ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಬ್ಬರು ಗಂಡಂದಿರ ಮಧ್ಯೆ ಡಬಲ್ ಗ್ರಾಜುಯೇಟ್ ಹೆಂಡತಿಯ ಡಬಲ್ ಲವ್! ಚಿಕ್ಕಬಳ್ಳಾಪುರ ಠಾಣೆ ಮುಂದೆ ಹೈಡ್ರಾಮಾ

Twitter
Facebook
LinkedIn
WhatsApp
ಇಬ್ಬರು ಗಂಡಂದಿರ ಮಧ್ಯೆ ಡಬಲ್ ಗ್ರಾಜುಯೇಟ್ ಹೆಂಡತಿಯ ಡಬಲ್ ಲವ್! ಚಿಕ್ಕಬಳ್ಳಾಪುರ ಠಾಣೆ ಮುಂದೆ ಹೈಡ್ರಾಮಾ

ಈ ಕಥಾನಕದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ (Chikkaballapur) ಮಹಿಳಾ ಠಾಣೆ ಮುಂದೆ ನಮ್ಮ ಮಗಳನ್ನು ನಮ್ಮ ಜೊತೆ ಕಳುಹಿಸಿ ಕೊಡಿ ಅಂತ ಆ ಇಬ್ಬರು ಗಂಡಂದಿರ ಮುದ್ದಿನ ಹೆಂಡತಿಯ ವೃದ್ದ ತಂದೆ ತಾಯಿ, ಅತ್ತು ಕರೆದು ಗೋಳಾಡಿದ್ದಾರೆ. ಹೌದು!! ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಣಿಗಾನಹಳ್ಳಿ ನಿವಾಸಿ ಜಯಮ್ಮ ಹಾಗೂ ವಿ ನಾರಾಯಣಪ್ಪ ದಂಪತಿಗೆ ಮೂರು ಜನ ಹೆಣ್ಣು ಮಕ್ಕಳು. ಅದರಲ್ಲಿ ದೊಡ್ಡ ಮಗಳು ಮಂಜುಳಾಳನ್ನು ಆಂಧ್ರದ ವಿ ಕೋಟೆ ಗ್ರಾಮದ ಸುಬ್ರಮಣ್ಯಗೆ ಕೊಟ್ಟು ಮದುವೆ ಮಾಡಿಕೊಟ್ಟಿದ್ರು.

ಮಂಜುಳಾರ ಕೊನೆಯ ತಂಗಿಯೇ ದಿವ್ಯಾ. ದಿವ್ಯಾ ಸ್ವತಃ ತನ್ನ ಅಕ್ಕನ ಗಂಡ ಬಾವ ಸುಬ್ರಮಣ್ಯ ನನ್ನು ಪ್ರೀತಿಸಿದಳು. ಕಾಡಿ ಬೇಡಿ ಅತ್ತು ಕರೆದು ಭಾವನನ್ನೇ ಮದುವೆ ಮಾಡಿಕೊಂಡಿದ್ದಳು. ಆದರೆ ಮದುವೆಯಾಗಿ ಕೇವಲ ಹತ್ತು ತಿಂಗಳು ಅಷ್ಟೆ… ಅಷ್ಟರಲ್ಲೆ ತಾಜಾ ಆಗಿ ಪರಿಚಯಸ್ಥನಾದ ಕೊರಿಯರ್ ಬಾಯ್ ಚಂದ್ರಶೇಖರ್ ಎನ್ನುವವನನ್ನು ಪ್ರೀತಿಸತೊಡಗಿದಳು. ಮನೆಯವರ ವಿರೋಧದ ನಡುವೆ ಮದುವೆಯೂ ಮಾಡಿಕೊಂಡಳು. ಇದರಿಂದಾಗಿ ದಿವ್ಯಾ ಪೋಷಕರಿಗೆ ಈ ಗೋಳಾಟ.

ಅಸಲಿಗೆ ಪುಣ್ಯಾತಗಿತ್ತಿ ದಿವ್ಯಾ ಡಬಲ್ ಗ್ರಾಜುಯೇಟ್! ದಿವ್ಯಾ ಬಿ.ಎಡ್. ಎಂ.ಎಸ್ಸಿ ವಿದ್ಯಾಭ್ಯಾಸ ಮಾಡಿದ್ದು, ಮುಳಬಾಗಿಲಿನ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಸೀನಿಯರ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಳು. ಮದುವೆಯಾಗಿ ಕೆಲ ತಿಂಗಳಲ್ಲೆ ಕೋಲಾರದ ಕೆ.ಜೆ.ಎಫ್​ ನ ಕಂಬಂಪಲ್ಲಿ ನಿವಾಸಿ 29 ವರ್ಷದ ಕೊರಿಯರ್ ಬಾಯ್ ಚಂದ್ರಶೇಖರ್ ಗೆ ಪರಿಚಯವಾಗಿದ್ದಾಳೆ. ಪ್ರೀತಿ ಪ್ರೇಮ ಅಂತಾ ಸುತ್ತಾಡಿದ್ದಾಳೆ. ಇದ್ದನ್ನರಿತ ಆಕೆಯ ಪೋಷಕರು ಮಗಳು ದಿವ್ಯಾಳನ್ನು ಕೋಲಾರ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಡಿ.ಸಿ.ಸಿ ಬ್ಯಾಂಕ್ ಗೆ ವರ್ಗಾವಣೆ ಮಾಡಿಸಿದ್ದರು.

ಅಲ್ಲಿಯೂ ದಿವ್ಯ ಜೋಡಿ ತನ್ನ ಪ್ರೇಮ ಪುರಾಣ ಮುಂದುವರೆಸಿದೆ. ದಿವ್ಯಾ-ಚಂದ್ರಶೇಖರ್ ಪ್ರೇಮಕ್ಕೆ, ಮರು ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾದ ಕಾರಣ ಇಬ್ಬರೂ ಇದ್ದಕ್ಕಿದ್ದಂತೆ ಜೂಟ್​ ಆಗಿದ್ರು. ಇದರಿಂದ ಆಕೆಯ ಪೋಷಕರು ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲು ಮಾಡಿದ್ರು. ಪೊಲೀಸರು ಇಬ್ಬರನ್ನೂ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ. ಇಬ್ಬರೂ ಜೂನ್ 10ರಂದೇ ಮದುವೆ ಆಗಿದ್ದು, ಅಗಸ್ಟ್​ 10ರಂದು ಬಂಗಾರಪೇಟೆಯಲ್ಲಿ ಮದುವೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಇದರಿಂದ ತಮ್ಮನ್ನು ತಮ್ಮ ಪಾಡಿಗೆ ಬದುಕಲು ಬಿಡಿ ಅಂತ ಪೊಲೀಸರು ಹಾಗೂ ತಂದೆ ತಾಯಿಯ ಎದುರು ಗೋಗರೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ