ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5, 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ – ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

Twitter
Facebook
LinkedIn
WhatsApp
pic 19

ನವದೆಹಲಿ: 5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಷರತ್ತುಬದ್ಧ ಅನುಮತಿ ನೀಡಿದ್ದ ಹೈಕೋರ್ಟ್‍ನ (High Court) ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ (School) ಸಂಘ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಸಂಘದ ಪರ ವಕೀಲರು ಮನವಿ ಮಾಡಿದ್ದಾರೆ.

ಸೋಮವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಪ್ರಸ್ತಾಪಿಸಿದ ವಕೀಲರು, ರಾಜ್ಯಮಟ್ಟದ ‘ಬೋರ್ಡ್ ಪರೀಕ್ಷೆ’ಗಳನ್ನು ನಡೆಸುವುದರಿಂದ ಮೌಲ್ಯಮಾಪನ ವಿಧಾನವು ವಿದ್ಯಾರ್ಥಿಗಳು (Student) ಮತ್ತು ಶಿಕ್ಷಕರ (Teacher) ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರವು ಪೋಷಕರ ಮತ್ತು ಶಾಲೆಗಳ ಜೊತೆಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ವಾದಿಸಿದರು.

ವಾದ ಆಲಿಸಿದ ಸಿಜೆಐ ಡಿ.ವೈ ಚಂದ್ರಚೂಡ್ ಮಾ. 27ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ವಕೀಲರು ಮಾ. 27ರಂದು ಪರೀಕ್ಷೆಗಳು ಆರಂಭವಾಗಲಿದೆ. ಹೀಗಾಗಿ ಇದಕ್ಕೂ ಮುನ್ನ ವಿಚಾರಣೆ ನಡೆಸಬೇಕು ಎಂದು ಹೇಳಿದರು. ಇದಕ್ಕೆ ಗರಂ ಆದ ಸಿಜೆಐ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮ ಎಂದು ಹೈಕೋರ್ಟ್‍ಗೆ ಗೊತ್ತಿದೆ ಎಂದರು.

ವಾದ ಮುಂದುವರಿಸಿದ ವಕೀಲರು ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ, ನಮ್ಮ ಅಭಿಪ್ರಾಯ ಕೇಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಿಜೆಐ ಮಾ. 27ರಂದೇ ನಿಮ್ಮ ಅಭಿಪ್ರಾಯ ಕೇಳಲಾಗುವುದು. ಯಾವುದೇ ಬದಲಾವಣೆ ಇಲ್ಲ ಎಂದರು.

ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿತ್ತು. ಆದರೆ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಷರತ್ತುಗಳೊಂದಿಗೆ ಬೋರ್ಡ್ ಪರೀಕ್ಷೆ ನಡೆಸಲು ವಿಭಾಗೀಯ ಪೀಠ ಆದೇಶಿಸಿತ್ತು. ಈ ಆದೇಶವನ್ನು ಸದ್ಯ ಸುಪ್ರೀಂಕೋರ್ಟ್‍ನಲ್ಲಿ (Supreme Court) ಪ್ರಶ್ನೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ