ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಟೀಂ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಹರ್ಮನ್ ಅವರ ಐದನೇ ಶತಕವಾಗಿದ್ದು, ಆರಂಭದಿಂದಲೂ ಅಬ್ಬರಿಸಿದ ನಾಯಕಿ 18 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 143 ರನ್ ಚಚ್ಚಿದರು.
ದಿ ಸ್ಪಿಟ್ಫೈರ್ ಗ್ರೌಂಡ್ ಸೇಂಟ್ ಲಾರೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ವನಿತ ತಂಡಗಳ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ (Harmanpreet Kaur) ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಹರ್ಮನ್ ಅವರ ಐದನೇ ಶತಕವಾಗಿದ್ದು, ಆರಂಭದಿಂದಲೂ ಅಬ್ಬರಿಸಿದ ನಾಯಕಿ 18 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 143 ರನ್ ಚಚ್ಚಿದರು. ಭಾಟಿಯಾ ವಿಕೆಟ್ ಬಳಿಕ ಮೈದಾನಕ್ಕಿಳಿದ ನಾಯಕಿ ಹರ್ಮನ್ಪ್ರೀತ್ ಕೌರ್, ಮೊದಲು ಮಂಧಾನ, ಬಳಿಕ ಹರ್ಲೀನ್ ಡಿಯೋಲ್ ಜೊತೆಗಿನ ಉತ್ತಮ ಜೊತೆಯಾಟದೊಂದಿಗೆ ತಂಡವನ್ನು ಬೃಹತ್ ಸ್ಕೋರ್ನತ್ತ ಕೊಂಡೊಯ್ದರು. ಈ ಮೂವರ ಅದ್ಭುತ ಇನ್ನಿಂಗ್ಸ್ನ ಆಧಾರದ ಮೇಲೆ ಟೀಂ ಇಂಡಿಯಾ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ ವನಿತಾ ತಂಡಕ್ಕೆ ಬರೋಬ್ಬರಿ 334 ರನ್ ಟಾರ್ಗೆಟ್ ನೀಡಿದೆ.
ಆರಂಭಿಕರಾಗಿ ಕಣಕ್ಕಿಳಿದಿದ್ದ ಶೇಫಾಲಿ ವರ್ಮಾ ಕೇವಲ 8 ರನ್ ಗಳಿಸಿ ಕೇಟ್ ಕ್ರಾಸ್ ಬೌಲಿಂಗ್ನಲ್ಲಿ ಕ್ಲೀನ್ ಬೌಲ್ಡ್ ಆದರು. ಈ ಮೂಲಕ ಟೀಂ ಇಂಡಿಯಾಗೆ ಆಂಗ್ಲ ವನಿತೆಯರು ಆರಂಭಿಕ ಆಘಾತ ನೀಡಿದಿರು. ಆ ಬಳಿಕ ಮತ್ತೊರ್ವ ಆರಂಭಿಕ ಆಟಗಾರ್ತಿ ಸ್ಮೃತಿ ಜೊತೆಗೂಡಿದ ಯಾಸ್ತಿಕ ಭಾಟಿಯಾ ತಂಡದ ಸ್ಕೋರ್ ಅನ್ನು ಅರ್ಧಶತಕ ದಾಟಿಸಿದರು. ಒಂದು ಹಂತದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಈ ಜೋಡಿಯ ಜೊತೆಯಾಟವನ್ನು ಆಂಗ್ಲ ಬೌಲರ್ ಚಾರ್ಲಿ ಡೀನ್ ಮುರಿಯುವಲ್ಲಿ ಯಶಸ್ವಿಯಾದರು. 26 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಯಾಸ್ತಿಕ ಬೌಲರ್ಗೆ ಕ್ಯಾಚಿತ್ತು ನಿರ್ಗಮಿಸಿದರು.
ಆ ಬಳಿಕ ಹರ್ಮನ್ ಜೊತೆಗೂಡಿದ ಹರ್ಲೀನ್ ಡಿಯೋಲ್ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದರು. ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವ ಹಾದಿ ಹಿಡಿದಿದ್ದ ಹರ್ಲೀನ್ ಡಿಯೋಲ್, 58 ರನ್ ಗಳಿದ್ದಾಗ ಕ್ಯಾಚಿತ್ತು ನಿರ್ಗಮಿಸಿದರು. ಆದರೆ ಒಂದು ಬದಿಯಲ್ಲಿ ಭದ್ರವಾಗಿ ಬೇರೂರಿದ್ದ ನಾಯಕಿ ತನ್ನ ನೈಜ ಆಟವನ್ನು ಮುಂದುವರೆಸಿದರು.
ಕೊನೆಯ ಹಂತದಲ್ಲಿ ನಾಯಕಿಗೆ ಉತ್ತಮ ಸಾಥ್ ನೀಡಿದ ಪೂಜಾ 18 ರನ್ ಸಿಡಿಸಿದರೆ, ದೀಪ್ತಿ ಶರ್ಮಾ ಕೂಡ 2 ಬೌಂಡರಿ ಸಹಿತ 15 ರನ್ ಚಚ್ಚಿದರು. ಈ ಮೂಲಕ ಭಾರತ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು 334 ರನ್ ಟಾರ್ಗೆಟ್ ನೀಡಿತು. ಈಗಾಗಲೇ ಸರಣಿಯಲ್ಲಿ ಮೊದಲನೇ ಪಂದ್ಯ ಗೆದ್ದಿರುವ ಟೀಂ ಇಂಡಿಯಾ 2ನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಆಂಗ್ಲರ ನಾಡಿನಲ್ಲಿ ಬರೋಬ್ಬರಿ 23 ವರ್ಷಗಳ ಬಳಿಕ ಏಕದಿನ ಸರಣಿ ಗೆದ್ದ ದಾಖಲೆ ಮಾಡುವ ಹೊಸ್ತಿಲಿನಲ್ಲಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?