ಗುರುವಾರ, ಮಾರ್ಚ್ 28, 2024
ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ವರ್ಷದ ಬಾಲಕನಿಗೆ ಕಾನ್ಸ್‌ಟೇಬಲ್ ಹುದ್ದೆ: ಅಪ್ಪನ ಸಾವಿನ ನಂತರ ಮಗನಿಗೆ ಕೆಲಸ

Twitter
Facebook
LinkedIn
WhatsApp
tiktok 3

ಸರ್ಗುಜಾ (ಛತ್ತೀಸ್‌ಗಢ): ಪೊಲೀಸ್‌ ಅಧಿಕಾರಿಯೊಬ್ಬರ ಹಠಾತ್‌ ನಿಧನದ ನಂತರ ಅವರ 5 ವರ್ಷದ ಪುತ್ರನನ್ನು ಮಕ್ಕಳ ಪೊಲೀಸ್ ಕಾನ್ಸ್‌ಟೇಬಲ್ ಆಗಿ ನೇಮಕ ಮಾಡಿದ ಅಪರೂಪದ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿ ರಾಜ್ ಕುಮಾರ್ ರಾಜವಾಡೆ ಎಂಬುವವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ 5 ವರ್ಷದ ಪುತ್ರನಿಗೆ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್ ಕೆಲಸ ನೀಡಲಾಗಿದೆ.  ಈ ಹಿನ್ನೆಲೆ ಈಗ ಯುಕೆಜಿ ವಿದ್ಯಾರ್ಥಿಯಾಗಿರುವ 5 ವರ್ಷದ ಬಾಲಕ ನಮನ್ ರಾಜ್‌ವಾಡೆ (Naman Rajwade) ಪೊಲೀಸ್ ಪೇದೆಯಾಗಿ ಛತ್ತೀಸ್‌ಗಢ ಪೊಲೀಸ್ ಇಲಾಖೆ ಸೇರಿದ್ದಾರೆ. 

ಛತ್ತೀಸ್‌ಗಢದ ಸರ್ಗುಜಾದಲ್ಲಿ ಮಕ್ಕಳ ಕಾನ್‌ಸ್ಟೇಬಲ್ (Child Constable) ಆಗಿ ಅವರನ್ನು ನೇಮಿಸಲಾಗಿದೆ. ಮಹಿಳಾ ಠಾಣೆಯಲ್ಲಿ ನಮನ್ ತಂದೆ ರಾಜ್ ಕುಮಾರ್ ರಾಜವಾಡೆ ಪೊಲೀಸ್ ಅಧಿಕಾರಿಯಾಗಿ  ಕಾರ್ಯನಿರ್ವಹಿಸಿದ್ದರು, ಆದರೆ ಇತ್ತೀಚೆಗೆ ಅವರು ಅಪಘಾತದಲ್ಲಿ ನಿಧನರಾಗಿದ್ದರು. ಇದರ ಬೆನ್ನಲ್ಲೇ ಪೊಲೀಸ್ ಆಡಳಿತ ಮಂಡಳಿ ಅನುಕಂಪದ ಆಧಾರದ ಮೇಲೆ ಈ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪೊಲೀಸ್ ಅಧಿಕಾರಿ ಪತ್ನಿ ನಿತು ರಾಜ್‌ವಾಡೆ (Nitu Rajwade),ನನ್ನ ಪತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈಗ ನನ್ನ ಮಗನನ್ನು ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಿಸಲಾಗಿದೆ. ಗಂಡನನ್ನು ಕಳೆದುಕೊಂಡಿರುವ ಬಗ್ಗೆ ನೋವಿದೆ. ಆದರೆ ಮಗುವಿಗೆ ಪೊಲೀಸ್ ಹುದ್ದೆ ನೀಡಿರುವುದಕ್ಕೆ ಖುಷಿ ಆಗಿದೆ ಎಂದು ಹೇಳಿದ್ದಾರೆ. 

ಈ ಬಗ್ಗೆಎಎನ್‌ಐಗೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಭಾವನಾ ಗುಪ್ತಾ (Bhavna Gupta), ಆಡಳಿತ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಮಾರ್ಗಸೂಚಿಗಳ ಪ್ರಕಾರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸ್ ಕೇಂದ್ರ ಕಚೇರಿಯ ಮಾರ್ಗಸೂಚಿಗಳ ಪ್ರಕಾರ, ಹುದ್ದೆಯಲ್ಲಿರುವವರು ಅಕಾಲಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಇದ್ದರೆ, ಅವರನ್ನು ನೇಮಕ ಮಾಡಲಾಗುತ್ತದೆ. ಅದರಂತೆ  ‘ಮಕ್ಕಳ ಕಾನ್ಸ್‌ಟೇಬಲ್’. ಹುದ್ದೆಯ  ಅಡಿಯಲ್ಲಿ ನಮನ್ ರಾಜ್‌ವಾಡೆ ಅವರನ್ನು ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ