ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾರುತಿಗೆ ಬಂಪರ್‌ – ನಿವ್ವಳ ಲಾಭ 4 ಪಟ್ಟು ಏರಿಕೆ, ಇನ್ನೂ 4.12 ಲಕ್ಷ ವಾಹನಗಳ ಆರ್ಡರ್‌ ಬಾಕಿ

Twitter
Facebook
LinkedIn
WhatsApp
ಮಾರುತಿಗೆ ಬಂಪರ್‌ – ನಿವ್ವಳ ಲಾಭ 4 ಪಟ್ಟು ಏರಿಕೆ, ಇನ್ನೂ 4.12 ಲಕ್ಷ ವಾಹನಗಳ ಆರ್ಡರ್‌ ಬಾಕಿ

ನವದೆಹಲಿ: ಸೆಪ್ಟೆಂಬರ್‌ಗೆ ಅಂತ್ಯಗೊಂಡ ಎರಡನೇ ತ್ರೈಮಾಸಿಕದಲ್ಲಿ(Q2 Results) ದೇಶದ ಅತಿ ದೊಡ್ಡ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ಕಂಪನಿಯ(Maruti Suzuki) ನಿವ್ವಳ ಲಾಭ 4 ಪಟ್ಟು ಹೆಚ್ಚಳವಾಗಿದೆ.

ಕಳೆದ ವರ್ಷ ಈ ಅವಧಿಯಲ್ಲಿ 475.3 ಕೋಟಿ ರೂ. ನಿವ್ವಳ ಲಾಭ(Net Profit) ದಾಖಲಿಸಿದರೆ ಈ ಹಣಕಾಸು ವರ್ಷದಲ್ಲಿ 2,061 ಕೋಟಿ ರೂ. ಲಾಭ ದಾಖಲಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46 ರಷ್ಟು ಏರಿಕೆಯಾಗಿ 29,931 ಕೋಟಿ ರೂ. ಆದಾಯ ದಾಖಲಿಸಿದೆ. ಹಿಂದಿನ ತ್ರೈಮಾಸಿಕದಲ್ಲಿ 487 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು.

ಮಾರುತಿ ಕಂಪನಿಯಿಂದ ಷೇರು ಪೇಟೆಗೆ ಈ ಮಾಹಿತಿ ಸಿಗುತ್ತಿದ್ದಂತೆ ಬಾಂಬೆ ಷೇರು ಮಾರುಕಟ್ಟೆಯಲ್ಲಿ ಷೇರು ಮೌಲ್ಯ ಶೇ.5 ರಷ್ಟು ಏರಿಕೆಯಾಗಿದೆ. ಷೇರು ಮೌಲ್ಯ ಒಂದೇ ದಿನ 506.65 ರೂ. ಏರಿಕೆಯಾಗಿದ್ದು ದಿನದ ಅಂತ್ಯಕ್ಕೆ ಒಂದು ಷೇರು ಬೆಲೆ 9,548 ರೂ.ನಲ್ಲಿ ಕೊನೆಯಾಗಿದೆ. 

ಈ ಅವಧಿಯಲ್ಲಿ 5.17 ಲಕ್ಷ ಕಾರುಗಳನ್ನು ಮಾರಾಟ ಮಾಡಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.36ರಷ್ಟು ಬೆಳವಣಿಗೆ ಸಾಧಿಸಿದೆ. ಈ ಪೈಕಿ ದೇಶದಲ್ಲಿ 4.54 ಲಕ್ಷ, ವಿದೇಶಕ್ಕೆ 63,195 ಕಾರುಗಳನ್ನು ಮಾರಾಟ ಮಾಡಲಾಗಿದೆ. ತ್ರೈಮಾಸಿಕ ಒಂದರರಲ್ಲಿ ಆಗಿರುವ ಗರಿಷ್ಠ ಮಾರಾಟ ಇದಾಗಿದೆ.

ಎಲೆಕ್ಟ್ರಾನಿಕ್‌ ಬಿಡಿಭಾಗಗಳ ಕೊರತೆಯಿಂದಾಗಿ ಸುಮಾರು 35 ಸಾವಿರ ವಾಹನಗಳ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ ಎಂದು ಕಂಪನಿ ಹೇಳಿದೆ.

ಈ ತ್ರೈಮಾಸಿಕದ ಅಂತ್ಯಕ್ಕೆ ಸುಮಾರು 4.12 ಲಕ್ಷ ವಾಹನಗಳ ಆರ್ಡರ್‌ ಬಾಕಿ ಉಳಿದಿವೆ. ಈ ಪೈಕಿ 1.3 ಲಕ್ಷ ವಾಹನಗಳ ಬುಕ್ಕಿಂಗ್‌ಗಳು ಇತ್ತೀಚಿಗೆ ಬಿಡುಗಡೆ ಮಾಡಲಾದ ಮಾದರಿಗಳಿಗೆ ಬಂದಿದೆ ಎಂದು ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist