ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಪಾಟ್ನ(ಅ.08): ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ ಅತ್ತ ಚುನಾವಣ ತಂತ್ರಗಾರ, ರಾಜಕೀಯ ನಾಯಕ ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಪಾದಯಾತ್ರೆ ಮೂಲಕ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಪ್ರಶಾಂತ್ ಕಿಶೋರ್ ನೀಡಿರುವ ಹೇಳಿಕೆ ಇದೀಗ ಬಿಹಾರ ಉಪ ಮುಖ್ಯಮಂತ್ರಿ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ಗೆ ಇರಿಸು ಮುರಿಸು ತಂದಿದೆ. ಲಾಲು ಪ್ರಸಾದ್ ಯಾದವ್ ಪುತ್ರ ಅನ್ನೋ ಕಾರಣಕ್ಕೆ 9ನೇ ಕ್ಲಾಸ್ ಓದಿದ ತೇಜಸ್ವಿ ಯಾದವ್ ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಧರ್ಮಪುರದಲ್ಲಿ ಆಯೋಜಿಸಿದ ಸಾರ್ವಜನಿಕ ರ್ಯಾಲಿಯನ್ನುದ್ದೇಶಿ ಮಾತನಾಡಿದ ಪ್ರಶಾಂತ್ ಕಿಶೋರ್, ಬಿಹಾರದ ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಜನಸಾಮಾನ್ಯರ ಮಕ್ಕಳು 9ನೇ ತರಗತಿ ಓದಿದಿದ್ದರೆ ಗುಮಾಸ್ತನಾಗಲು ಸಾಧ್ಯವಿಲ್ಲ. ಆದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಾಸಕ 9ನೇ ತರಗತಿ ಫೇಲ್ ಆಗಿದ್ದರೂ ಅತ್ಯುನ್ನತ ಹುದ್ದೆ ಸಿಗುತ್ತಿದೆ. ಈ ವ್ಯವಸ್ಥೆಯನ್ನು ಬದಲಾಯಿಸಬೇಕು. ಇನ್ನು ಎಷ್ಟು ದಿನ ರಾಜಕಾರಣಿಗಳ ಮಕ್ಕಳು ಯಾವುದೇ ಅರ್ಹತೆ ಇಲ್ಲದೆ ಹುದ್ದೆ ಅಲಂಕರಿಸುವ ಪದ್ಧತಿ ಇರಬೇಕು. ಇದನ್ನು ಜನಸಾಮಾನ್ಯರು ಬದಲಾಯಿಸಬೇಕು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಬಿಹಾರದಲ್ಲಿ ಜೆಡಿಯುನ ನಿತೀಶ್ ಕುಮಾರ್ ಹಾಗೂ ಆರ್ಜೆಡಿಯ ಲಾಲುಪ್ರಸಾದ್ ಯಾದವ್ ವಿರುದ್ಧ ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುವ ಹವಣಿಕೆಯಿಂದ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ 3500 ಕಿ.ಮೀ. ಪಾದಯಾತ್ರೆ ಆರಂಭಿಸಿದ್ದಾರೆ.
ಪಾದಯಾತ್ರೆಯು ಸುಮಾರು 12ರಿಂದ 18 ತಿಂಗಳು ನಡೆಯುವ ಸಾಧ್ಯತೆಯಿದ್ದು, ಬಿಹಾರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಲಿದೆ. ಇದಕ್ಕೆ ‘ಜನ ಸುರಾಜ್’ ಎಂದು ಹೆಸರಿಡಲಾಗಿದ್ದು, ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬದ ದಿನ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಿಂದ ಆರಂಭಗೊಂಡಿದೆ. ಈಗಾಗಲೇ ರಾಜಕೀಯ ಪ್ರವೇಶಿಸಿರುವ ಪ್ರಶಾಂತ್ ಕಿಶೋರ್, ಈ ಯಾತ್ರೆಯಲ್ಲಿ ತಮಗೆ ಸಿಗುವ ಜನಬೆಂಬಲವನ್ನು ನೋಡಿಕೊಂಡು ಬಿಹಾರದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?