ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಲರಾ ಭೀತಿಯಲ್ಲಿ ವಲಸೆ ಹೋಗುತ್ತಿದ್ದ ಹಡಗು ಮುಳುಗಿ 94 ಜನ ದುರ್ಮರಣ; ಸಮುದ್ರ ತೀರದಲ್ಲಿ ಶವಗಳ ರಾಶಿ.!

Twitter
Facebook
LinkedIn
WhatsApp
ಕಾಲರಾ ಭೀತಿಯಲ್ಲಿ ವಲಸೆ ಹೋಗುತ್ತಿದ್ದ ಹಡಗು ಮುಳುಗಿ 94 ಜನ ದುರ್ಮರಣ; ಸಮುದ್ರ ತೀರದಲ್ಲಿ ಶವಗಳ ರಾಶಿ.!

ಮಾಪುಟೊ: ಕರ್ನಾಟಕದಲ್ಲಿ ಕಾಲರಾ ಭೀತಿ ಎದುರಾಗಿದೆ. ಬೆಂಗಳೂರಿನ ಹಾಸ್ಟೆಲ್‌ಗಳಲ್ಲಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ರಾಜ್ಯಾದ್ಯಂತ ಹಲವು ಕಾಲರಾ ಪ್ರಕರಣಗಳು (Cholera Outbreak) ಕೂಡ ದಾಖಲಾಗಿವೆ. ಇದರ ಬೆನ್ನಲ್ಲೇ, ಮೊಜಾಂಬಿಕ್‌ (Mozambique) ದೇಶದಲ್ಲಿ ಕಾಲರಾ ಭೀತಿಯು 94 ಜನರ ಪ್ರಾಣವನ್ನೇ ತೆಗೆದಿದೆ. ಹೌದು, ಕಾಲರಾ ಭೀತಿಯಿಂದಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಹಡಗು ಮುಳುಗಿದ್ದು (Boat Captized), 94 ಜನ ಮೃತಪಟ್ಟಿದ್ದಾರೆ. ಇನ್ನೂ 26 ಜನ ನಾಪತ್ತೆಯಾಗಿದ್ದಾರೆ.

ಹೌದು, ಮೊಜಾಂಬಿಕ್‌ನ ಉತ್ತರ ಕರಾವಳಿ ಭಾಗದಲ್ಲಿ 130 ಜನ ಪ್ರಯಾಣಿಸುತ್ತಿದ್ದ ಹಡಗು ಮುಳುಗಿದೆ. ಇದುವರೆಗೆ 94 ಶವಗಳು ಪತ್ತೆಯಾಗಿವೆ. ಉಳಿದ 26 ಜನರ ಶವಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಂಪುಲ ಪ್ರಾಂತ್ಯದ ಲುಂಗಾ ಪ್ರದೇಶದಿಂದ ಮೊಜಾಂಬಿಕ್‌ ದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ಮೊಜಾಂಬಿಕ್‌ ಸಾಗರ ಸಾರಿಗೆ ಇಲಾಖೆ (INTRASMAR) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂಬುದಾಗಿ ಬಿಬಿಸಿ ವರದಿ ಮಾಡಿದೆ.

ಹಡಗು ಮುಳುಗಲು ಕಾರಣವೇನು?

ಹಡಗಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರು ತೆರಳುತ್ತಿದ್ದುದೇ ಅದು ಮುಳುಗಲು ಕಾರಣ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹಡಗಿನಲ್ಲಿ 130 ಪ್ರಯಾಣಿಕರು ತೆರಳುತ್ತಿದ್ದರು. ಅವರ ಭಾರಿ ಪ್ರಮಾಣದ ಬ್ಯಾಗ್‌ಗಳು, ವಸ್ತುಗಳು, ಸಲಕರಣೆಗಳನ್ನು ಹಡಗಿನಲ್ಲಿ ತುಂಬಲಾಗಿತ್ತು. ಅತಿಯಾದ ಭಾರ ತಾಳದೆ ಹಡಗು ಮುಳುಗಿದೆ ಎಂದು ಮಾಹಿತಿ ನೀಡಿದ್ದಾರೆ. ಮೊಜಾಂಬಿಕ್‌ ಸಮುದ್ರದ ತೀರದಲ್ಲಿ ಪ್ರಯಾಣಿಕರ ಶವಗಳ ರಾಶಿಯ ವಿಡಿಯೊ ಕೂಡ ಹರಿದಾಡಿದ್ದು, ದೃಶ್ಯವು ಮನಕಲಕುವಂತಿದೆ.

ಎಲ್ಲೆಡೆ ಕಾಲರಾ ಭೀತಿ, ವಲಸೆ ಜಾಸ್ತಿ

ದಕ್ಷಿಣ ಆಫ್ರಿಕಾದ ಮೊಜಾಂಬಿಕ್‌ ಸೇರಿ ಹಲವು ದೇಶಗಳಲ್ಲಿ ಇತ್ತೀಚೆಗೆ ಕಾಲರಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದರಿಂದಾಗಿ ಜನರು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳುವ, ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗುವುದು ಸಾಮಾನ್ಯ ಎಂಬಂತಾಗಿದೆ. ಆದರೆ, ಹಡಗಿನಲ್ಲಿ ತೆರಳುವಾಗ ಹೆಚ್ಚಿನ ಪ್ರಯಾಣಿಕರನ್ನು ಕೂರಿಸಿಕೊಳ್ಳುವುದು, ನೋಂದಣಿ ಮಾಡಿಕೊಳ್ಳದ ಹಡಗಿನಲ್ಲಿ ಪ್ರಯಾಣಿಸುವುದು ಸೇರಿ ಹಲವು ಪ್ರಕರಣಗಳು ಸುದ್ದಿಯಾಗುತ್ತಿವೆ. ಇವು ಅಪಾಯಗಳಿಗೂ ಎಡೆಮಾಡಿಕೊಡುತ್ತಿವೆ ಎಂಬುದಕ್ಕೆ ಹಡಗು ಮುಳುಗಿದ್ದೇ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist