ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

16ರ ಬಾಲೆಯನ್ನು ಮದುವೆಯಾದ ಮುದುಕ! ಸಂಚಲನ ಮೂಡಿಸಿದ ಅಮಾನವೀಯ ಘಟನೆ 

Twitter
Facebook
LinkedIn
WhatsApp
16ರ ಬಾಲೆಯನ್ನು ಮದುವೆಯಾದ ಮುದುಕ! ಸಂಚಲನ ಮೂಡಿಸಿದ ಅಮಾನವೀಯ ಘಟನೆ 

ಆಂಧ್ರಪ್ರದೇಶ: ಮಾಟ, ಮಂತ್ರದ ಹೆಸರಿನಲ್ಲಿ 16ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಈ ವಿಚಾರ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕೃಷ್ಣಾಪುರ ಗ್ರಾಮದಲ್ಲಿ ಸಂಚಲನ ಮೂಡಿಸಿದ್ದು, ಜಿಲ್ಲೆಯಾದ್ಯಂತ ಚರ್ಚೆಯಾಗುತ್ತಿದೆ.

ಮುದುಕನೊಬ್ಬ ಮಾಟ, ಮಂತ್ರದ ಹೆಸರಿನಲ್ಲಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿಕೊಂಡು ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ. ಇಂತಹ ಮೋಸದ ಹಾಗೂ ಅಮಾನವೀಯ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಈ ವಿಷಯ ಅಕ್ಕಪಕ್ಕದವರಿಗೆ ತಿಳಿದು ಪೊಲೀಸರ ಬಳಿ ಮಾಹಿತಿ ತಲುಪುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯ ಮುದುಕನೊಬ್ಬ ಅಪ್ರಾಪ್ತೆಯನ್ನು ಮದುವೆಯಾದ ವಿಚಾರ ಕೃಷ್ಣಾಪುರ ಗ್ರಾಮದಲ್ಲಿ ಸಂಚಲನ ಮೂಡಿಸಿದ್ದು, ಜಿಲ್ಲೆಯಾದ್ಯಂತ ಚರ್ಚೆಯಾಗುತ್ತಿದೆ.

ರಾಪ್ತಾಡು ಮಂಡಲದ ವ್ಯಕ್ತಿಯೊಬ್ಬರು ತಮ್ಮ ಪತ್ನಿಗೆ ಆರೋಗ್ಯ ಸರಿಯಿಲ್ಲ ಎಂದು ತನ್ನ ಮಗಳ ಸಹಿತ ಜಡಲ ಸ್ವಾಮಿ ಬಳಿ ಬಂದಿದ್ದಾರೆ. ಅದರಂತೆ ಆಕೆಗೆ ದೆವ್ವ ಹಿಡಿದಿದೆಯೆಂದು ನಿಗೂಢ ಪೂಜೆಗಳನ್ನು ಮಾಡಿದ ಜಡಲ ಸ್ವಾಮಿ, ತನ್ನ ಪೂಜೆಯಿಂದಲೇ ಆಕೆಯ ಕಾಯಿಲೆ ವಾಸಿಯಾಗಿದೆ ಎಂದು ನಂಬಿಸಿದ್ದಾನೆ. ಇದೇ ವೇಳೆ ಜಡಲ ಸ್ವಾಮಿಯ ಕಣ್ಣು ಆ ವ್ಯಕ್ತಿಯ ಮಗಳ ಮೇಲೆ ಬಿದ್ದಿದೆ. ಇಷ್ಟಕ್ಕೂ ಸುಮ್ಮನಾಗದ ಆತ ಬಾಲಕಿಯನ್ನ ಪುಸಲಾಯಿಸಿಕೊಂಡು ಮೂರು ತಿಂಗಳ ಹಿಂದೆ ಗುತ್ತು ಚಪ್ಪಡ ಅಲ್ಲದ ರಪಟು ಮಂಡಲದ ದೇವಸ್ಥಾನದಲ್ಲಿ ಮದುವೆಯಾಗಿದ್ದಾನೆ.

ಈ ವಿಷಯ ಬಾಲಕಿಯ ಅಕ್ಕ-ಪಕ್ಕದವರಿಗೆ ತಿಳಿದು ಐಸಿಡಿಎಸ್ ಪಿಡಿ ಶ್ರೀದೇವಿ ಅವರಿಗೆ ಕರೆ ಮಾಡಿ ಮಾಹಿತಿ ತಲುಪಿಸಿದ್ದಾರೆ. ಅದರಂತೆ ಐಸಿಡಿಎಸ್, ಸಿಡಿಪಿಒ ಧನಲಕ್ಷ್ಮಿ ಹಾಗೂ ರಾಪ್ತಾಡು ಎಸ್‌ಎಸ್‌ಐ ರಾಘವರೆಡ್ಡಿ ಗ್ರಾಮಕ್ಕೆ ತೆರಳಿ ತನಿಖೆ ಆರಂಭಿಸಿದರು. ಅಧಿಕಾರಿಗಳು ಫೀಲ್ಡಿಗಿಳಿದಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಜಡಲ ಸ್ವಾಮಿ ಪರಾರಿಯಾಗಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಐಸಿಡಿಎಸ್ ಅಧಿಕಾರಿಗಳು ಬಾಲಕಿಯನ್ನು ಅನಂತಪುರದ ಉಜ್ವಲಾ ಹೋಮ್‌ಗೆ ಸ್ಥಳಾಂತರಿಸಿದ್ದಾರೆ.

ಯಲ್ಲನೂರು ಮಂಡಲದ ಪಾತಪಾಲೆಂನ ಜಯಕೃಷ್ಣ ಅಲಿಯಾಸ್ ಜಡಲ ಸ್ವಾಮಿ (62) ಸಂಸಾರ ಸಹಿತ ಕೆಲ ಕಾಲದ ಹಿಂದೆ ಬುಕ್ಕಪಟ್ಟಣ ಮಂಡಲದ ಕೃಷ್ಣಾಪುರ ಗ್ರಾಮಕ್ಕೆ ವಲಸೆ ಬಂದು ನೆಲೆಸಿದ್ದನು. ಇಲ್ಲಿ ಕ್ಷುದ್ರ ಪೂಜೆ ಸಲ್ಲಿಸಿ ಪ್ರಸಿದ್ಧನಾಗಿದ್ದ ಜಡಲ ಸ್ವಾಮಿ, ವೈಸಿಪಿ ಗ್ರಾಮ ಸಮಿತಿ ಅಧ್ಯಕ್ಷನೂ ಆಗಿದ್ದಾನೆ. ಈತನಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದು, ಓರ್ವಳಿಗೆ ಮದುವೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ