ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕಣ್ಣು ಕಿತ್ತ ದುರುಳರು!

Twitter
Facebook
LinkedIn
WhatsApp
ಸಿಂಧ್: 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕಣ್ಣು ಕಿತ್ತ ದುರುಳರು!

ಪಾಕಿಸ್ತಾನ (ಸಿಂಧ್): ಅತ್ಯಂತ ಘನಘೋರ ಘಟನೆಯ ಸಿಂಧ್ ಪ್ರಾಂತ್ಯದಲ್ಲಿ ವರದಿಯಾಗಿದೆ. 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಬಳಿಕ ಆರೋಪಿಗಳ ಗುರುತು ಪತ್ತೆ ಹಚ್ಚುವ ಆತಂಕದಿಂದ ಬಾಲಕಿಯ ಕಣ್ಣನ್ನೇ ಕಿತ್ತ ಘಟನೆ ನಡೆದಿದೆ.

ಪಾಕಿಸ್ತಾನದಲ್ಲಿ ಮಹಿಳೆಯರು, ಬಾಲಕಿಯರ ಮೇಲಿನ ದೌರ್ಜನ್ಯ, ಕಿರುಕುಳ ಎಗ್ಗಿಲ್ಲದೆ ನಡೆಯತ್ತಿದೆ. ಪ್ರತಿ ದಿನ ಒಂದಕ್ಕಿಂತ ಒಂದು ಘನಘೋರ ಘಟನೆಗಳು ವರದಿಯಾಗುತ್ತಿದೆ. ಇದೀಗ 8 ವರ್ಷದ ಪುಟ್ಟ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಇಷ್ಟಕ್ಕೆ ಕಾಮುಕರ ಅಟ್ಟಹಾಸ ಮುಗಿದಿಲ್ಲ. ಈ ಆರೋಪಿಗಳನ್ನು ಬಾಲಕಿ ಗುರುತಿಸುವ ಕಾರಣದಿಂದ ಆಕೆಯ ಕಣ್ಣುಗಳನ್ನೇ ಕಿತ್ತಿದ್ದಾರೆ. ಬಳಿಕ ಮುಖವನ್ನು ಕಲ್ಲಿನಿಂದ ಉಜ್ಜಿದ್ದಾರೆ. ತೀವ್ರ ರಕ್ತ ಸ್ರಾವದಿಂದ ಬಳಲಿದ ಬಾಲಕಿಯನ್ನು ಪೋಷಕರು ಸ್ಥಳೀಯ ಆಸ್ಪತ್ರೆ ದಾಖಲಿಸಿದ್ದಾರೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಆಕೆಯ ಗುಪ್ತಾಂಗದಿಂದಲೂ ರಕ್ತ ಸ್ರಾವವಾಗುತ್ತಿದ್ದರೆ, ಕಣ್ಣು ಹಾಗೂ ಮುಖದಿಂದಲೂ ರಕ್ತ ಸ್ರಾವವಾಗುತ್ತಿದೆ. ತೀವ್ರ ನಿಘಾ ಘಟಕದಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಲೇ ಇದೆ. ಇದೀಗ ನಮ್ಮ ಬಾಲಕಿಯನ್ನೇ ಕಾಮುಕರು ನಿರ್ಜೀವ ಮಾಡಿದ್ದಾರೆ ಎಂದು ತಾಯಿ ಅಳಲು ತೋಡಿಕೊಂಡಿದ್ದಾರೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿರುವ ಉಮರಕೋಟ್‌ನಲ್ಲಿ ಈ ಘಟನೆ ನಡೆದಿದೆ. ಸಿಂಧ್ ಪ್ರಾಂತ್ಯದಲ್ಲಿ ಅತೀ ಹೆಚ್ಚಿನ ಹಿಂದೂಗಳು ವಾಸಿಸುತ್ತಿದ್ದಾರೆ. ಇಲ್ಲಿ ಮುಗ್ದ ಹಿಂದೂ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಕಿಡ್ನಾಪ್ ಮಾಡುವುದು, ಅತ್ಯಾಚಾರ ಎಸಗುವುದು ನಿರಂತರವಾಗಿ ನಡೆಯುತ್ತಿದೆ.  ಇದೀಗ 8 ವರ್ಷದ ಬಾಲಕಿಯ ಮೇಲೆ ಘನಘೋರ ಅತ್ಯಾಚಾರ ನಡೆದಿದೆ. ತೀವ್ರ ನೋವಿನಿಂದ ಬಳಲುತ್ತಿರುವ ಬಾಲಕಿ ಸ್ಥಿತಿ ನೆನೆದು ಪೋಷಕರು ಸೇರಿದಂತೆ ಸಿಂಧ್ ಪ್ರಾಂತ್ಯದ ಹಿಂದೂ ಸಮುದಾಯ ಕಣ್ಣೀರಿಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist