ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

8ರ ಹರೆಯದ ಬಾಲಕನ ಸಾಹಸ: ನದಿಯಲ್ಲಿ ಮುಳುಗುತ್ತಿದ್ದ 11 ವರ್ಷದ ಬಾಲಕನನ್ನು ರಕ್ಷಿಸಿದ 8ರ ಬಾಲಕ

Twitter
Facebook
LinkedIn
WhatsApp
8ರ ಹರೆಯದ ಬಾಲಕನ ಸಾಹಸ: ನದಿಯಲ್ಲಿ ಮುಳುಗುತ್ತಿದ್ದ 11 ವರ್ಷದ ಬಾಲಕನನ್ನು ರಕ್ಷಿಸಿದ 8ರ ಬಾಲಕ

ಮುಳ್ಳೇರಿಯ, ಫೆ 09: ಹೊಳೆಗೆ ಸ್ನಾನಕ್ಕಿಳಿದು ಅಪಾಯದಲ್ಲಿದ್ದ 11 ವರ್ಷದ ಬಾಲಕನನ್ನು 8 ವರ್ಷದ ಬಾಲಕ ರಕ್ಷಿಸಿದ ಘಟನೆ ಮುಳ್ಳೇರಿಯಾದಲ್ಲಿ ನಡೆದಿದೆ. 

ಪಳ್ಳಂಗೋಡು ಸಮೀಪದ ಪಯಸ್ವಿನಿ ಹೊಳೆಯಲ್ಲಿ ಸ್ಥಳೀಯ ಬಾಲಕನೊಬ್ಬ ಸ್ನಾನಕ್ಕೆ ಇಳಿದಿದ್ದ. ಈ ವೇಳೆ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಬಾಲಕ ಅಪಾಯಕ್ಕೆ ಸಿಲುಕಿದ್ದ. ಕೂಡಲೇ ಆತನ ಜೊತೆಗಿದ್ದ ಪಳ್ಳಂಗೋಡಿನ ಇಬ್ರಾಹಿಂ ನಈಮಿ-ಬುಶ್ರಾ ದಂಪತಿಯ ಪುತ್ರ ಮುಹಮ್ಮದ್‌ ಹಿಬಾತುಲ್ಲ (8) ಸಾಹಸಗೈದು ಅಪಾಯಕ್ಕೆ ಸಿಲುಕಿದ್ದ 11 ವರ್ಷದ ಬಾಲಕನನ್ನು ನೀರಿನಿಂದ ಮೇಲಕ್ಕೆತ್ತಿ ರಕ್ಷಿಸಿದ್ದಾನೆ. ಹಿಬಾತುಲ್ಲ ಸ್ಥಳೀಯ ಎಲ್‌ಪಿ ಶಾಲೆಯ ವಿದ್ಯಾರ್ಥಿ.

ಬಾಲಕ ಹಿಬಾತುಲ್ಲನ ಸಾಹಸ ಮತ್ತು ಸಮಯಪ್ರಜ್ಞೆಯಿಂದಾಗಿ ಇನ್ನೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಇದಕ್ಕಾಗಿ ಬಾಲಕನಿಗೆ ಸಾರ್ವಜನಿಕರಿಂದ ತೀವ್ರ ಪ್ರಶಂಸೆ ವ್ಯಕ್ತವಾಗಿದೆ. ಎಸ್‌.ಜೆ.ಎಂ. ಜಿಲ್ಲಾ ಸಮಿತಿಯು ಹಿಬಾತುಲ್ಲನನ್ನು ಅಭಿನಂದಿಸಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ