ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾರೊಕ್ಕೂ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

Twitter
Facebook
LinkedIn
WhatsApp
ಮಾರೊಕ್ಕೂ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

ಬೆಲ್ಜಿಯನ್: ಫಿಫಾ ವಿಶ್ವಕಪ್‍ನಲ್ಲಿ (FIFA World Cup) ಮಾರೊಕ್ಕೂ (Morocco) ವಿರುದ್ಧ ಬೆಲ್ಜಿಯಂ (Belgium) ಸೋತ ಬೆನ್ನಲ್ಲೇ ಬೆಲ್ಜಿಯನ್‍ನಲ್ಲಿ ಅಭಿಮಾನಿಗಳು ರೊಚ್ಚಿಗೆದ್ದು ಹಿಂಸಾಚಾರಕ್ಕಿಳಿದಿದ್ದಾರೆ.

ಬೆಲ್ಜಿಯಂ ವಿರುದ್ಧ ಮಾರೊಕ್ಕೂ 2-0 ಅಂತರದಲ್ಲಿ ಗೆದ್ದ ಬೆನ್ನಲ್ಲೇ ಇತ್ತ ಬೆಲ್ಜಿಯಂ ರಾಜಧಾನಿ ಬೆಲ್ಜಿಯನ್‍ನಲ್ಲಿ ಫುಟ್‍ಬಾಲ್ ಅಭಿಮಾನಿಗಳು ಹಿಂಸಾಚಾರಕ್ಕೆ ಇಳಿದಿದ್ದಾರೆ. ರಸ್ತೆಯಲ್ಲಿದ್ದ ಕಾರ್, ಬೈಕ್‍ಗಳಿಗೆ ಬೆಂಕಿ ಇಟ್ಟು ಮಾರೊಕ್ಕೂ ದೇಶದ ಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಫುಟ್‍ಬಾಲ್ ಅಭಿಮಾನಿಗಳ ಕೋಪಕ್ಕೆ ಹಿಂಸಾಚಾರ ಹೆಚ್ಚುತ್ತಿದ್ದಂತೆ ಬೆಲ್ಜಿಯಂ ಪೊಲೀಸರು 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

ಹಿಂಸಾಚಾರಕ್ಕೆ ಇಳಿದ ಗುಂಪೊಂದು ರಾಷ್ಟ್ರೀಯ ಹೆದ್ದಾರಿಗಿಳಿದು ದಾಂಧಲೆಗೆ ಮುಂದಾಗಿದೆ. ಘಟನೆಯಲ್ಲಿ ಪತ್ರಕರ್ತರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಪೊಲೀಸರು ಹಿಂಸಾಚಾರದ ಸ್ಥಳದಲ್ಲಿ ಟಿಯರ್ ಗ್ಯಾಸ್ ಹಾಗೂ ನೀರು ಸಿಂಪಡಿಸಿ ಜನರನ್ನು ಚದುರಿಸಿದ್ದಾರೆ. ಈಗಾಗಲೇ ಬೆಲ್ಜಿಯನ್‍ನಲ್ಲಿ ಹಲವು ನಿರ್ಬಂಧಗಳನ್ನು ಹೊರಡಿಸಲಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ