ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

75 ವರ್ಷದಾಟಿರುವ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗುವ ಕೊನೆಯ ಅವಕಾಶ! ಈ ಅವಕಾಶವನ್ನು ಕಳೆದುಕೊಳ್ಳಲು ಸಿದ್ದರಿದ್ದಾರೆಯೆ?

Twitter
Facebook
LinkedIn
WhatsApp
75 ವರ್ಷದಾಟಿರುವ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗುವ ಕೊನೆಯ ಅವಕಾಶ! ಈ ಅವಕಾಶವನ್ನು ಕಳೆದುಕೊಳ್ಳಲು ಸಿದ್ದರಿದ್ದಾರೆಯೆ?

ಕರ್ನಾಟಕದಲ್ಲಿ ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಬಹು ಜೋರಾಗಿದೆ. ಈ ನಡುವೆ ತನ್ನ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ 76ರ ಪ್ರಾಯಕ್ಕೆ ಮುಟ್ಟಿದ್ದಾರೆ.
ಬಹುಶಃ ಸಿದ್ದರಾಮಯ್ಯನವರ ಪಾಲಿಗೆ ಇದು ಕೊನೆಯ ಮುಖ್ಯಮಂತ್ರಿ ಆಗುವ ಅವಕಾಶ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಯಾಕೆಂದರೆ 2೦28 ಕ್ಕೆ ಕರ್ನಾಟಕದ ವಿಧಾನಸಭಾ ಚುನಾವಣೆ ನಡೆದಾಗ ಸಿದ್ದರಾಮಯ್ಯನವರಿಗೆ 81 ವರ್ಷ ವಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾಗುವ ಅವಕಾಶ ತನ್ನ ವಯಸ್ಸಿನ ಕಾರಣದಿಂದ ಅವರಿಗೆ ಸಿಗದೇ ಇರಬಹುದು.
ಯಾಕೆಂದರೆ ದೇಶದ ಇತಿಹಾಸದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ನಾವು ಮುಖ್ಯಮಂತ್ರಿಯನ್ನು ಇತ್ತೀಚಿನ ದಿನಗಳಲ್ಲಿ ಕಂಡಿರುವುದು ಬಹಳ ಅಪರೂಪ.

ಈ ಎಲ್ಲ ನೆಲೆಗಳಲ್ಲಿ ವಿಶ್ಲೇಷಿಸಿದಾಗ ಈ ಬಾರಿ ಬಿಜೆಪಿ ಹಲವು ವೈಫಲ್ಯಗಳನ್ನು ಕಾಣುತ್ತಿದ್ದು, ಸಿದ್ದರಾಮಯ್ಯನವರು ತಮ್ಮ ವರ್ಚಸ್ಸನ್ನು ಇನ್ನಷ್ಟು ಹಿಗ್ಗಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಸಿದ್ದರಾಮಯ್ಯ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಈ ಸಂದರ್ಭ ಅವರಿಗೆ ಮುಖ್ಯಮಂತ್ರಿಯಾಗುವ ಬಹುದೊಡ್ಡ ಅವಕಾಶ ಲಭ್ಯವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.


ಆದರೆ ಇನ್ನೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ
ಹಠದಲ್ಲಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಬಿಟ್ಟು ಡಿಕೆ ಶಿವಕುಮಾರ್ ಅವರಿಗೆ ಪಟ್ಟ ಕಟ್ಟುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಇನ್ನೊಂದು ಕಡೆಯಲ್ಲಿ ಈ ಅಂತಿಮ ಅವಕಾಶವನ್ನು ಸಿದ್ದರಾಮಯ್ಯ ಉಪಯೋಗಿಸದೆ ಸುಮ್ಮನಿರಲು ಸಾಧ್ಯವೇ? ಇದು ಮಿಲಿಯನ್ ಡಾಲರ್ ಪ್ರಶ್ನೆ. ಯಾಕೆಂದರೆ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸುವ ಹಾಗೂ ಕೇಂದ್ರದಲ್ಲಿ ಅಧಿಕಾರ ಹೊಂದುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಈ ನೆಲೆಯಲ್ಲಿ ಈ ಬಾರಿ ಅಧಿಕಾರ ಹಿಡಿದರೆ ಕರ್ನಾಟಕದಲ್ಲಿ ಮಾತ್ರ ಎಂಬ ಸ್ಥಿತಿಯಲ್ಲಿದೆ. ಇಂತಹ ಒಂದು ಗೋಲ್ಡನ್ ಆಪರ್ಚುನಿಟಿಯನ್ನು ಸಿದ್ದರಾಮಯ್ಯ ಕೈ ಚೆಲ್ಲಲು ಸಾಧ್ಯವೇ ಎಂಬುದು ಬಹುತೇಕ ರಾಜಕೀಯ ವಿಶ್ಲೇಷಕರ ಪ್ರಶ್ನೆ.

ಒಂದು ವೇಳೆ ಸಿದ್ದರಾಮಯ್ಯ ಕೈ ಚೆಲ್ಲಿದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಯಾಗುವ ಅವಕಾಶಗಳು ಲಭ್ಯವಾಗದೇ ಇರಬಹುದು. ಯಾಕೆಂದರೆ ವಯಸ್ಸಿನ ಕಾರಣದಿಂದ ತನಗಿಂತ ಕಿರಿಯರಿಗೆ ಬಿಟ್ಟು ಕೊಡಬೇಕಾದ ಅನಿವಾರ್ಯ ಪ್ರಸಂಗ ಎದುರಾಗಬಹುದು. ಈ ಎಲ್ಲ ಅಂಶಗಳ ಆಧಾರದ ಮೇಲೆ ಈ ಬಾರಿ ಅವಕಾಶ ಕೊನೆಯ ಅವಕಾಶ ವಾಗಿ ಸಿದ್ದರಾಮಯ್ಯನವರ ಮುಂದಿದೆ. ಅದರೊಂದಿಗೆ ಅವರು ಇದು ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಈ ಕೊನೆಯ ಅವಕಾಶವನ್ನು ಅವರು ಕೈ ಚೆಲ್ಲುತ್ತಾರೋ? ಅಥವಾ ಯಾವ ಪರಿಸ್ಥಿತಿ ಬಂದರೂ ಕೈಹಿಡಿಯುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ