ಚಿತ್ರದುರ್ಗ (ಜೂ.05): ರೈತ ಸಹಕಾರಿ ಸಂಘಗಳ ಮೂಲಕ ಕಳೆದ ವರ್ಷ 21 ಲಕ್ಷ ರೈತರಿಗೆ ಸಾಲ ನೀಡಲಾಗಿತ್ತು. ಈ ಬಾರಿ 31 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸದುರ್ಗ ತಾಲ್ಲೂಕಿನ ಇಂಡೇದೇವರಹಟ್ಟಿಯಲ್ಲಿ ಶನಿವಾರ ಆಯೋಜಿಸಿದ್ದ ‘ಹೊಸದುರ್ಗ ತಾಲ್ಲೂಕಿನ ವಾಣಿವಿಲಾಸ ಸಾಗರದ ಹಿನ್ನೀರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಹುಣಸೇಕಟ್ಟೆ ಗ್ರಾಮದವರೆಗೆ ಸೇತುವೆ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಕಸಬಾ, ಮಾಡದಕೆರೆ ಮತ್ತು ಶ್ರೀರಾಂಪುರ ಹೋಬಳಿಗಳ ವ್ಯಾಪ್ತಿಯಲ್ಲಿನ 36916 ಹೆ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವುದು ಮತ್ತು 85 ಕೆರೆಗಳನ್ನು ತುಂಬಿಸು ವ ಕಾಮಗಾರಿ ಮತ್ತು ತಾಲ್ಲೂಕಿನ ವಿವಿಧ ಇಲಾಖೆಯ ಕಾಮಗಾರಿಗಳ ‘ಉದ್ಘಾಟನೆ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ರೈತ ಮಕ್ಕಳಿಗೆ ಅನುಕೂಲವಾಗಲಿ ಎಂದು ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದೆ. 14 ಲಕ್ಷ ರೈತ ಮಕ್ಕಳಿಗೆ ವಿದ್ಯಾನಿಧಿ ಉಪಯೋಗ ದೊರಕಲಿದೆ. ಈ ಯೋಜನೆಗಾಗಿ ವಿದ್ಯಾರ್ಥಿಗಳು ಯಾವುದೇ ಅರ್ಜಿ ಹಾಕುವಂತಿಲ್ಲ, ನೇರ ಅವರ ಖಾತೆಗೆ ಹಣ ಜಮಾ ಆಗಲಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನವಿಯಂತೆ ರೈತರು ಬಳಸುವ ಯಂತ್ರೋಪಕರಣಗಳಿಗೆ ಡೀಸಲ್ ಸಬ್ಸಿಡಿ ನೀಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅಂಗವಾಗಿ ವಾರ್ಷಿಕವಾಗಿ 1250 ರೂಪಾಯಿಗಳನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಇದಕ್ಕಾಗಿ 600 ಕೋಟಿ ರೂಪಾಯ ಮಂಜೂರು ಮಾಡಲಾಗಿದೆ. ಸದಾ ರೈತರ ಬಗ್ಗೆ ಕಾಳಜಿ ಇರುವ ಸರ್ಕಾರ ನಮ್ಮದು, ಹಲವಾರು ಯೋಜನೆಗಳನ್ನು ರೈತರಿಗೆ ನೀಡಲಾಗಿದೆ ಎಂದರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?