ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಶೆಯಲ್ಲಿ ಮಲಗಿದ್ದವನ ಜೇಬಿಂದ ₹70 ಸಾವಿರ ಎಗರಿಸಿದ ಚೋರರು!

Twitter
Facebook
LinkedIn
WhatsApp
ನಶೆಯಲ್ಲಿ ಮಲಗಿದ್ದವನ ಜೇಬಿಂದ ₹70 ಸಾವಿರ ಎಗರಿಸಿದ ಚೋರರು!

ಬೆಂಗಳೂರು (ನ.28) : ಮದ್ಯದ ನಶೆಯಲ್ಲಿ ಅಂಗಡಿ ಬಳಿ ಮಲಗಿದ್ದ ವ್ಯಕ್ತಿಯ ಜೇಬಿನಲ್ಲಿದ್ದ 70 ಸಾವಿರ ರು. ಹಣವನ್ನು ದುಷ್ಕರ್ಮಿಗಳು ಎಗರಿಸಿರುವ ಘಟನೆ ಅಶೋಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಸ್ಟೀನ್‌ ಟೌನ್‌ ಬಿಡಿಎ ಕ್ವಾಟ್ರರ್ಸ್‌ ನಿವಾಸಿ ಶೇಕ್‌ ಶಾಹೀದ್‌ (30) ಹಣ ಕಳೆದುಕೊಂಡವರು. ಶೇಕ್‌ ಶಾಹೀದ್‌ ಅವರ ಸಂಬಂಧಿಕರನ್ನು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯಕೀಯ ಖರ್ಚಿಗಾಗಿ ಫೈನಾನ್‌ಶಿಯರ್‌ ಬಳಿ .70 ಸಾವಿರ ಸಾಲ ಪಡೆದಿದ್ದರು.

ನ.24ರಂದು ರಾತ್ರಿ 9ರ ಸುಮಾರಿಗೆ ಆಸ್ಪತ್ರೆಗೆ ತೆರಳಿ ಸಂಬಂಧಿಕರನ್ನು ಮಾತನಾಡಿಸಿಕೊಂಡು ನಂತರ ಶಿವಾಜಿ ನಗರದ ಚಚ್‌ರ್‍ ಬಳಿಯ ಇರುವ ಪ್ರಿನ್ಸ್‌ ವೈನ್‌ ಶಾಪ್‌ಗೆ ಹೋಗಿ ಮದ್ಯ ಖರೀದಿಸಿದ್ದಾರೆ. ನಂತರ ಶಿವಾಜಿನಗರ ಬೀಫ್‌ ಮಾರ್ಕೆಟ್‌ ಬಳಿ ತೆರಳಿ ಮದ್ಯವನ್ನು ಸೇವಿಸಿದ್ದಾರೆ. ಮದ್ಯದ ನಶೆ ಹೆಚ್ಚಾದ ಹಿನ್ನೆಲೆಯಲ್ಲಿ ಶೇಕ್‌ ಅಲ್ಲೇ ಮಲಗಿದ್ದಾರೆ. ಬಳಿಕ ಎಚ್ಚರವಾದಾಗ ಜೇಬಿನಲ್ಲಿದ್ದ .70 ಸಾವಿರ ಕಳ್ಳತನವಾಗಿರುವುದು ಅರಿವಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಕಾರು ಚಾಲಕನ ಕೊಂದು ತ.ನಾಡಲ್ಲಿ ಎಸೆದ ದುಷ್ಕರ್ಮಿಗಳು!

ಆನೇಕಲ್‌: ಕಾರು ಚಾಲಕನನ್ನು ಅಪಹರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಶವವನ್ನು ತಮಿಳುನಾಡಿನ ಹೊಸೂರು ತಾಲೂಕು ಥಳಿ ಸಮೀಪದ ಎಲೆಸಂದ್ರ ಬಳಿ ಎಸೆದಿರುವ ದಾರುಣ ಘಟನೆ ನೆರೆಯ ಡೆಂಕಣಿಕೋಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ತೋಗೂರು ನಿವಾಸಿ ಶಾಂತಕುಮಾರ್‌ ಅಶ್ವತ್‌್ಥ(30) ಕೊಲೆಯಾದ ಕಾರು ಚಾಲಕ. ದಾರಿ ಹೋಕರು ಶವವನ್ನು ಕಂಡು ಕೂಡಲೇ ಥಳಿ ಠಾಣೆಗೆ ಕರೆ ಮಾಡಿದಾಗ ಡೆಂಕಣಿಕೋಟೆ ಪೊಲೀಸರು ಸ್ಥಳಕ್ಕೆ ಹಾಜರಾದರು. ಶವವನ್ನು ಹೊರಳಿಸಿ ನೋಡಿದಾಗ ತಲೆ, ದವಡೆ ಹಾಗೂ ಕುತ್ತಿಗೆ ಭಾಗಗಳಿಗೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ಮಾಡಿರುವುದು ಕಂಡು ಬಂದಿದೆ. ಮೃತ ವ್ಯಕ್ತಿಯ ಜೇಬನ್ನು ತಪಾಸಣೆ ಮಾಡಿದಾಗ ದೊರೆತ ಚೀಟಿಯಲ್ಲಿನ ಮಾಹಿತಿ ತಿಳಿದು ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ.

ಕಾರು ಚಾಲಕ ಶಾಂತಕುಮಾರ್‌ ಕಳೆದ 10 ದಿನಗಳ ಹಿಂದೆ ಬಾರ್‌ ಒಂದರಲ್ಲಿ ರೌಡಿ ಶೀಟರ್‌ ನೇಪಾಳಿ ಮಂಜು ಜೊತೆ ಘರ್ಷಣೆ ನಡೆದು ನೇಪಾಳಿ ಮಂಜು ಹಲ್ಲೆ ಮಾಡಿದ್ದರು. ಈ ಬಗ್ಗೆ ಶಾಂತಕುಮಾರ್‌ ಎಲೆಕ್ಟ್ರಾನಿಕ್‌ ಸಿಟಿ ಠಾಣೆಗೆ ದೂರು ನೀಡಿದ್ದು ದೂರು ವಾಪಸ್‌ ಪಡೆಯುವಂತೆ ನೇಪಾಳಿ ಮಂಜು ಧಮಕಿ ಹಾಕಿದ್ದ. ಭಯಪಟ್ಟಶಾಂತಕುಮಾರ್‌ ನಂತರ ದೂರನ್ನು ವಾಪಸ್‌ ಪಡೆದಿದ್ದರು. 3 ದಿನಗಳಿಂದ ಚಾಲಕ ಶಾಂತಕುಮಾರ್‌ ಕಾಣೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ದೂರು ನೀಡಿದ್ದರು. ಶಾಂತಕುಮಾರ್‌ ಶವ ರಸ್ತೆ ಬದಿಯಲ್ಲಿ ಅನಾಥವಾಗಿ ಪತ್ತೆಯಾಗಿದ್ದು, ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತು. ಘಟನೆ ಸಂಬಂಧ ಥಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚು ಹಣ ಗಳಿಸಲು ಡ್ರಗ್ಸ್ ದಂಧೆ: ಇಬ್ಬ ಬಂಧನ

ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಪೆಡ್ಲರ್‌ಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇಜಾಸ್‌(30) ಮತ್ತು ಅರ್ಫತ್‌(32) ಬಂಧಿತರು. ಆರೋಪಿಗಳಿಂದ .10 ಲಕ್ಷ ಮೌಲ್ಯದ 60 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್‌, ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್‌, ಹಾಗೂ ಎರಡು ಮೊಬೈಲ್‌ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇಗೂರಿನಲ್ಲಿ ನೆಲೆಸಿದ್ದ ಆರೋಪಿಗಳು, ಕಡಿಮೆ ಸಮಯದಲ್ಲಿ ಸುಲಭವಾಗಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಡ್ರಗ್‌್ಸ ಮಾರಾಟ ದಂಧೆಯಲ್ಲಿ ತೊಡಗಿದ್ದರು. ನಗರದಲ್ಲಿರುವ ಆಫ್ರಿಕನ್‌ ಕಿಚನ್‌ಗಳ ಬಳಿ ಬರುವ ನೈಜೀರಿಯಾ ಪ್ರಜೆಗಳನ್ನು ಪರಿಚಯಿಸಿಕೊಂಡು ಕಡಿಮೆ ಬೆಲೆಗೆ ಮಾದಕವಸ್ತು ಖರೀದಿಸುತ್ತಿದ್ದರು. ಬಳಿಕ ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು ಸೇರಿದಂತೆ ಪರಿಚಿತ ಗ್ರಾಹಕರಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂ ಎಂಡಿಎಂಎ ಮಾದಕವಸ್ತುವಿಗೆ 10ರಿಂದ 12 ಸಾವಿರ ಪಡೆಯುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ಬೇಗೂರು ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ