ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ:ಗರ್ಭಿಣಿಯರು ಈಗ ಕೋವಿಡ್ -19 ವ್ಯಾಕ್ಸಿನ್ ತೆಗೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಪ್ರಕಟಿಸಿದ್ದು ಲಸಿಕೆಗಾಗಿ ಕೋವಿನ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ಹತ್ತಿರದ ಕೋವಿಡ್ ವ್ಯಾಕ್ಸಿನೇಷನ್ ಸೆಂಟರ್ ನೇರವಾಗಿ ಹೋಗಿ (ಸಿವಿಸಿ) ಲಸಿಕೆ ಪಡೆಯಬಹುದು ಎಂದು ತಿಳಿಸಿದೆ.
ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹದ (ಎನ್ಟಿಎಜಿಐ) ಶಿಫಾರಸುಗಳ ಆಧಾರದ ಮೇಲೆ ಕೇಂದ್ರ ಆರೋಗ್ಯ ಸಚಿವಾಲಯವು ಅನುಮೋದನೆ ನೀಡಿದೆ. ಗರ್ಭಿಣಿ ಮಹಿಳೆಯರು ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿಲ್ಲ, ಆಯ್ಕೆಯಾಗಿ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಪ್ರಸ್ತುತ ಈಗ ನಡೆಯುತ್ತಿರುವ ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮದಡಿ ಇದನ್ನು ಕಾರ್ಯಗತಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ವ್ಯಾಕ್ಸಿನೇಷನ್ ಆಯ್ಕೆ ಮಾಡುವ ಗರ್ಭಿಣಿ ಮಹಿಳೆಯರಿಗೆ, ಗರ್ಭಾವಸ್ಥೆಯಲ್ಲಿ ಯಾವುದೇ ಸಮಯದಲ್ಲಿ ದೇಶದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಗಳನ್ನು ಕೋವಿನ್ನಲ್ಲಿ ನೋಂದಣಿ ಮಾಡಿದ ನಂತರ ಅಥವಾ ವಾಕ್-ಇನ್ ನೋಂದಣಿಯ ಮೂಲಕ ಹತ್ತಿರದ ಸರ್ಕಾರಿ ಅಥವಾ ಖಾಸಗಿ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಅವರಿಗೆ ಲಸಿಕೆ ನೀಡಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಲ್ಲಿಗೆ ಹೋಗಿ ಅವರು ಲಸಿಕೆಯನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ. ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮದಡಿ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ಫಲಾನುಭವಿಗಳಿಗೆ ನೋಂದಣಿ, ವ್ಯಾಕ್ಸಿನೇಷನ್ ನಂತರ ಪ್ರಮಾಣಪತ್ರಗಳ ಉತ್ಪಾದನೆ ಮುಂತಾದ ಕಾರ್ಯವಿಧಾನಗಳು ಒಂದೇ ಆಗಿರುತ್ತವೆ ಎಂದು ಹೇಳಿದೆ.
ಕೆಲವು ದಿನಗಳ ಹಿಂದೆ, ಕೋವಿಡ್ -19 ಲಸಿಕೆಯ ಮೌಲ್ಯ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಗರ್ಭಿಣಿ ಮಹಿಳೆಯರಿಗೆ ಕೌನ್ಸೆಲಿಂಗ್ ಮಾಡುವ ಬಗ್ಗೆ ಮುಂಚೂಣಿ ಕೆಲಸಗಾರರು ಮತ್ತು ವ್ಯಾಕ್ಸಿನೇಟರ್ಗಳಿಗೆ ಮಾರ್ಗದರ್ಶನ ನೀಡಲು ಸಚಿವಾಲಯವು ಫ್ಯಾಕ್ಟ್ಶೀಟ್ ಸಿದ್ಧಪಡಿಸಿತ್ತು, ಇದರಿಂದ ಅವರು ತಿಳುವಳಿಕೆಯುಳ್ಳ ನಿರ್ಧಾರ ತೆಗೆದುಕೊಳ್ಳಬಹುದು. ಕೋವಿಡ್ ಲಸಿಕೆಗಳ ಅಡ್ಡಪರಿಣಾಮಗಳ ಮೇಲೆ, ಲಭ್ಯವಿರುವ ಲಸಿಕೆಗಳು ಸುರಕ್ಷಿತವಾಗಿದೆ ಮತ್ತು ವ್ಯಾಕ್ಸಿನೇಷನ್ ಗರ್ಭಿಣಿಯರನ್ನು ಇತರ ವ್ಯಕ್ತಿಗಳಂತೆ ಕೋವಿಡ್ -19 ಸೋಂಕಿನಿಂದ ರಕ್ಷಿಸುತ್ತದೆ ಎಂದು ಸರ್ಕಾರದ ಫ್ಯಾಕ್ಟ್ಶೀಟ್ ಹೇಳಿದೆ.
ಗರ್ಭಧಾರಣೆಯಿಂದ ಕೊರೋನಾ ಹೆಚ್ಚಾಗುವುದಿಲ್ಲ. ಅನೇಕ ಗರ್ಭಿಣಿಯರಿಗೆ ಸೋಂಕಿನ ಲಕ್ಷಣಗಳೇ ಇರುವುದಿಲ್ಲ. ಇದ್ದರೂ ಸೌಮ್ಯವಾಗಿರುತ್ತವೆ. ಆದರೆ ಬಳಿಕ ಆರೋಗ್ಯ ನಿಧಾನವಾಗಿ ಹದಗೆಡಲಾರಂಭಿಸುತ್ತದೆ ಹಾಗೂ ಗರ್ಭದಲ್ಲಿರುವ ಭ್ರೂಣದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಕೊರೋನಾ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಹೀಗಾಗಿ ಕೊರೋನಾ ಲಸಿಕೆ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?