ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶಾಖಪಟ್ಟಣಂ ಬಂದರಿನಲ್ಲಿ ದೋಣಿಗಳಿಗೆ ಬೆಂಕಿ ತಗುಲಿ 40 ದೋಣಿ ಭಸ್ಮ..!

Twitter
Facebook
LinkedIn
WhatsApp
ವಿಶಾಖಪಟ್ಟಣಂ ಬಂದರಿನಲ್ಲಿ ದೋಣಿಗಳಿಗೆ ಬೆಂಕಿ ತಗುಲಿ 40 ದೋಣಿ ಭಸ್ಮ..!

ಅಮರಾವತಿ: ವಿಶಾಖಪಟ್ಟಣಂನ (Visakhapatnam) ಬಂದರಿನಲ್ಲಿ (Fishing Harbour) ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 40 ಮೀನುಗಾರಿಕಾ ದೋಣಿಗಳು (Boat) ಸುಟ್ಟು ಭಸ್ಮವಾಗಿವೆ.

ಘಟನೆಯಲ್ಲಿ ಸುಮಾರು 30 ಕೋಟಿ ರೂ. ನಷ್ಟವಾಗಿದೆ. ಕೆಲವು ಕಿಡಿಗೇಡಿಗಳು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೀನುಗಾರರು ಶಂಕಿಸಿದ್ದಾರೆ. ಘಟನೆಯ ಬಳಿಕ ಅಗ್ನಿಶಾಮಕ ದಳ ಬೆಂಕಿ ಆರಿಸಲು ಹರಸಾಹಸ ಪಟ್ಟರು. ಕೆಲವು ದೋಣಿಗಳಲ್ಲಿ ಸಿಲಿಂಡರ್, ಇಂಧನ ಟ್ಯಾಂಕ್‌ಗಳಿಗೆ ಬೆಂಕಿ ತಗುಲಿದ್ದರಿಂದ ಅವಘಡ ಸಂಭವಿಸಿದ್ದು, ಪ್ರದೇಶದ ಜನರು ಘಟನೆಯಿಂದ ಭೀತಿಗೊಂಡರು.

ರಾತ್ರಿ 11:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಆನಂದ್ ರೆಡ್ಡಿ ತಿಳಿಸಿದ್ದಾರೆ. ದೋಣಿಗಳಲ್ಲಿನ ಸಿಲಿಂಡರ್‌ಗಳು ಸ್ಫೋಟಕ್ಕೆ ಕಾರಣವಾಗುತ್ತಿವೆ. ಆದ್ದರಿಂದ ನಾವು ಜನರನ್ನು ದೂರವಿರಲು ಕೇಳುತ್ತಿದ್ದೇವೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಕಾರ್ಯನಿರ್ವಹಿಸುತ್ತಿವೆ. ಬೆಂಕಿಗೆ ಕಾರಣವನ್ನು ಇನ್ನೂ ದೃಢಪಡಿಸಲಾಗಿಲ್ಲ. ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಈ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಆನಂದ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಆಟಿಕೆ ವಸ್ತುಗಳಿದ್ದ ಗೋದಾಮು ಧಗಧಗ – ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆ ರೆಸ್ಕ್ಯೂ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ಅವಘಡ (Fire Accident) ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಆಟಿಕೆ ವಸ್ತುಗಳಿದ್ದ ಗೋದಾಮು ಧಗಧಗ ಹೊತ್ತಿ ಉರಿದಿದ್ದು, ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಕುಂಬಾರಪೇಟೆಯಲ್ಲಿ ಭಾನುವಾರ ಮಧ್ಯಾಹ್ನ ಈ ಅಗ್ನಿ ಅವಘಡ ಸಂಭವಿಸಿದ್ದು, ಐದು ಅಂತಸ್ತಿನ ಕಟ್ಟಡದಲ್ಲಿ 3 ಅಂತಸ್ತು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ನೀರು ಹಾಕಿದಷ್ಟು ಹೆಚ್ಚಾಗಿ ಬೆಂಕಿ ಉರಿಯುತ್ತಿದೆ. 

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಗೋಡೌನ್‍ನಿಂದ ಮೇಲಿನ ಕಾರಿಡಾರ್‍ಗೆ ಮಹಿಳೆ ಬಂದಿದ್ದಾರೆ. ಅಷ್ಟರಲ್ಲಾಗಲೇ ಬೆಂಕಿ ಹಂತ ಹಂತವಾಗಿ ಆವರಿಸಿಕೊಳ್ಳುತ್ತಿತ್ತು. ಈ ವೇಳೆ ಸ್ಥಳೀಯರ ಸಹಾಯದಿಂದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಹೊಗೆ ಮಧ್ಯೆ ಏಣಿ ಏರಿ ಮಹಿಳೆ ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರೆಲ್ಲ ಪಕ್ಕದ ಕಟ್ಟಡದಿಂದ ಏಣಿ ಇಟ್ಟಿದ್ದು, ಅದೇ ಏಣಿ ಏರಿ ಬರುವ ಮೂಲಕ ಮಹಿಳೆ ಭಾರೀ ಅವಘಡದಿಂದ ಪಾರಾಗಿದ್ದಾರೆ. ಕಟ್ಟಡದ ನಾಲ್ಕನೇ ಫ್ಲೋರ್ ನಲ್ಲಿಯೂ ಬೆಂಕಿಯ ಜ್ವಾಲೆ ಆವರಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist