ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಹೆಸರು ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

250 ವರ್ಷಗಳ ಇತಿಹಾಸದ ಬೆಳ್ತಂಗಡಿಯ ಮರೋಡಿಯ ಕೊಡಮಣಿತ್ತಾಯ ದೈವಸ್ಥಾನಕ್ಕೆ ಶಿಲಾನ್ಯಾಸ.

Twitter
Facebook
LinkedIn
WhatsApp
250 ವರ್ಷಗಳ ಇತಿಹಾಸದ  ಬೆಳ್ತಂಗಡಿಯ ಮರೋಡಿಯ ಕೊಡಮಣಿತ್ತಾಯ ದೈವಸ್ಥಾನಕ್ಕೆ ಶಿಲಾನ್ಯಾಸ.

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ಶ್ರೀ ದೈವ ಕೊಡಮಣಿತ್ತಾಯ ಸಾನಿಧ್ಯದ ಜಿರ್ಣೋದ್ಧಾರದ ನಿಮಿತ್ತ ಇಂದು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿoದ ನಡೆಯಿತು .

ಈ ಕ್ಷೇತ್ರಕ್ಕೆ ಸುಮಾರು ೨೫೦ ವರ್ಷಗಳ ಇತಿಹಾಸವಿದೆ ಹಾಗೂ ಸುಮಾರು ನಲವತ್ತು ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ನೇಮೋತ್ಸವವು ನಡೆದಿದ್ದು ನಂತರ ಕ್ಷೇತ್ರವು ಶಿಥಿಲಾವಸ್ಥೆಗೆ ತಲುಪಿತ್ತು. ಮರೋಡಿ ಗ್ರಾಮದ ಪೊಸರಡ್ಕ ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ಜಿರ್ಣೋದ್ಧಾರದ ನಿಮಿತ್ತ ನಡೆದ ಪ್ರಶ್ನಾ ಚಿಂತನೆಯಲ್ಲಿ , ಈ ಸಾನಿಧ್ಯವು ಕಂಡು ಬಂದಿದ್ದು ಇದರ ಜಿರ್ಣೋದ್ಧಾರದ ಬಳಿಕ ಪೊಸರಡ್ಕ ಗರಡಿಯ ಜಿರ್ಣೋದ್ಧಾರವನ್ನು ನಡೆಸಬೇಕಾಗಿ ತಿಳಿದು ಬಂದಿದೆ. ಶ್ರೀ ಕೊಡಮಣಿತ್ತಾಯ ದೈವದ ಪ್ರಮುಖ ಆರಾಧನ ಕೇಂದಗಳಲ್ಲಿ ದೇರಾಜೆ ಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರವು ಪ್ರಮುಖ ಸ್ಥಾನದಲ್ಲಿದೆ . ಹೆಸರಿಗೆ ತಕ್ಕ ಹಾಗೆ ಸುತ್ತ ಮುತ್ತ ವರ್ಣನೀಯ ಪ್ರಾಕೃತಿಕ ಸೌಂದರ್ಯದ ಮಡಿಲಲ್ಲಿ ಈ ಸಾನಿಧ್ಯವಿದ್ದು, ಇದರ ಜಿರ್ಣೊದ್ಧಾರದ ಸಲುವಾಗಿ ಇಂದು ಶಿಲಾನ್ಯಾಸ ಕಾರ್ಯಕ್ರಮವನ್ನು ಊರಿನ ಗುರಿಕಾರರು ಹಾಗೂ ಗ್ರಾಮಸ್ಥರ ಕೂಡುವಿಕೆಯಲ್ಲಿ ಶ್ರೀ ಅನಂತ ಅಸ್ರಣ್ಣ ಕೇಳ ಬೊಟ್ಟ  ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು ..

ಈ ಸಂದರ್ಭ ಕ್ಷೇತ್ರದ ಜಿರ್ಣೊದ್ಧಾರದ ಮುಖ್ಯಸ್ಥರಾದ ಹೇಮರಾಜ್ ಬೆಳ್ಳಿಬೀಡು , ಕ್ಷೇತ್ರದ ಜಿರ್ಣೋದ್ದಾರಕ್ಕೆ ಒಗ್ಗಟ್ಟಾಗಿ ಶ್ರಮಿಸುವಂತೆ ಹಾಗೂ ಕ್ಷೇತ್ರದ ಆಭಿವೃದ್ಧಿಯ ಸಲುವಾಗಿ ಬೆಳ್ತಂಗಡಿಯ ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಪೂರ್ಣ ಪ್ರಮಾಣದಲ್ಲಿ ಕ್ಷೇತ್ರದ ಜಿರ್ಣೋದ್ಧಾರಕ್ಕೆ ಸಹಕಾರವನ್ನು ನೀಡಿದ್ದು ಗ್ರಾಮಸ್ಥರ ಪರವಾಗಿ ಶಾಸಕರಿಗೆ ತುಂಬು ಹೃದಯದ ಧನ್ಯವಾದವನ್ನು ಸಮರ್ಪಿಸಿದರು..ಇನ್ನೂ ಈ ಸಂದರ್ಭ ಗುರಿಕಾರರಾದ ಹೇಮರಾಜ್ ಬೆಳ್ಳಿಬೀಡು ,ರಾಜೇಂದ್ರ ಬಳ್ಳಾಲ್ ಮಿತ್ತ ಬೀಡು,ಜೀನೇಂದ್ರ ಜೈನ್ ಆರಂಬೊಟ್ಟು ,ಜಯವರ್ಮ ಬುಣ್ಣು ಕುಕ್ಯಾರೊಟ್ಟು,ಸುದರ್ಶನ್ ಜೈನ್ ಪಾಂಡಿಬೆಟ್ಟು ,ಶ್ರೀ ಉದಯ ನಾಪ,ಸೇಸಪ್ಪ ಪೂಜಾರಿ ಉಚ್ಚೂರು,ನಳಿನಿ ಪಿ.ಕೆ ಮತ್ತೊಟ್ಟು ,ರಮೇಶ್ ಬಲಾಂತ್ಯರೊಟ್ಟು ಹಾಗೂ , ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್,ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪದ್ಮಶ್ರೀ ಜೈನ್, ಪಂಚಾಯತ್ ಸದಸ್ಯರಾದ ಆಶೋಕ್ ಕೋಟ್ಯಾನ್ ,ರತ್ನಾಕರ್ ಬುಣ್ಣನ್ , ಪತ್ರಕರ್ತರಾದ ಪ್ರದೀಶ್ ಹಾರೊದ್ದು ಹಾಗೂ ಊರ ಪರವೂರ ಗ್ರಾಮಸ್ಥರು ಭಾಗಿಯಾದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು