ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Mysuru : ಅತಿ ಕಡಿಮೆ ಬೆಲೆಗೆ ಮಾರಾಟವಾದ ತಂಬಾಕು

Twitter
Facebook
LinkedIn
WhatsApp
Mysuru : ಅತಿ ಕಡಿಮೆ ಬೆಲೆಗೆ ಮಾರಾಟವಾದ ತಂಬಾಕು

 ಎಚ್‌.ಡಿ. ಕೋಟೆ(ಡಿ. 09):  ತಾಲೂಕಿನ ಶಾಂತಿಪುರ ಗ್ರಾಮದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ತಂಬಾಕಿಗೆ ಅತಿ ಕಡಿಮೆ ಬೆಲೆಗೆ ಮಾರಾಟವಾದ ಹಿನ್ನೆಲೆ ರೈತರು ತಂಬಾಕು ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಹರಾಜು ಪ್ರಕ್ರಿಯೆ ನಿಲ್ಲಿಸಿದ ಘಟನೆ ನಡೆಯಿತು.

ಹರಾಜು ಪ್ರಕ್ರಿಯೆ ಎಂದಿನಂತೆ ಪ್ರಾರಂಭವಾಗಿ ಉತ್ತಮ ದರ್ಜೆಯ ಹೊಗೆ ಸೊಪ್ಪಿಗೆ 270 ರು. ನೀಡುವ ಬದಲು 230 ರು. ಗೆ ಬಿಡ್‌ ಮಾಡಿದ್ದಕ್ಕೆ ಆಕ್ರೋಶಗೊಂಡ ರೈತರು (Farmers) , ತಂಬಾಕು ಮಂಡಳಿ ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದು ಕಳೆದ ಒಂದು ವಾರದಿಂದ ದಿನೇ ದಿನೇ ತಂಬಾಕು ಬೆಲೆಯಲ್ಲಿ ಕನಿಷ್ಠ 30 ರು. ನಿಂದ 45 ರು. ಗಳ ಕಡಿಮೆ ಬೆಲೆಗೆ ಕಂಪನಿಯವರು ತಂಬಾಕು ಖರೀದಿಸುತ್ತಿದ್ದು, ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತಿದ್ದರು ಕೂಡ ಅಧಿಕಾರಿಗಳು ಕಣ…ಮುಚ್ಚಿ ಕುಳಿತ್ತಿದ್ದೀರಾ, ನೀವು ರೈತರ ಪರವಾಗಿ ಇಲ್ಲದೆ ತಂಬಾಕು (Tobacco)  ಕಂಪನಿಯವರ ಜೊತೆಗೆ ಒಳ ಒಪ್ಪಂದ ಮಾಡಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ಕೇಂದ್ರ ಸರ್ಕಾರ ಹಾಗೂ ತಂಬಾಕು ಮಂಡಳಿ ಮಧ್ಯ ಪ್ರವೇಶ ಮಾಡಿ ಬಿಡ್‌ದಾರರಿಂದ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಈ ಹಿಂದಿನ ದಿನಗಳಲ್ಲಿ ಇದ್ದಂತ ಮಾರುಕಟ್ಟೆಧಾರಣೆಯನ್ನು ಕೊಡಿಸಬೇಕು ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಒತ್ತಾಯಿಸಿದರು.

ಮೊದಲೆಲ್ಲ ತಂಬಾಕು ಖರೀದಿ ಮಾಡಲು ಹಲವು ಕಂಪನಿಯವರು ಭಾಗವಹಿಸುತ್ತಿದ್ದರು, ಆದರೆ ಇತೀಚೆಗೆ ಕೇವಲ ನಾಲ್ಕæ ೖದು ಕಂಪನಿಯವರು ಮಾತ್ರ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದು, ಕೆಲವು ಕಂಪನಿಯವರು ಒಳ ಒಪ್ಪಂದ ಮಾಡಿಕೊಂಡು ರೈತರಿಗೆ ಉತ್ತಮ ಬೆಲೆ ನೀಡದೆ ಅನ್ಯಾಯ ಮಾಡುತ್ತಿದ್ದಾರೆ. ಹಾಗಾಗಿ ಈ ಬಿಡ್‌ದಾರರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ಕಂಪಾಲಪುರ ಮಾರುಕಟ್ಟೆಸೇರಿದಂತೆ ಇನ್ನಿತರೆ ಕಡೆ ಬುಧವಾರ ನಡೆದ ಹರಾಜಿನಲ್ಲಿ ಪ್ರತಿ ಕೆ.ಜಿ ಹೊಗೆಸೊಪ್ಪಿಗೆ 280 ರು. ಗೆ ತಂಬಾಕು ಮಾರಾಟ ಆಗಿದೆ, ಆದರೆ, ಎಚ್‌.ಡಿ. ಕೋಟೆ ಮಾರುಕಟ್ಟೆಯಲ್ಲಿ ಮಾತ್ರ ಕಡಿಮೆ ದರಕ್ಕೆ ಬಿಡ್‌ ಮಾಡಲಾಗಿದೆ ಎಂದು ದೂರಿದರು.

ರೈತ ಪೃಥ್ವಿ ಮಾತನಾಡಿ, ಐಟಿಸಿ ಕಂಪನಿಯವರು ಗ್ರಾಮಗಳಿಗೆ ತೆರಳಿ ರೈತರ ಬಳಿ ಹೊಗೆಸೊಪ್ಪು ಇರುವುದನ್ನು ಖಾತರಿ ಮಾಡಿಕೊಂಡು ಉತ್ತಮ ಬೆಲೆ ನೀಡುವುದಾಗಿ ಭರವಸೆ ನೀಡಿ, ನಂತರ ಮಾರುಕಟ್ಟೆಗೆ ಬಂದಾಗ ಅಡ್ಡಾದಿಡ್ಡಿಯಾಗಿ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ