ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

16ರ ಬಾಲೆಯನ್ನು ಮದುವೆಯಾದ ಮುದುಕ! ಸಂಚಲನ ಮೂಡಿಸಿದ ಅಮಾನವೀಯ ಘಟನೆ 

Twitter
Facebook
LinkedIn
WhatsApp
16ರ ಬಾಲೆಯನ್ನು ಮದುವೆಯಾದ ಮುದುಕ! ಸಂಚಲನ ಮೂಡಿಸಿದ ಅಮಾನವೀಯ ಘಟನೆ 

ಆಂಧ್ರಪ್ರದೇಶ: ಮಾಟ, ಮಂತ್ರದ ಹೆಸರಿನಲ್ಲಿ 16ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಈ ವಿಚಾರ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕೃಷ್ಣಾಪುರ ಗ್ರಾಮದಲ್ಲಿ ಸಂಚಲನ ಮೂಡಿಸಿದ್ದು, ಜಿಲ್ಲೆಯಾದ್ಯಂತ ಚರ್ಚೆಯಾಗುತ್ತಿದೆ.

ಮುದುಕನೊಬ್ಬ ಮಾಟ, ಮಂತ್ರದ ಹೆಸರಿನಲ್ಲಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿಕೊಂಡು ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ. ಇಂತಹ ಮೋಸದ ಹಾಗೂ ಅಮಾನವೀಯ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಈ ವಿಷಯ ಅಕ್ಕಪಕ್ಕದವರಿಗೆ ತಿಳಿದು ಪೊಲೀಸರ ಬಳಿ ಮಾಹಿತಿ ತಲುಪುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯ ಮುದುಕನೊಬ್ಬ ಅಪ್ರಾಪ್ತೆಯನ್ನು ಮದುವೆಯಾದ ವಿಚಾರ ಕೃಷ್ಣಾಪುರ ಗ್ರಾಮದಲ್ಲಿ ಸಂಚಲನ ಮೂಡಿಸಿದ್ದು, ಜಿಲ್ಲೆಯಾದ್ಯಂತ ಚರ್ಚೆಯಾಗುತ್ತಿದೆ.

ರಾಪ್ತಾಡು ಮಂಡಲದ ವ್ಯಕ್ತಿಯೊಬ್ಬರು ತಮ್ಮ ಪತ್ನಿಗೆ ಆರೋಗ್ಯ ಸರಿಯಿಲ್ಲ ಎಂದು ತನ್ನ ಮಗಳ ಸಹಿತ ಜಡಲ ಸ್ವಾಮಿ ಬಳಿ ಬಂದಿದ್ದಾರೆ. ಅದರಂತೆ ಆಕೆಗೆ ದೆವ್ವ ಹಿಡಿದಿದೆಯೆಂದು ನಿಗೂಢ ಪೂಜೆಗಳನ್ನು ಮಾಡಿದ ಜಡಲ ಸ್ವಾಮಿ, ತನ್ನ ಪೂಜೆಯಿಂದಲೇ ಆಕೆಯ ಕಾಯಿಲೆ ವಾಸಿಯಾಗಿದೆ ಎಂದು ನಂಬಿಸಿದ್ದಾನೆ. ಇದೇ ವೇಳೆ ಜಡಲ ಸ್ವಾಮಿಯ ಕಣ್ಣು ಆ ವ್ಯಕ್ತಿಯ ಮಗಳ ಮೇಲೆ ಬಿದ್ದಿದೆ. ಇಷ್ಟಕ್ಕೂ ಸುಮ್ಮನಾಗದ ಆತ ಬಾಲಕಿಯನ್ನ ಪುಸಲಾಯಿಸಿಕೊಂಡು ಮೂರು ತಿಂಗಳ ಹಿಂದೆ ಗುತ್ತು ಚಪ್ಪಡ ಅಲ್ಲದ ರಪಟು ಮಂಡಲದ ದೇವಸ್ಥಾನದಲ್ಲಿ ಮದುವೆಯಾಗಿದ್ದಾನೆ.

ಈ ವಿಷಯ ಬಾಲಕಿಯ ಅಕ್ಕ-ಪಕ್ಕದವರಿಗೆ ತಿಳಿದು ಐಸಿಡಿಎಸ್ ಪಿಡಿ ಶ್ರೀದೇವಿ ಅವರಿಗೆ ಕರೆ ಮಾಡಿ ಮಾಹಿತಿ ತಲುಪಿಸಿದ್ದಾರೆ. ಅದರಂತೆ ಐಸಿಡಿಎಸ್, ಸಿಡಿಪಿಒ ಧನಲಕ್ಷ್ಮಿ ಹಾಗೂ ರಾಪ್ತಾಡು ಎಸ್‌ಎಸ್‌ಐ ರಾಘವರೆಡ್ಡಿ ಗ್ರಾಮಕ್ಕೆ ತೆರಳಿ ತನಿಖೆ ಆರಂಭಿಸಿದರು. ಅಧಿಕಾರಿಗಳು ಫೀಲ್ಡಿಗಿಳಿದಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಜಡಲ ಸ್ವಾಮಿ ಪರಾರಿಯಾಗಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಐಸಿಡಿಎಸ್ ಅಧಿಕಾರಿಗಳು ಬಾಲಕಿಯನ್ನು ಅನಂತಪುರದ ಉಜ್ವಲಾ ಹೋಮ್‌ಗೆ ಸ್ಥಳಾಂತರಿಸಿದ್ದಾರೆ.

ಯಲ್ಲನೂರು ಮಂಡಲದ ಪಾತಪಾಲೆಂನ ಜಯಕೃಷ್ಣ ಅಲಿಯಾಸ್ ಜಡಲ ಸ್ವಾಮಿ (62) ಸಂಸಾರ ಸಹಿತ ಕೆಲ ಕಾಲದ ಹಿಂದೆ ಬುಕ್ಕಪಟ್ಟಣ ಮಂಡಲದ ಕೃಷ್ಣಾಪುರ ಗ್ರಾಮಕ್ಕೆ ವಲಸೆ ಬಂದು ನೆಲೆಸಿದ್ದನು. ಇಲ್ಲಿ ಕ್ಷುದ್ರ ಪೂಜೆ ಸಲ್ಲಿಸಿ ಪ್ರಸಿದ್ಧನಾಗಿದ್ದ ಜಡಲ ಸ್ವಾಮಿ, ವೈಸಿಪಿ ಗ್ರಾಮ ಸಮಿತಿ ಅಧ್ಯಕ್ಷನೂ ಆಗಿದ್ದಾನೆ. ಈತನಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದು, ಓರ್ವಳಿಗೆ ಮದುವೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist