ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

5 ರನ್​ಗಳ ರೋಚಕ ಜಯ, ಡಕ್‌ವರ್ತ್ ನಿಯಮದನ್ವಯ ಗೆಲುವು, ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ!

Twitter
Facebook
LinkedIn
WhatsApp
5 ರನ್​ಗಳ ರೋಚಕ ಜಯ, ಡಕ್‌ವರ್ತ್ ನಿಯಮದನ್ವಯ ಗೆಲುವು, ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ!

ICC Womens T20 World Cup 2023: ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಜಯ ಸಾಧಿಸಿದೆ. ಮಳೆಗೆ ಅಹುತಿಯಾದ ಈ ಪಂದ್ಯದ ಫಲಿತಾಂಶವನ್ನು ಡಕ್​ವರ್ಥ್ ಲೂಯಿಸ್ ನಿಯಮ ಪ್ರಕಾರ ನಿರ್ಧರಿಸಲಾಗಿದ್ದು, ಅದರಂತೆ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯ ಸಾಧಿಸಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ  ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡಿದ ಶಫಾಲಿ 24 ರನ್​ಗಳಿಸಿ ಔಟಾದರು. ಇದಾಗ್ಯೂ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಸ್ಮೃತಿ ಮಂಧಾನ ಐರ್ಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

ಪರಿಣಾಮ ಮಂಧಾನ ಬ್ಯಾಟ್​ನಿಂದ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳು ಮೂಡಿಬಂದಿದ್ದವು. ಅಲ್ಲದೆ 56 ಎಸೆತಗಳಲ್ಲಿ 87 ರನ್​ ಬಾರಿಸಿ 19ನೇ ಓವರ್​ನಲ್ಲಿ ಸ್ಮೃತಿ ಮಂಧಾನ ಔಟಾದರು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾ ಮೊತ್ತವು 150 ರ ಗಡಿ ತಲುಪಿತ್ತು. ಅಂತಿಮವಾಗಿ ಭಾರತ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 155 ರನ್​ ಕಲೆಹಾಕಿತು.

156 ರನ್​ಗಳ ಕಠಿಣ ಗುರಿ ಪಡೆದ ಐರ್ಲೆಂಡ್ ತಂಡವು 8.2 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 54 ರನ್​ ಬಾರಿಸಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ನಿರಂತರ ಮಳೆಯಾಗಿದ್ದರಿಂದ ಪಂದ್ಯ ನಡೆಸುವುದು ಅಸಾಧ್ಯ ಎಂದು ಮ್ಯಾಚ್ ರೆಫರಿ ನಿರ್ಧರಿಸಿದರು. ಅಲ್ಲದೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಡಕ್​ ವರ್ಥ್ ಲೂಯಿಸ್ ನಿಯಮದ ಮೊರೆ ಹೋಗಲಾಯಿತು. ಈ ವೇಳೆ ಐರ್ಲೆಂಡ್ ಮೊತ್ತವು ಟೀಮ್ ಇಂಡಿಯಾಗಿಂತ 5 ರನ್​ ಹಿಂದಿತ್ತು. ಡಕ್ ವರ್ತ್ ನಿಯಮದ ಪ್ರಕಾರ ಐರ್ಲೆಂಡ್ ತಂಡ 9ನೇ ಓವರ್‌ನಲ್ಲಿ 59 ರನ್ ಗಳಿಸಬೇಕಿತ್ತು. ಇತ್ತ ಮಳೆಯಿಂದಾಗಿ ಮತ್ತೆ ಪಂದ್ಯ ಆರಂಭಿಸಲು ಸಾಧ್ಯವಾಗಿಲ್ಲ. ಹೀಗಾಗಿ ಡಕ್‌ವರ್ತ್ ನಿಯಮದ ಪ್ರಕಾರ ಭಾರತಕ್ಕೆ ಗೆಲವು ಘೋಷಿಸಲಾಯಿತು. ಅದರಂತೆ ಭಾರತ ತಂಡವು 5 ರನ್​ಗಳ ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist