ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗುಜರಾತ್‌ನಲ್ಲಿ ದೋಣಿ ಮಗುಚಿ 14 ವಿದ್ಯಾರ್ಥಿಗಳು ಸೇರಿ 16 ಮಂದಿ ದುರ್ಮರಣ...!

Twitter
Facebook
LinkedIn
WhatsApp
ಗುಜರಾತ್‌ನಲ್ಲಿ ದೋಣಿ ಮಗುಚಿ 14 ವಿದ್ಯಾರ್ಥಿಗಳು ಸೇರಿ 16 ಮಂದಿ ದುರ್ಮರಣ...!

ಅಹಮದಾಬಾದ್‌: ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳು ಕೆರೆಯಲ್ಲಿ ವಿಹಾರಕ್ಕೆಂದು ಹೋಗಿದ್ದಾಗ ದೋಣಿ ಮಗುಚಿ 14 ವಿದ್ಯಾರ್ಥಿಗಳು ಸೇರಿದಂತೆ 16 ಮಂದಿ ದುರ್ಮಣರಕ್ಕೆ ಈಡಾದ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು. ದೋಣಿಯಕ್ಕಿದ್ದ ಇಬ್ಬರು ಶಿಕ್ಷಕರೂ ಮೃತಪಟ್ಟಿದ್ದು. ಕೆಲವರನ್ನು ರಕ್ಷಣಾ ಸಿಬ್ಬಂದಿಗಳು ರಕ್ಷಿಸಿ ದಡ ಸೇರಿಸಿದ್ದಾರೆ. ಇನ್ನೂ ಕಾಣೆಯಾದವರ ಹುಡುಕಾಟ ನಡೆಯುತ್ತಿತ್ತು. ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ, ಪ್ರಧಾನಿ ಸಹಿತ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿ ಕುಟುಂಬಗಳಿಗೆ ನೆರವು ಘೋಷಿಸಿದ್ಧಾರೆ.

ವಡೋದರಾ ನಗರದ ನ್ಯೂ ಸನ್‌ ರೈಸ್‌ ಎಂಬ ಶಾಲೆಯ 23 ವಿದ್ಯಾರ್ಥಿಗಳು ಮತ್ತು 4 ಮಂದಿ ಶಿಕ್ಷಕರು ಪ್ರವಾಸಕ್ಕೆಂದು ಆಗಮಿಸಿದ್ದರು. ಅವರೆಲ್ಲರೂ ವಡೋದರಾ ನಗರದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಂಜೆ ಹೊತ್ತಿಗೆ ವಡೋದರಾ ನಗರದಲ್ಲಿರುವ ಹರಣಿ ಕೆರೆಗೆ ಆಗಮಿಸಿದ್ದರು. ಈ ಕೆರೆಯಲ್ಲಿ ದೋಣಿ ವಿಹಾರ ಜನಪ್ರಿಯವಾಗಿದೆ.

ಕೆರೆಯಲ್ಲಿ ವಿಹಾರ ಮಾಡಲು ವಿದ್ಯಾರ್ಥಿಗಳು ಇಷ್ಟಪಟ್ಟಿದ್ದರಿಂದ ಅವರನ್ನು ದೋಣಿಯಲ್ಲಿ ಕರೆದೊಯ್ಯಲಾಗಿತ್ತು. ಆ ದೋಣಿಯಲ್ಲಿ 15 ಮಂದಿಯನ್ನು ಮಾತ್ರ ಕರೆದೊಯ್ಯಲು ಅವಕಾಶವಿತ್ತು. ಆದರೆ ಒಂದೇ ತಂಡದಲ್ಲಿ ಎಲ್ಲರೂ ಹೋದರಾಯಿತು ಎಂದು 27 ಮಂದಿಯನ್ನೂ ಕೂರಿಸಲಾಗಿತ್ತು. ಸ್ವಲ್ಪ ದೂರದಲ್ಲಿಯೇ ಸಾಗಿದ ದೋಣಿ ಭಾರ ತಾಳಲಾರದೇ ಮಗುಚಿತು. ಕೆರೆಯಲ್ಲಿ ನೀರಿನ ಸಣ್ಣ ಅಲೆಯೂ ಇದ್ದುದರಿಂದ ದೋಣಿ ಮಗುಚಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಕೆರೆ ಆಳವಾಗಿದ್ದರಿಂದ ಕೆಲವರು ಅದರಲ್ಲಿ ಮುಳುಗಿ ಮೃತಪಟ್ಟರು. 14 ಮಕ್ಕಳು ಹಾಗೂ ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ. ಕೆಲವು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಇನ್ನೂ ಕೆಲವರ ಹುಡುಕಾಟ ಮುಂದುವರಿದಿತ್ತು.

ಕೆರೆ ನಿರ್ವಹಿಸುವವರು ನೀಡಿದ ಮಾಹಿತಿ ಆಧರಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(NDRF), ಗುಜರಾತ್‌ ರಾಜ್ಯ ವಿಪತ್ತು ತಂಡ( SDRF), ಅಗ್ನಿ ಶಾಮಕ ದಳದ ತಂಡ, ನುರಿತ ಈಜುಗಾರರನ್ನು ಕರೆಯಿಸಲಾಯಿತು. ಏಕಕಾಲಕ್ಕೆ ಎಲ್ಲರೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರಿಂದ ಹೆಚ್ಚಿನ ಮಕ್ಕಳು ಬದುಕುಳಿದರು. ರಾತ್ರಿ ವೇಳೆಯೂ ಕಾರ್ಯಾಚರಣೆ ನಡೆದಿತ್ತು.

ಕೆರೆಯಲ್ಲಿ ದೋಣಿ ವಿಹಾರಕ್ಕೆ ಅಷ್ಟಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಯಾರೂ ಜೀವ ರಕ್ಷಕಾ ಜಾಕೆಟ್‌ ಅನ್ನು ಹಾಕಿಕೊಂಡಿರಲಿಲ್ಲ. ಶಿಕ್ಷಕರೂ ಕೂಡ ಹಾಗೆಯೇ ಬಂದಿದ್ದರು. ಇದರಿಂದ ಸಾವಿನ ಸಂಖ್ಯೆ ಅಧಿಕವಾಯಿತು ಎನ್ನಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗುಜರಾತ್‌ ರಾಜ್ಯಪಾಲ ಭೂಪೇಂದ್ರ ಪಟೇಲ್‌ ಸಹಿತ ಹಲವರು ಘಟನೆಗೆ ಸಂತಾಪ ಸೂಚಿಸಿದ್ದಾರೆ. ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.

ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ನಿರ್ಲಕ್ಷ್ಯ ವಹಿಸಿದ್ದ ಕೆರೆ ದೋಣಿ ವಿಹಾರ ಪಡೆದ ಗುತ್ತಿಗೆದಾರರ ವಿರುದ್ದ ಕ್ರಮ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist