ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

20ರ ಹುಡುಗಿಯೆಂದು ಯುವಕನಿಗೆ ವಂಚಿಸಿದ ತುಮಕೂರಿನ 50ರ ಆಂಟಿ: ಮದುವೆ ಆಮಂತ್ರಣ ಪತ್ರಿಕೆ ಊರೆಲ್ಲಾ ಹಂಚಿದ ಮೇಲೆ ಬಯಲಾಯ್ತು ರಹಸ್ಯ

Twitter
Facebook
LinkedIn
WhatsApp
20ರ ಹುಡುಗಿಯೆಂದು ಯುವಕನಿಗೆ ವಂಚಿಸಿದ ತುಮಕೂರಿನ 50ರ ಆಂಟಿ: ಮದುವೆ ಆಮಂತ್ರಣ ಪತ್ರಿಕೆ ಊರೆಲ್ಲಾ ಹಂಚಿದ ಮೇಲೆ ಬಯಲಾಯ್ತು ರಹಸ್ಯ

ಮಂಡ್ಯ: ನಾನು 20ರ ಯುವತಿಯೆಂದು ತುಮಕೂರಿನ 50 ರ ಆಂಟಿಯೊಬ್ಬಳು ಯುವಕನೊಬ್ಬನಿಗೆ ಪಂಗನಾಮ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. 20 ರ ಯುವತಿಯ ಕನಸು ಕಂಡ ಯುವಕ ಬರೋಬ್ಬರಿ 3 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗ್ರಾಮವೊಂದರ ಯುವಕನಿಗೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗ್ರಾಮವೊಂದರ ಮಹಿಳೆ ವಂಚಿಸಿದ್ದಾಳೆ. ಕಳೆದ ಮೂರು ತಿಂಗಳ ಹಿಂದೆ ಯುವಕ ಫೇಸ್‍ಬುಕ್‍ನಲ್ಲಿ ಒಂದು ಸುಂದರವಾದ ಡಿಪಿ ಇದ್ದ ಹುಡುಗಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಾನೆ. ನಂತರ ಆಕೆಯೊಂದಿಗೆ ಚಾಟ್ ಸಹ ಮಾಡಿದ್ದಾನೆ. ಈ ವೇಳೆ ಆಕೆ ನನಗೆ 20 ವರ್ಷ ಎಂದು ಹೇಳಿ ಆತನ್ನು ಚೆನ್ನಾಗಿ ಯಾಮಾರಿಸಿದ್ದಾಳೆ. ನಂತರ ಆಕೆಯ ಮೇಲೆ ಪ್ರೀತಿ ಹುಟ್ಟಿ ಯುವಕ ಲವ್ ಪ್ರಪೋಸ್ ಮಾಡಿದ್ದಾನೆ. ಆಂಟಿ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾಳೆ.

ಬಳಿಕ ಇಬ್ಬರು ಫೋನ್‍ನಲ್ಲಿ ಸಂಭಾಷಣೆ ನಡೆಸಲು ಆರಂಭಿಸಿದ್ದಾರೆ. ಆಂಟಿ ತಾನು 20 ರ ಹುಡುಗಿ ಎಂಬಂತೆಯೇ ನಡೆದುಕೊಂಡಿದ್ದಾಳೆ. ಬಳಿಕ ಮನೆಯಲ್ಲಿ ಕಷ್ಟ ಎಂದು ಹೇಳಿ ಈತನಿಂದ ಸುಮಾರು 3 ಲಕ್ಷ ರೂಪಾಯಿವರೆಗೆ ವಸೂಲಿ ಮಾಡಿದ್ದಾಳೆ. ಅಲ್ಲದೇ ತಮ್ಮ ಮನೆಗೆ 50 ಸಾವಿರ ರೂಪಾಯಿವರೆಗೆ ದಿನಸಿಯನ್ನು ತರಿಸಿಕೊಂಡಿದ್ದಾಳೆ

ಇಷ್ಟೆಲ್ಲಾ ಆದ ನಂತರ ಆಂಟಿಗೆ ಯುವಕ ಮದುವೆ ಆಗಿ ಬಿಡೋಣಾ ಎಂದು ಹೇಳಿದ್ದಾನೆ. ಅದಕ್ಕೆ ಆಕೆ ಈಗಲೇ ಬೇಡಾ ಸ್ವಲ್ಪ ದಿನ ಆಗಲಿ ಎಂದಾಗ, ಇಲ್ಲ ಮದುವೆಯಾಗಲೇಬೇಕು ಎಂದು ಯುವಕ ಹಠ ಹಿಡಿದಿದ್ದಾನೆ. ಇದಕ್ಕೆ ಒಪ್ಪಿ ನಮ್ಮ ದೊಡ್ಡಮ್ಮರನ್ನು ನಿಮ್ಮನೆಗೆ ಕಳುಹಿಸುತ್ತೇನೆ ಅಂತಾ ಹೇಳಿದ್ದಾಳೆ. ಇಲ್ಲ ಮೊದಲು ಗಂಡಿನ ಕಡೆಯವರು ಬರಬೇಕು ನಾವೇ ಬರುತ್ತೇವೆ ಎಂದು ಯುವಕ ಹೇಳಿದ್ದಾನೆ. ನಂತರ ನಮ್ಮ ಚಿಕ್ಕಪ್ಪನಿಗೆ ಈ ಮದುವೆ ಇಷ್ಟ ಇಲ್ಲ ಎಂದು ಜಗಳ ಮಾಡುತ್ತಿದ್ದಾರೆ ಎಂದು ಆಕೆ ತಿಳಿಸಿದಾಗ, ಸರಿ ದೊಡ್ಡಮ್ಮಳನ್ನು ಕಳುಹಿಸು ಎಂದು ಯುವಕ ಹೇಳಿದ್ದಾನೆ.

ಕೊನೆಗೆ ಆ 50 ವರ್ಷದ ಆಂಟಿಯೇ ನಾಗಮಂಗಲ ತಾಲೂಕಿನಲ್ಲಿರುವ ಯುವಕನ ಮನೆಗೆ ಹೋಗಿ ಮದುವೆ ಮಾತುಕತೆ ನಡೆಸಿದ್ದಾಳೆ. ಈ ವೇಳೆ ಆಕೆ ಶಾಸ್ತ್ರ ಏನು ಬೇಡಾ ನಮ್ಮ ಬಾವ ಜಗಳ ಮಾಡುತ್ತಿದ್ದಾರೆ. ಇಲ್ಲೇ ಎಲ್ಲಾದರೂ ಮದುವೆ ಮಾಡಿಬಿಡೋಣಾ ಎಂದಿದ್ದಾಳೆ. ಇದಕ್ಕೆ ಒಪ್ಪಿದ ಯುವಕನ ಪೋಷಕರು ಹಾಗೂ ಯುವಕ ಚುಂಚನಗಿರಿಯ ಮುಳಕಟ್ಟಮ್ಮ ದೇವಸ್ಥಾನದಲ್ಲಿ ಮದುವೆ ಫಿಕ್ಸ್ ಮಾಡಿದ್ದಾರೆ. ಬಳಿಕ ಯುವಕನ ಮನೆಯವರು ಮದುವೆ ಆಮಂತ್ರಣ ಪತ್ರಿಕೆಯನ್ನು ಪ್ರಿಂಟ್ ಮಾಡಿಸಿ ಸಂಬಂಧಿಕರಿಗೆಲ್ಲಾ ಹಂಚಿದ್ದಾರೆ. ಇದಾದ ಬಳಿಕ ಯುವಕ ಫೋನ್ ಮಾಡಿ ಮಾತಾಡುವಾಗ ನಿನ್ನ ನೋಡಬೇಕು. ಬಟ್ಟೆ ತೆಗೆದುಕೊಂಡು ಬರೋಣಾ ಎಂದು ಕರೆದಿದ್ದಾನೆ. ಇದಕ್ಕೆ ಆಕೆ ನಿರಾಕರಿಸಿದ್ದಾಳೆ.

ನಂತರ ಆಕೆಯ ವರ್ತನೆ ಬಗ್ಗೆ ಅನುಮಾನಗೊಂಡ ಯುವಕ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪೊಲೀಸರು ಆಕೆಯನ್ನು ಕರೆದು ವಿಚಾರಣೆ ನಡೆಸಿದಾಗ ಚಾಲಾಕಿ ಆಂಟಿ ನನ್ನ ಸಾಕು ಮಗಳನ್ನು ಯಾರೋ ಕಿಡ್ನಾಪ್ ಮಾಡಿದ್ದಾರೆ ಎಂದು ಮೊಸಳೆ ಕಣ್ಣೀರು ಹಾಕಿ ಹೈಡ್ರಾಮಾ ಸೃಷ್ಟಿಸಿದ್ದಾಳೆ. ಈ ವೇಳೆ ಮಹಿಳಾ ಪೇದೆ ಈಕೆಯ ಕೈಯಲ್ಲಿ ಒಂದು ಮೊಬೈಲ್ ಮತ್ತು ಬ್ಲೌಸ್‍ನಲ್ಲಿದ್ದ ಒಂದು ಮೊಬೈಲ್‍ನ್ನು ಗಮನಿಸಿದ್ದಾರೆ. ಕೊನೆಗೆ ಒಳಗಡೆ ಇದ್ದ ಮೊಬೈಲ್‍ನ್ನು ತೆಗೆದು ನೋಡಿದಾದ ಅದರಲ್ಲಿ ಕಾಲ್ ಡಿಟೈಲ್ಸ್, ಮೆಸೇಜ್ ಎಲ್ಲವನ್ನು ನೋಡಿ ಗಾಬರಿಗೊಂಡ ಪೊಲೀಸರು ಆಕೆಯ ವಿಚಾರಣೆ ನಡೆಸಿದಾಗ, ಈ ಆಂಟಿಯೇ ಆ ಯುವಕನಿಗೆ ಮೋಸ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ಬಳಿಕ ಮಹಿಳೆಗೆ ಪೊಲೀಸರು ಎಚ್ಚರಿಕೆ ನೀಡಿ, ಯುವಕ ನೀಡಿದ ಹಣವನ್ನು ವಾಪಸ್ ನೀಡುವಂತೆ ಸೂಚಿಸಿದ್ದಾರೆ. ಜೊತೆಗೆ ಯುವಕನಿಗೆ ಬೈದು ಬುದ್ಧಿವಾದ ಹೇಳಿದ್ದಾರೆ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ