ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bengaluru: ಕಡೆಗೂ ಸಾವು ಬದುಕಿನ ಹೋರಾಟದಲ್ಲಿ ಗೆದ್ದ ಬೈಕ್ ಸವಾರ!

Twitter
Facebook
LinkedIn
WhatsApp
Bengaluru: ಕಡೆಗೂ ಸಾವು ಬದುಕಿನ ಹೋರಾಟದಲ್ಲಿ ಗೆದ್ದ ಬೈಕ್ ಸವಾರ!

ಬೆಂಗಳೂರು (ನ.17): ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿ ಕೋಮಾ ಸ್ಥಿತಿಗೆ ತಲುಪಿದ್ದ, ಬೈಕ್ ಸವಾರ ಸಂದೀಪ್ ಕಡೆಗೂ ಸಾವು ಬದುಕಿನ ಹೋರಾಟ ಜಯಿಸಿದ್ದಾರೆ. ಈಗ ಪ್ರಜ್ಞಾವಸ್ಥೆಗೆ ಮರಳಿ ಬಂದಿದ್ದಾರೆ. ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಸಂದೀಪ್‌ಗೆ ಹೆಚ್ಚಿನ ಚಿಕಿತ್ಸೆ ಮುಂದುವರಿದಿದೆ. ಸಂದೀಪ್ ವಿದ್ಯಾರಣ್ಯಪುರ ನಿವಾಸಿಯಾಗಿದ್ದರು. 

ಸಂದೀಪ್ ನವೆಂಬರ್ ಒಂದರಂದು ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬಿದ್ದಿದ್ದು, ಸ್ನೇಹಿತರ ಜೊತೆ ಕ್ರಿಕೆಟ್ ಆಡಿ ವಾಪಸ್ ಬರುವಾಗ ಅವಘಡ ನಡೆದಿತ್ತು. ಹೆಬ್ಬಾಳದ ಖಾಸಗಿ ಅಸ್ಪತ್ರೆಯಲ್ಲಿ ಸಂದೀಪ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು, ಪ್ರಜ್ಞಾಹೀನನಾಗಿ ಕೋಮಾ ಸ್ಥಿತಿಗೆ ತಲುಪಿದ್ದರು, ವೈದ್ಯರು ನಿರಂತರ ಒಂದು ವಾರ ಚಿಕಿತ್ಸೆ ನೀಡಿ ನಿಗಾ ವಹಿಸಿದ್ದರು. ಬೈಕ್ ಸವಾರ ಜೀವನ್ಮರಣದ ಹೋರಾಟ ಜಯಿಸಿದ್ಧಾರೆ. ಬೈಕ್‌ನಿಂದ ಬಿದ್ದ ಬಗ್ಗೆ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಸಂದೀಪ್ ಪತ್ನಿ ಸೀಮಾ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿದ್ದರು.

ಸ್ವಲ್ಪ ರಿಕವರಿ ಆಗುತ್ತಿದ್ದಾರೆ: ನಿನ್ನೆ (ಬುಧವಾರ) ಸಂದೀಪ್ ಸ್ವಲ್ಪ ಕಣ್ಣು ಬಿಟ್ಟಿದ್ದಾರೆ. ಇನ್ನೂ ಕೂಡ ಯಾರನ್ನು ಗುರುತು‌ ಹಿಡಿಯುತ್ತಿಲ್ಲ. ಸ್ವಲ್ಪ ರಿಕವರಿ ಆಗುತ್ತಿದ್ದಾರೆ ಎಂದು ಸಂದೀಪ್ ಪತ್ನಿ ಸೀಮಾ ಹೇಳಿದ್ದಾರೆ. ಡಾಕ್ಟರ್ ಇನ್ನೂ ರಿಕವರಿ ಆಗಲು ಹಲವು ತಿಂಗಳು ಬೇಕಾಗತ್ತೆ ಅಂತಾ ಹೇಳಿದ್ದಾರೆ. ಇದುವರೆಗೂ ಅಸ್ಪತ್ರೆಗೆ 14 ಲಕ್ಷ ಹಣ ಖರ್ಚಾಗಿದೆ. ಮಾಧ್ಯಮದಲ್ಲಿ ವರದಿ ಪ್ರಸಾರವಾದ ನಂತರ ಹಲವರು ಸಹಾಯ ಮಾಡಿದ್ದಾರೆ. ಇನ್ನೂ ಹಲವು ತಿಂಗಳು ಚಿಕಿತ್ಸೆ ಅಗತ್ಯ ಹಿನ್ನಲೆ ಸಹಾಯದ ಅಗತ್ಯ ತುಂಬಾ ಇದೆ. ಈ  ಖಾಸಗಿ ಅಸ್ಪತ್ರೆಯಲ್ಲಿ ತುಂಬಾ ಹಣ ಖರ್ಚಾಗುತ್ತಿದೆ ಎಂದು ತಿಳಿಸಿದರು.

ಹಾಗಾಗೀ ಹಲವು ಸರ್ಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡುವಂತೆ ಹಲವು ಆಸ್ಪತ್ರೆಗೆ ಹೋಗಿದ್ದೆ. ಆದರೆ ಒಬ್ಬರು ಒಂದೊಂದು ಕಾರಣ ನೀಡುತ್ತಿದ್ದಾರೆ. ನಿಮ್ಹಾನ್ಸ್‌ನಲ್ಲಿ ಬೆಡ್ ಇಲ್ಲ ಅಂತಾ ಹೇಳಿದ್ರು, ಈ ಎಸ್‌ಐ ಅಸ್ಪತ್ರೆಯಲ್ಲಿ ನ್ಯೂರೂ ಸರ್ಜನ್ ಇಲ್ಲ ಅಂತಾರೇ. ಇನ್ನೂ ಕೆಲವು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಇಲ್ಲ. ವೆಂಟಿಲೇಟರ್ ಇಲ್ಲ ಅಂತಾ ಹೇಳ್ತಾರೆ. ಇದುವರೆಗೂ ಕೂಡ ಬಿಬಿಎಂಪಿ ಅಧಿಕಾರಿಗಳು ಯಾವುದೇ ಸಹಾಯ ಮಾಡಿಲ್ಲ. ಇಂತಹ ಪರಿಸ್ಥಿತಿ ಯಾರಿಗೂ ಬರೋದು ಬೇಡ. ಇನ್ನೂ ರಸ್ತೆಯಲ್ಲಿ ‌ಹಾಗೇ ಗುಂಡಿಗಳು ಇವೇ ಅವುಗಳನ್ನು ದಯಾಮಾಡಿ ಮುಚ್ಚಿ. ನಮಗೆ ಬಂದ ಪರಿಸ್ಥಿತಿ ಯಾರಿಗೂ ಬರೋದು ಬೇಡ ಎಂದು ಸಂದೀಪ್ ಪತ್ನಿ ಸೀಮಾ ಮನವಿ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ