ಸೋಮವಾರ, ಏಪ್ರಿಲ್ 29, 2024
ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಿವ್ ಇನ್ ರಿಲೇಶನ್‌ಶಿಪ್‍ನಲ್ಲಿದ್ದ ಪ್ರಿಯತಮೆಯನ್ನು ಕೊಲೆಗೈದ ಪ್ರಿಯಕರ

Twitter
Facebook
LinkedIn
WhatsApp
ಲಿವ್ ಇನ್ ರಿಲೇಶನ್‌ಶಿಪ್‍ನಲ್ಲಿದ್ದ ಪ್ರಿಯತಮೆಯನ್ನು ಕೊಲೆಗೈದ ಪ್ರಿಯಕರ

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‍ನಲ್ಲಿದ್ದ (Live In Relationship) ಪ್ರೇಮಿಗಳ ನಡುವೆ ಜಗಳ ಶುರುವಾಗಿ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ನೇಪಾಳ (Nepal) ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿ ಹಾಗೂ ನೇಪಾಳ ಮೂಲದ ಸಂತೋಷ್ ದಾಮಿ (27) ಕೊಲೆ ಮಾಡಿದ ಆರೋಪಿ. ಕೃಷ್ಣ ಕುಮಾರಿ ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಳು. ಸಂತೋಷ್ ಟಿ.ಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದ.

ಈ ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಅದಾದ ಬಳಿಕ ಕೃಷ್ಣಕುಮಾರಿ ಹಾಗೂ ಸಂತೋಷ್ ಇಬ್ಬರು ಸೇರಿ ರಾಮೂರ್ತಿನಗರದ ಟಿಸಿಪಾಳ್ಯದಲ್ಲಿ ಬಾಡಿಗೆ ರೂಮ್‍ನ್ನು ಪಡೆದಿದ್ದಾರೆ. ಆ ಬಳಿಕ ಅದೇ ಬಾಡಿಗೆ ರೂಂನಲ್ಲೇ ಇಬ್ಬರೂ ವಾಸಿಸುತ್ತಿದ್ದರು. 

crime

ಇಂದು ಬೆಳಗ್ಗೆ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಜಗಳ ತಾರಕ್ಕೇರಿದ್ದು ಕೃಷ್ಣಕುಮಾರಿಯನ್ನು ಸಂತೋಷ್ ದಾಮಿ ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ರಾಮೂರ್ತಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಒಂದು ವರ್ಷದ ಹಿಂದೆ ಈ ಇಬ್ಬರೂ ಬೆಂಗಳೂರಿಗೆ ಬಂದಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ