ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3 ಮದುವೆಯಾದ್ರೂ ಅಪ್ರಾಪ್ತೆ ಜೊತೆ ಎಸ್ಕೇಪ್ ಆದ ಆಟೋ ಚಾಲಕ

Twitter
Facebook
LinkedIn
WhatsApp
3 ಮದುವೆಯಾದ್ರೂ ಅಪ್ರಾಪ್ತೆ ಜೊತೆ ಎಸ್ಕೇಪ್ ಆದ ಆಟೋ ಚಾಲಕ

ಕೋಲಾರ: ಆಟೋ ಓಡಿಸಿಕೊಂಡೆ ಈಗಾಗಲೇ ಮೂರು ಹುಡುಗಿಯರನ್ನು ಮದುವೆಯಾಗಿ ಮೋಸ ಮಾಡಿರುವ ಚಪಲ ಚೆನ್ನಿಗರಾಯ ಈಗ ಅಪ್ರಾಪ್ತ ಬಾಲಕಿಯೊಂದಿಗೆ ಪರಾರಿಯಾಗಿರುವ ಘಟನೆ ಕೋಲಾರ ತಾಲೂಕಿನ ನರಸಾಪುರದಲ್ಲಿ ನಡೆದಿದೆ.

ಕೋಲಾರ (Kolar) ತಾಲೂಕಿನ ನರಸಾಪುರ ಗ್ರಾಮದ ಆಟೋ ಚಾಲಕ (Auto Driver) ಅಲಿಯಾಸ್ ಸಂತೋಷ್ ಎಂಬಾತ ನಿತ್ಯ ಕೂಲಿ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು (Girl) ಪುಸಲಾಯಿಸಿ ಆಕೆಯನ್ನು ಕರೆದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಸಂತೋಷ್ ನರಸಾಪುರ ಗ್ರಾಮದಲ್ಲೇ ಆಟೋ ಓಡಿಸಿಕೊಂಡಿದ್ದು, ನಿತ್ಯ ಕೂಲಿ ಕೆಲಸದವರನ್ನು ಕೆರೆದುಕೊಂಡು ಹೋಗುತ್ತಿದ್ದ. ಅದರಲ್ಲಿ ಈ ಬಾಲಕಿ ಹಾಗೂ ಆಕೆಯ ಅಜ್ಜಿ ಕೂಡಾ ನಿತ್ಯ ಕೂಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಡಿ. 5ರಂದು ಬಾಲಕಿಯ ಅಜ್ಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಿರಲಿಲ್ಲ. ಈ ವೇಳೆ ಬಾಲಕಿಯನ್ನು ಪುಸಲಾಯಿಸಿರುವ ಸಂತೋಷ್ ಕರೆದುಕೊಂಡು ನಾಪತ್ತೆಯಾಗಿದ್ದಾನೆ.

ಕೆಲಸಕ್ಕೆಂದು ಹೋದ 17 ವರ್ಷದ ಬಾಲಕಿ ಮತ್ತೆ ವಾಪಸ್ ಬಂದಿಲ್ಲ, ಎಲ್ಲಿ ಹೋಗಿದ್ದಾಳೆ ಎಂದು ಪರಿಶೀಲನೆ ನಡೆಸಲಾಗಿ, ಬಾಲಕಿಯನ್ನು ಆಟೋ ಡ್ರೈವರ್ ಸಂತೋಷ್ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎನ್ನುವುದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಬಾಲಕಿಯ ಪೊಷಕರು ವೇಮಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಾಲಕಿಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ಸಂತೋಷ್ ಹೀಗೆ ಮಾಡಿರುವುದು ಮೊದಲೇನಲ್ಲ. ಈ ಮೊದಲು ಇದೇ ರೀತಿ ಹುಡುಗಿಯರನ್ನು ಪುಸಲಾಯಿಸಿ ಈಗಾಗಲೇ ಮೂರು ಜನರನ್ನು ಮದುವೆಯಾಗಿದ್ದಾನಂತೆ. ಅದರಲ್ಲಿ ಒಬ್ಬ ಹೆಂಡತಿ ಮೃತಪಟ್ಟಿದ್ದು, ಉಳಿದ ಇಬ್ಬರು ಇವನೊಂದಿಗೆ ಸಂಸಾರ ಮಾಡಲಾರದೆ ಬಿಟ್ಟು ಹೋಗಿದ್ದಾರೆ. 

ಈತನ ಮೂರನೇ ಪತ್ನಿ ಕೂಡಾ ಬಾಲಕಿಯೊಂದಿಗೆ ನಾಪತ್ತೆಯಾಗಿರುವ ತನ್ನ ಗಂಡನ ಕುರಿತು ಪೊಲೀಸ್ ಠಾಣೆಗೆ ಹೋಗಿ ಹೇಳಿಕೆ ನೀಡಿ ಬಂದಿದ್ದಾರೆ. ಸದ್ಯ ಬಾಲಕಿಯೊಂದಿಗೆ ನಾಪತ್ತೆಯಾಗಿರುವ ಸಂತೋಷ್ ಆಕೆಯೊಂದಿಗೆ ಇರುವ ಕೆಲವು ಪೋಟೋಗಳನ್ನು ಸ್ಥಳೀಯ ಸ್ನೇಹಿತರಿಗೆ ಕಳುಹಿಸಿದ್ದಾನೆ. ಹಾಗಾಗಿ ನಮ್ಮ ಹುಡುಗಿಯನ್ನು ಕಿಡ್ನ್ಯಾಪ್ ಮಾಡಿರುವ ಸಂತೋಷನನ್ನು ಬಂಧಿಸಿ ನಮ್ಮ ಮಗುವನ್ನು ಹುಡುಕಿಕೊಡಿ ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ