ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ಮತ್ತು 8 ನೇ ತರಗತಿಯ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ;ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
images 7

ಬೆಂಗಳೂರು (ಮಾ.16): ರಾಜ್ಯದಲ್ಲಿ 5 ಹಾಗೂ 8ನೇ ತರಗತಿ ಮೌಲ್ಯಂಕನ ಪರೀಕ್ಷಾ (Board exam) ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಇಲಾಖೆ ಇಂದು ಬಿಡುಗಡೆ ಮಾಡಿದೆ. ಮಾ.27ರಿಂದ ಪರೀಕ್ಷೆ ಆರಂಭವಾಗಲಿದ್ದು, ಏ.1ರವರೆಗೆ ಪರೀಕ್ಷೆ ನಡೆಯಲಿದೆ.

5 ಹಾಗೂ 8 ನೇ ತರಗತಿ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ

  • ಮಾ.27- ಸೋಮವಾರ-  ಪ್ರಥಮ ಭಾಷೆ ಕನ್ನಡ
  • ಮಾ.28- ಮಂಗಳವಾರ – ದ್ವಿತೀಯ ಭಾಷೆ ಇಂಗ್ಲೀಷ್ ಅಥವಾ ಕನ್ನಡ
  • ಮಾ.29- ಬುಧವಾರ- ತೃತೀಯ ಭಾಷೆ ಹಿಂದಿ ಅಥವಾ ಪರಿಸರ ಅಧ್ಯಯನ
  • ಮಾ.30- ಗುರುವಾರ – ಗಣಿತ
  • ಮಾ.31- ಶುಕ್ರವಾರ- ವಿಜ್ಞಾನ
  • ಏ.1- ಶನಿವಾರ – ಸಮಾಜ ವಿಜ್ಞಾನ

ಹೈಕೋರ್ಟ್‌ ಆದೇಶದಂತೆ ದಿನಾಂಕ ನಿಗದಿ:  ಈ ಕುರಿತು ಆದೇಶ ನೀಡಿರುವ ಹೈಕೋರ್ಟ್ ಮಾ.27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿದೆ.  ಅದರಂತೆ 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27ರಿಂದ ಮಾ.30ರವರೆಗೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27ರಿಂದ ಏ.1ರವರೆಗೆ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಆಯಾ ಶಾಲೆಗಳನ್ನೇ ಮೌಲ್ಯಾಂಕನ ಕೇಂದ್ರಗಳಾಗಿ ಪರಿಗಣಿಸಿದೆ. ಈ ಮೌಲ್ಯಾಂಕನವು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ವಿಷಯದ ತಿಳಿಯುವುದಾಗಿದೆ.

ಯಾವ ವಿದ್ಯಾರ್ಥಿಯನ್ನೂ ಫೇಲ್‌ ಮಾಡುವಂತಿಲ್ಲ: ಕಲಿಕೆಯಲ್ಲಿ ಎಷ್ಟು ಹಿನ್ನಡೆಯುಂಟಾಗಿದೆ ಎಂಬುದನ್ನು ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ ಹಾಗೂ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ಈ ಮೌಲ್ಯಾಂಕನದ ಫಲಿತಾಂಶವನ್ನು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ