ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ!!

Twitter
Facebook
LinkedIn
WhatsApp
1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ!!

1988ರ ರಸ್ತೆ ಜಗಳ ಪ್ರಕರಣದಲ್ಲಿ(1988 road rage case) ಕ್ರಿಕೆಟಿಗ,ರಾಜಕಾರಣಿ ನವಜೋತ್ ಸಿಂಗ್ (Navjot Singh Sidhu)  ಅವರಿಗೆ ಸುಪ್ರೀಂಕೋರ್ಟ್ (Supreme Court) ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಸಾವನ್ನಪ್ಪಿದ 1988 ರ ರಸ್ತೆ  ಜಗಳ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅವರನ್ನು ದೋಷಮುಕ್ತಗೊಳಿಸಿದ ಮೇ 2018 ರ ಆದೇಶವನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಈ ಆದೇಶದಂತೆ ಪಂಜಾಬ್ ಪೊಲೀಸರು ಸಿಧು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ಈ ಹಿಂದೆ ಸಿಧುಗೆ ₹1000  ದಂಡ ವಿಧಿಸಿ ಬಿಡುಗಡೆಗೊಳಿಸಲಾಗಿತ್ತು. ಇದೀಗ ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ ಸಿಧುಗೆ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಮೇ 15, 2018 ರಂದು ಸುಪ್ರೀಂ ಕೋರ್ಟ್ ಸಿಧುಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಪಂಜಾಬ್ ಮತ್ತು ಹರ್ಯಾಣ  ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿತು, ಆದರೆ ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ ಆರೋಪದಲ್ಲಿ ಅವರನ್ನು ತಪ್ಪಿತಸ್ಥರೆಂದು ಹೇಳಿತ್ತು. 65 ವರ್ಷ ವಯಸ್ಸಿನ ವ್ಯಕ್ತಿಗೆ “ಸ್ವಯಂಪ್ರೇರಿತವಾಗಿ ಹಾನಿಯನ್ನುಂಟುಮಾಡುವ” ಪ್ರಕರಣದಲ್ಲಿ ನವಜೋತ್ ಸಿಧು ತಪ್ಪಿತಸ್ಥರೆಂದು ಕಂಡುಬಂದರೂ, ಸುಪ್ರೀಂಕೋರ್ಟ್ ಅವರಿಗೆ ಜೈಲು ಶಿಕ್ಷೆಯನ್ನು  ವಿಧಿಸದೆ ₹1,000 ದಂಡವನ್ನು ವಿಧಿಸಿತ್ತು. ನಂತರ ಸೆಪ್ಟೆಂಬರ್ 2018 ರಲ್ಲಿ, ಮೃತರ ಕುಟುಂಬ ಸದಸ್ಯರು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದ್ದು, ಸಿಧುಗೆ ನೋಟಿಸ್ ಜಾರಿ ಮಾಡಿತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ