ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

Twitter
Facebook
LinkedIn
WhatsApp
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

ಮಂಡ್ಯ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 3 ಮಕ್ಕಳಿಗೆ ಅನ್ನದಲ್ಲಿ ವಿಷ ಉಣಿಸಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಮದ್ದೂರಿನ ಹೊಳೆಬೀದಿಯಲ್ಲಿ ವಾಸವಿದ್ದ ಉಸ್ನಾ ಕೌಸರ್ (30) ತನ್ನ ಮೂರು ಮಕ್ಕಳಿಗೆ ವಿಷ ಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾರಿಸ್ (7), ಆಲಿಸಾ (4) ಅನಮ್ ಫಾತಿಮಾ (2) ಎಂಬ ಮೂರು ಮಕ್ಕಳು ಮೃತರಾಗಿದ್ದಾರೆ.

ಉಸ್ನಾ ಕೌಸರ್‌ ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತು ಕೌಸರ್‌ ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ. ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಖಿಲ್ ಅಹಮದ್ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇದಕ್ಕೆ ಪೂರಕ ಎಂಬಂತೆ ಅಖಿಲ್ ಮೊಬೈಲ್‌ನಲ್ಲಿ ಕೌಸರ್‌ಗೆ ಪರ ಸ್ತ್ರೀಯ ಬೆತ್ತಲೆ ಫೋಟೋ ಹಾಗೂ ಆಕೆಯ ಜೊತೆ ಅಖಿಲ್ ಅಹಮದ್ ಇದ್ದ ಫೋಟೋಗಳು ಪತ್ತೆಯಾಗಿವೆ.

ಇದನ್ನು ಪ್ರಶ್ನೆ ಮಾಡಿದ್ದ ಕೌಸರ್, ಇದೇ ವಿಚಾರಕ್ಕೆ ಮನೆಯಲ್ಲಿ ಜೋರು ಗಲಾಟೆಯೂ‌ ಸಹ ನಡೆದಿದೆ. ನಂತರ ಇಬ್ಬರನ್ನು ಪೋಷಕರು ರಾಜಿ ಮಾಡಿದ್ದು, ಅಕ್ರಮ ಸಂಬಂಧ ಬಿಡುವುದಾಗಿ‌ ಅಖಿಲ್ ಹೇಳಿದ್ದ. ನಿನ್ನೆ ಉರುಫ್ ಹಿನ್ನೆಲೆ ಕೆಲಸ ಮುಗಿಸಿ ಬೇಗಾ ಮನೆಗೆ ಬರ್ತೀನಿ ಎಂದು ಕೆಲಸಕ್ಕೆ‌ ಅಖಿಲ್ ಹೋಗಿದ್ದ. ಸಂಜೆ ಆತ ಮನೆಗೆ ಬೇಗ ಬಾರದಿದ್ದಾಗ ಕಾಸರ್ ಫೋನ್ ಸಹ ಮಾಡಿದ್ದು, ಈ ವೇಳೆ ಇಬ್ಬರ ನಡುವೆ ಫೋನ್‌ನಲ್ಲಿ ಮತ್ತೆ ಜಗಳವಾಗಿದೆ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೌಸರ್ ಮನೆಗೆ ಬಂದು ಅನ್ನದಲ್ಲಿ ಮಕ್ಕಳಿಗೆ ವಿಷ ಕಲಸಿ ತಿನ್ನಿಸಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನೂ ಈ ನಾಲ್ವರನ್ನು ಅಖಿಲ್ ಅಹಮದ್ ಕೊಲೆ ಮಾಡಿದ್ದಾನೆ ಎಂದು ಕೌಸರ್ ಪೋಷಕರು ಆರೋಪ ಮಾಡಿದ್ದು, ಸದ್ಯ ಅಖಿಲ್ ಹಾಗೂ ಆತನ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಸದ್ಯ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದವರ ಹುಡುಕಾಟದಲ್ಲಿದ್ದು, ಪ್ರಕರಣ ಸತ್ಯಾಸತ್ಯತೆಯನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist