ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

Twitter
Facebook
LinkedIn
WhatsApp
200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

ಕನ್ನಡದ ವಿಕ್ರಾಂತ್ ರೋಣ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ, ಬಾಲಿವುಡ್ ನಟಿ ನೋರಾ ಫತೇಹಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಇಬ್ಬರೂ ನಟಿಯರು ಸುಕೇಶ್ ಚಂದ್ರಶೇಖರ್ ವಿರುದ್ಧದದ 200 ಕೋಟಿ ವಂಚನೆ ಪ್ರಕರಣದ ಆರೋಪಿಗಳಾಗಿದ್ದಾರೆ ಎನ್ನುವುದು ವಿಶೇಷ. ಇದೇ ಕಾರಣಕ್ಕಾಗಿಯೇ ಜಾಕ್ವೆಲಿನ್ ಮೇಲೆ ನೋರಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸುಕೇಶ್ ವಂಚನೆ ಪ್ರಕರಣದಲ್ಲಿ ಈ ನಟಿಯರ ಹೆಸರು ಕೇಳಿ ಬಂದಿತ್ತು. ಜಾರಿ ನಿರ್ದೇಶನಾಲಯ ಕೂಡ ಇಬ್ಬರನ್ನೂ ಕರೆಯಿಸಿ ವಿಚಾರಣೆಗೆ ಒಳಪಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋರಾ ಫತೇಹಿ ವಿರುದ್ಧ ಜಾಕ್ವೆಲಿನ್ ಮಾನಹಾನಿ ಆಗುವಂತಹ ಮತ್ತು ದುರುದ್ದೇಶಪೂರಿತ ಕಾರಣಗಳನ್ನು ನೀಡುತ್ತಿದ್ದಾರಂತೆ. ಅದರಿಂದಾಗಿ ತಮಗೆ ಮಾನ ಹಾನಿ ಆಗುತ್ತಿದೆ ಎಂದು ನೋರಾ ಆರೋಪಿಸಿದ್ದಾರೆ. 

ಈ ಇಬ್ಬರೂ ನಟಿಯರು ಮೂಲತಃ ವಿದೇಶಿಗರಾಗಿದ್ದು, ಬಾಲಿವುಡ್ ನಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಇವರು ಸುಕೇಶ್ ಸಂಪರ್ಕಕ್ಕೂ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಲವು ಬಾರಿ ಈ ನಟಿಯರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗಾಗಿ ಕರೆದಿದೆ. ಆದರೆ, ಈ ಕೇಸ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ನಟಿಯರು ಹೇಳಿಕೆ ಕೊಡುತ್ತಲೇ ಬಂದಿದ್ದಾರೆ. ಸುಕೇಶ್ ತಮಗೆ ನೇರವಾಗಿ ಪರಿಚಯವೇ ಇಲ್ಲವೆಂದು ನೋರಾ ಹೇಳಿದ್ದರೆ, ಅವನಿಂದ ಯಾವುದೇ ಉಡುಗೊರೆ ಪಡೆದಿಲ್ಲ ಎಂದು ಜಾಕ್ವೆಲಿನ್ ವಾದಿಸಿದ್ದಾರೆ.

ಈ ಇಬ್ಬರೂ ನಟಿಯರು ಏನೇ ಹೇಳಿದರೂ, ಈಗಾಗಲೇ ಕೋರ್ಟ್ ಕಟಕಟೆಯಲ್ಲಿ ನಿಂತು ಬಂದಿದ್ದಾರೆ. ಜಾರಿ ನಿರ್ದೇಶನಾಲಯವು ಇಬ್ಬರ ಮೇಲೂ ಗುರುತರ ಆರೋಪ ಮಾಡಿ ಜಾರ್ಜ್ ಶೀಟ್ ಕೂಡ ಸಲ್ಲಿಸಲಾಗಿದೆ. ನೂರಾರು ಕೋಟಿಯ ವಂಚನೆಯ ಪ್ರಕರಣ ಇದಾಗಿದ್ದರಿಂದ, ಗಂಭೀರವಾಗಿ ಈ ಪ್ರಕರಣವನ್ನು ತಗೆದುಕೊಳ್ಳಲಾಗಿದೆ. ಇಬ್ಬರೂ ಇಕ್ಕಟ್ಟಿಗೆ ಸಿಲುಕಿದ್ದರೂ, ಒಬ್ಬರ ಮೇಲೆ ಒಬ್ಬರು ಆರೋಪ ಮಾಡಿ, ಬೇರೆ ಕಾರಣಗಳಿಂದಾಗಿ ಮತ್ತೆ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ