ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ಲಕ್ಷ ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದ ಮಹಿಳಾ ತಹಸೀಲ್ದಾರ್!

Twitter
Facebook
LinkedIn
WhatsApp
5 ಲಕ್ಷ ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದ ಮಹಿಳಾ ತಹಸೀಲ್ದಾರ್!

ಬೆಂಗಳೂರು (ನ.16) : ಕೃಷಿ ಜಮೀನಿನ ಖಾತೆಯಲ್ಲಿ ಹೆಸರು ಬದಲಾವಣೆ ಸಂಬಂಧ 5 ಲಕ್ಷ ಲಂಚ ಸ್ವೀಕರಿಸುವಾಗ ವಿಶೇಷ ತಹಸೀಲ್ದಾರ್‌ ಹಾಗೂ ಅವರ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ವಿಶೇಷ ತಹಸೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಬಂಧಿತರಾಗಿದ್ದು, ಕಂದಾಯ ಭವನದ ಸಮೀಪ ಸೆಂಟ್‌ ಮಾರ್ಥಸ್‌ ಆಸ್ಪತ್ರೆಯ ವಾಹನ ನಿಲುಗಡೆ ಪ್ರದೇಶದಲ್ಲಿ ದೂರುದಾರ ಕಾಂತರಾಜ್‌ ಅವರಿಂದ ಲಂಚ ಪಡೆಯುವಾಗ ಆರೋಪಿಗಳು ಪೊಲೀಸರಿಗೆ ಸೆರೆಯಾಗಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್‌ ಕುಮಾರ್‌ ಎಂಬುವರಿಗೆ ಸೇರಿದ್ದ 2 ಎಕರೆ ಕೃಷಿ ಭೂಮಿಯನ್ನು ಕಾಂತರಾಜ್‌ ಖರೀದಿಸಿದ್ದರು. ಆದರೆ ಆ ಭೂಮಿಯ ಪಹಣಿಯಲ್ಲಿ ಲಲಿತ್‌ ಕುಮಾರ್‌ ಅವರ ಹೆಸರು ಉಲ್ಲೇಖವಾಗಿರಲಿಲ್ಲ. ಹೀಗಾಗಿ ಲಲಿತ್‌ ಕುಮಾರ್‌ ಪರವಾಗಿ ಕಾಂತರಾಜು ಅವರು, ಕೆಂಗನಹಳ್ಳಿ ಗ್ರಾಮದ ಭೂಮಿಯ ಖಾತೆಯಲ್ಲಿ ಹೆಸರು ಬದಲಾವಣೆಗೆ ಬೆಂಗಳೂರಿನ ಉತ್ತರ ಉಪ ವಿಭಾಗಾಧಿಕಾರಿ (ಎಸಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿಗಳು, ಅ.22ರಂದು ಖಾತೆ ಹೆಸರು ಬದಲಾವಣೆಗೆ ಆದೇಶಿಸಿದ್ದರು. ಈ ಆದೇಶದ ಅನ್ವಯ ಪಹಣಿ ತಿದ್ದುಪಡಿಗೆ ಉತ್ತರ ತಾಲೂಕಿನ ವಿಶೇಷ ತಹಸೀಲ್ದಾರ್‌ ವರ್ಷಾ ಒಡೆಯರ್‌ ಅವರಿಗೆ ಕಾಂತರಾಜು ಮನವಿ ಸಲ್ಲಿಸಿದ್ದರು. ಆಗ ‘ಕೆಂಗನಹಳ್ಳಿ ಗ್ರಾಮದಲ್ಲಿ ನೀವು ಖರೀದಿಸಿರುವ ಭೂಮಿಗೆ ಕೋಟ್ಯಂತರ ಮೌಲ್ಯವಿದೆ. ಹೀಗಾಗಿ ತಲಾ ಎಕರೆಗೆ 5 ಲಕ್ಷದಂತೆ 10 ಲಕ್ಷ ನೀಡಿದರೆ ಪಹಣಿಯಲ್ಲಿ ಹೆಸರು ಬದಲಾವಣೆ ಮಾಡಿಕೊಡುತ್ತೇವೆ’ ಎಂದು ವಿಶೇಷ ತಹಸೀಲ್ದಾರ್‌ ಬೇಡಿಕೆ ಇಟ್ಟಿದ್ದರು. ಈ ವ್ಯವಹಾರಕ್ಕೆ ಮಧ್ಯವರ್ತಿ ರಮೇಶ್‌ನನ್ನು ವಿಶೇಷ ತಹಸೀಲ್ದಾರ್‌ ಬಳಸಿಕೊಂಡಿದ್ದರು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಕಾಂತರಾಜು ದೂರು ಸಲ್ಲಿಸಿದರು. ಅದರನ್ವಯ ಡಿವೈಎಸ್ಪಿ ಅಂಥೋನಿ ಜಾನ್‌ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿತು. ಪೂರ್ವನಿಗದಿಯಂತೆ ಕಂದಾಯ ಭವನದ ಸಮೀಪದಲ್ಲಿರುವ ನೃಪತುಂಗ ರಸ್ತೆಯ ಸೆಂಟ್‌ ಮಾರ್ಥಾಸ್‌ ಆಸ್ಪತ್ರೆ ವಾಹನ ನಿಲುಗಡೆ ಪ್ರದೇಶಕ್ಕೆ ಬರುವಂತೆ ಕಾಂತರಾಜ್‌ಗೆ ಮಧ್ಯವರ್ತಿ ರಮೇಶ್‌ ಸೂಚಿಸಿದ್ದ. ಅಂತೆಯೇ ಅಲ್ಲಿಗೆ ತೆರಳಿದ ಕಾಂತರಾಜ್‌ ಅವರಿಂದ ಮುಂಗಡವಾಗಿ 5 ಲಕ್ಷ ಸ್ವೀಕರಿಸುವಾಗ ರಮೇಶ್‌ನನ್ನು ಪೊಲೀಸರು ಬಂಧಿಸಿದರು. ಈ ಹಣ ತನಗೆ ಸೇರಿದ್ದಲ್ಲ. ವಿಶೇಷ ತಹಸೀಲ್ದಾರ್‌ ಸೂಚನೆ ಮೇರೆಗೆ ಹಣ ಪಡೆದಿದ್ದಾಗಿ ರಮೇಶ್‌ ಹೇಳಿಕೆ ನೀಡಿದ್ದ. ನಂತರ ಕಂದಾಯ ಭವನದಲ್ಲಿದ್ದ ವರ್ಷಾ ಒಡೆಯರ್‌ ಕಚೇರಿಗೆ ರಮೇಶ್‌ ಜತೆ ಪೊಲೀಸರು ತೆರಳಿದ್ದಾರೆ. ಆಗ ಕಾಂತರಾಜ್‌ ಅವರಿಂದ ಹಣ ಸಂದಾಯವಾಗಿದೆ ಎಂದು ಹೇಳಿ ರಮೇಶ್‌ ನೀಡಿದ ಲಂಚದ ಹಣವನ್ನು ಸ್ವೀಕರಿಸಿದ ಕೂಡಲೇ ವಿಶೇಷ ತಹಸೀಲ್ದಾರ್‌ ವರ್ಷಾ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ