ಬೆಳಗಾವಿ(ಮೇ.25): ಗೋದಾಮಿನಲ್ಲಿದ್ದ 50 ಕೆಜಿ ತೂಕದ 900 ಚೀಲ ರಸಗೊಬ್ಬರ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ದೇಸೂರು ರೈಲ್ವೆ ನಿಲ್ದಾಣ ಬಳಿಯ ಗೋದಾಮಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ತಡರಾತ್ರಿ ಗೋದಾಮಿನ ಬಳಿ ಯಾರೂ ಇಲ್ಲದಿರುವುದನ್ನೇ ಖಚಿತಮಾಡಿಕೊಂಡ ಕಳ್ಳರು .12 ಲಕ್ಷ ಮೌಲ್ಯದ 900 ಚೀಲ ಆರ್ಸಿಎಫ್, ಡಿಎಪಿ ಗೊಬ್ಬರವನ್ನು ಕಳ್ಳತನ ಮಾಡಿದ್ದಾರೆ. ಯಾರೋ ಗೊತ್ತಿದ್ದವರಿಂದಲೇ ಈ ಕೃತ್ಯ ನಡೆದಿದೆ ಎಂಬ ಅನುಮಾನ ಮೂಡಿದೆ. ಅಲ್ಲದೇ 900 ಚೀಲ ಗೊಬ್ಬರ ತೆಗೆದುಕೊಂಡು ಹೋಗಲು ಕನಿಷ್ಠ ಎರಡು ಲಾರಿಗಳು ಬೇಕಿದೆ. ಗೊಬ್ಬರ ಕಳ್ಳತನ ಆಗಿರುವ ಸಂಬಂಧ ಗೋದಾಮು ಮ್ಯಾನೇಜರ್ ಶಿವಾಜಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?