ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರ ರಕ್ಷಣೆಗೆ ಇನ್ನೂ 15 ದಿನ ಬೇಕಾಗಬಹುದು!

Twitter
Facebook
LinkedIn
WhatsApp
ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರ ರಕ್ಷಣೆಗೆ ಇನ್ನೂ 15 ದಿನ ಬೇಕಾಗಬಹುದು!

ಡೆಹ್ರಾಡೂನ್‌: ಉತ್ತರಕಾಶಿ ಸುರಂಗ ಕುಸಿತದ (Tunnel Collapse) ತುರ್ತು ಕಾರ್ಯಾಚರಣೆ (rescue operation) ಪ್ರಕ್ರಿಯೆಯಲ್ಲಿನ ಸವಾಲುಗಳನ್ನು ಗಮನಿಸಿದರೆ ಸಿಕ್ಕಿಬಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯವು 15 ದಿನಗಳವರೆಗೆ ತೆಗೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾರ್ಯಾಚರಣೆಯಲ್ಲಿ ಆಗಿರುವ ಒಂದು ಪ್ರಮುಖ ಪ್ರಗತಿ ಎಂದರೆ, ಹೆಚ್ಚಿನ ಪ್ರಮಾಣದ ಘನ ಆಹಾರ ಮತ್ತು ನೀರನ್ನು ಕಳುಹಿಸಲು 57 ಮೀಟರ್ ಉದ್ದದ, 6 ಇಂಚಿನ ಅಗಲದ ಪೈಪ್ ಅನ್ನು ಕಾರ್ಮಿಕರು ಇರುವಲ್ಲಿ ಸೇರಿಸುವಲ್ಲಿ ಯಶಸ್ವಿಯಾಗಿರುವುದು. ಈಗ ಕಾರ್ಮಿಕರಿಗೆ ಬಿಸಿ ಆಹಾರವನ್ನು ನೀಡಲಾಗುತ್ತಿದೆ.

ಸ್ಥಳಕ್ಕೆ ಆಗಮಿಸಿರುವ ವೈದ್ಯರು, ಸಿಲುಕಿರುವ ಕಾರ್ಮಿಕರಿಗೆ ಯೋಗ ಮಾಡಲು, ಇದ್ದಷ್ಟು ಜಾಗದಲ್ಲಿ ನಡೆದಾಡಲು ಮತ್ತು ಪರಸ್ಪರ ಮಾತನಾಡಲು ಸಲಹೆ ನೀಡಿದ್ದಾರೆ. ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ದೃಶ್ಯಗಳು ಮಂಗಳವಾರ ಎಂಡೋಸ್ಕೋಪಿಕ್ ಕ್ಯಾಮೆರಾ ಮೂಲಕ ಹೊರಹೊಮ್ಮಿದ್ದವು.

ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಯು 11ನೇ ದಿನ ತಲುಪಿದೆ. ನವೆಂಬರ್ 12ರಂದು ಭೂಕುಸಿತದ ನಂತರ ಸುರಂಗವು ಕುಸಿದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ರಕ್ಷಣಾ ಕಾರ್ಯಗಳ ಅವಲೋಕನ ನಡೆಸಿದ್ದಾರೆ.

ಸಿಕ್ಕಿಬಿದ್ದವರನ್ನು ಪಾರು ಮಾಡಲು ರಕ್ಷಣಾ ಸುರಂಗವನ್ನು ಕೊರೆಯಲು ಆಡಳಿತ ಪ್ರಸ್ತುತ ಐದು ಅಂಶಗಳ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಅಂದಾಜಿನ ಪ್ರಕಾರ ಬೆಟ್ಟದ ಮೂರು ವಿಭಿನ್ನ ಬಿಂದುಗಳಿಂದ ಲಂಬ ಕೊರೆಯುವಿಕೆಯನ್ನು ಆರಂಭಿಸಲಾಗಿದೆ. ಇದಕ್ಕೆ ಸ್ಥಳವನ್ನು ಗುರುತಿಸಲಾಗಿದೆ. ಇನ್ನು 2-3 ದಿನಗಳಲ್ಲಿ ಸಿಕ್ಕಿಬಿದ್ದ ಜನರನ್ನು ತಲುಪಬಹುದು ಎಂಬ ಅಂದಾಜು ಇದೆ.

ಆದರೆ, ಮಧ್ಯೆ ಇರುವ ಬಂಡೆಗಳು ಕಾರ್ಯಾಚರಣೆಗೆ ಅಡೆತಡೆ ಉಂಟುಮಾಡುತ್ತಿವೆ. ತರಿಸಲಾಗಿರುವ ಎರಡು ದೈತ್ಯ ಆಗರ್‌ ಯಂತ್ರಗಳು ಕೂಡ ಬಂಡೆ ಸಿಕ್ಕಿದುದರಿಂದ ಕೆಲಸ ನಿಲ್ಲಿಸಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist