ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Kukke Subramanya ChampaShashti: ಸುಬ್ರಹ್ಮಣ್ಯದಲ್ಲಿ ನಾಳೆ ಬೆಳಗ್ಗೆ ದೇವರ ದರ್ಶನ ಇಲ್ಲ

Twitter
Facebook
LinkedIn
WhatsApp
Kukke Subramanya ChampaShashti: ಸುಬ್ರಹ್ಮಣ್ಯದಲ್ಲಿ ನಾಳೆ ಬೆಳಗ್ಗೆ ದೇವರ ದರ್ಶನ ಇಲ್ಲ

2 ವರ್ಷ​ಗಳ ಬಳಿಕ ಎಡೆ​ಸ್ನಾ​ನಕ್ಕೆ ಅವ​ಕಾ​ಶ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮರಥೋತ್ಸವ ಸೇವೆಯಲ್ಲಿ ಭಕ್ತರಿಗೆ ಗರಿಷ್ಠ 100 ಸೇವಾ ರಶೀದಿಗಳನ್ನು ನೀಡಲು ಮತ್ತು ಸೇವಾರ್ಥಿಗಳಿಗೆ ವಸತಿ, ಊಟೋಪಚಾರ ವ್ಯವಸ್ಥೆ ಕಲ್ಪಿಸುವ ಕ್ರಮಕೈಗೊಳ್ಳಲಾಯಿತು.

ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನಲೆಯಲ್ಲಿ ನಿರ್ಬಂಧಿಸಲಾಗಿದ್ದ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಚೌತಿ, ಪಂಚಮಿ, ಷಷ್ಠಿ ದಿನದಂದು ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾದಿಗಳು ಸ್ವ-ಇಚ್ಛೆಯಿಂದ ಭಾಗವಹಿಸುವವರಿಗೆ ಜಿಲ್ಲಾಧಿಕಾರಿ ನಿರ್ದೇಶನವನ್ನು ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಬೀದಿ ಉರುಳು ಸೇವೆ ಮಾಡುವವರಿಗೆ ಲಕ್ಷ ದಿಪೋತ್ಸವ ದಿನದಂದು ರಾತ್ರಿ ರಥೋತ್ಸವದ ಬಳಿಕ ಸಂಜೆ ಗಂಟೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡಲು ಸಲಹೆ ವ್ಯಕ್ತವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಲೆಮಾರಿ ಜಾನುವಾರು ಹಾಗೂ ಬೀದಿ ನಾಯಿ, ಹುಚ್ಚು ನಾಯಿಗಳ ಹಾವಳಿ ವ್ಯಾಪಕವಾಗಿರುವ ಬಗ್ಗೆ ದೂರು ವ್ಯಕ್ತವಾಯಿತು. ಚಂಪಾಷಷ್ಠಿ ಮಹೋತ್ಸವ ಸುಸೂತ್ರವಾಗಿ ನಡೆಯಲು ಎಲ್ಲರ ಸಹಕಾರ ಬೇಕು ಎಂದು ಹೇಳಿದ ಜಿಲ್ಲಾಧಿಕಾರಿ ರವಿಕುಮಾರ್‌ ಅವರು ಜನತೆಗೆ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ವಿಶೇಷವಾಗಿ ಕಲ್ಪಿಸಬೇಕು. ಎಲ್ಲೆಲ್ಲಿ ನೀರಿನ ವ್ಯವಸ್ಥೆ ಬೇಕೋ ಅಲ್ಲಿ ಕುಡಿಯುವ ನೀರು, ಮೋಬೈಲ್‌ ಶೌಚಾಲಯ ಕಲ್ಪಿಸುವಂತೆ ಸೂಚಿಸಿದರು. ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ಸುಳ್ಯ ತಹಸೀಲ್ದಾರ್‌ ಅನಿತಾಲಕ್ಷ್ಮೀ, ಕಡಬ ತಹಸೀಲ್ದಾರ್‌ ರಮೇಶ್‌ಬಾಬು, ಗ್ರಾ.ಪಂ.ಅಧ್ಯಕ್ಷೆ ಲಲಿತಾ ಕೆ. ಮತ್ತಿ​ತ​ರರು ಪಾಲ್ಗೊಂಡ​ರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ