ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3 ನೇ ಮಹಡಿ ಮೇಲಿನಿಂದ ಬಿದ್ದು ಯುವಕ ಸಾವು!

Twitter
Facebook
LinkedIn
WhatsApp
Untitled

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರು ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ಜೂನ್ 30 ರಂದು ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ.ಆಚಾರಿಪಲ್ಕೆ ನಿವಾಸಿ ಯತೀಶ್ ಮೃತಪಟ್ಟ ದುರ್ದೈವಿ.

ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ.ವಸತಿ ನಿಲಯದ ಕೆಲ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಾಯವಾಗಿದ್ದು, ಸ್ಥಳದಲ್ಲಿ ಸಾಕಷ್ಟು ರಕ್ತ ಚೆಲ್ಲಿದೆ.

ಘಟನೆ ನಡೆದ ತಕ್ಷಣ ಮಿಲಾದುನ್ನಭಿ ಸಂಘದ ನುಸ್ರತ್ ಅಂಬ್ಯುಲೆನ್ಸ್ ಮೂಲಕ , ಕೇವಲ 16 ನಿಮಿಷಗಳಲ್ಲಿ ಚಾಲಕ ಸಮಾಜ ಸೇವಕ ಸಮಾದ್ ಕೈಕಂಬ ಅವರು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ… ತಲೆಗೆ ಗಂಭೀರವಾದ ಗಾಯವಗಿದ್ದರಿಂದ ಆತ ಸಾವನ್ನಪ್ಪಿದ ಬಗ್ಗೆ ವೈದ್ಯರು ದೃಡಪಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ