಿಂದ ಟರ್ಕಿ ಸಂಪೂರ್ಣ ತತ್ತರಿಸಿದೆ. ಆದರೆ, ಈ ದುರಂತದಲ್ಲೂ ಅಚ್ಚರಿಯ ರೀತಿಯಲ್ಲಿ ಬದುಕುಳಿದವರ ಫೋಟೋಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೀಗ ಟರ್ಕಿಯ ಭೂಕಂಪದಲ್ಲಿ 128 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದರೂ ಬದುಕುಳಿದಿದ್ದ 2 ತಿಂಗಳ ಮಗುವೊಂದನ್ನು ರಕ್ಷಿಸಲಾಗಿದ್ದು, ಆ ಮಗುವಿನ ಅದೃಷ್ಟ ಮತ್ತು ರಕ್ಷಣಾ ಸಿಬ್ಬಂದಿಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

index 12

ಶನಿವಾರ ದಕ್ಷಿಣ ಟರ್ಕಿಯಲ್ಲಿ 128 ಗಂಟೆಗಳ ನಂತರ ಭೂಕಂಪದ ಅವಶೇಷಗಳ ಅಡಿಯಿಂದ 2 ತಿಂಗಳ ಮಗುವನ್ನು ರಕ್ಷಿಸಲಾಗಿದೆ. ಆ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ತಕ್ಷಣ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಫೆಬ್ರವರಿ 6ರಂದು ಸಂಭವಿಸಿದ ಭಾರೀ ಭೂಕಂಪವು ಟರ್ಕಿಯನ್ನು ಹೈರಾಣಾಗಿಸಿದೆ. ಅದೆಷ್ಟೋ ಕುಟುಂಬಗಳೇ ಭೂಕಂಪಕ್ಕೆ ಸಿಲುಕಿ ಸಂಪೂರ್ಣವಾಗಿ ನಾಶವಾಗಿವೆ.

ಶನಿವಾರ ಮುಂಜಾನೆ ಟರ್ಕಿಯ ಆಗ್ನೇಯ ಆದಿಯಮಾನ್ ಪ್ರಾಂತ್ಯದಲ್ಲಿ ದಂಪತಿಯನ್ನು ರಕ್ಷಿಸಲಾಯಿತು. ಅದಕ್ಕೂ ಮೊದಲು ಟರ್ಕಿಯ ದಕ್ಷಿಣ ಹಟಾಯ್ ಪ್ರಾಂತ್ಯದಲ್ಲಿ 13 ವರ್ಷದ ಬಾಲಕನನ್ನು ಅವಶೇಷಗಳಿಂದ ರಕ್ಷಿಸಲಾಯಿತು. ಈ ಹಿಂದೆ, ಕಹ್ರಮನ್ಮರಸ್ ಪ್ರಾಂತ್ಯದಲ್ಲಿ ಭೂಕಂಪ ಸಂಭವಿಸಿದ 120 ಗಂಟೆಗಳ ನಂತರ ಅಜರ್ಬೈಜಾನಿ ರಕ್ಷಣಾ ತಂಡವು 50 ವರ್ಷದ ಮಹಿಳೆಯನ್ನು ಕುಸಿದ ಕಟ್ಟಡದಿಂದ ಹೊರತೆಗೆದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist