ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕನ್ನಡ ಮಾತಾಡಿದ ಯುವತಿಗೆ ಕೇರಳ ಯುವತಿ ಹಲ್ಲೆ- ಒಂದೇ ಪಿಜಿಯಲ್ಲಿದ್ರೂ ಭಾಷಾ ತಾರತಮ್ಯ

Twitter
Facebook
LinkedIn
WhatsApp
pic 1 4

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನ್ಯಭಾಷಿಕರ ಉಪಟಳ ಹೆಚ್ಚಾಗಿದೆ. ನನಗೆ ಅರ್ಥವಾಗದ ಕನ್ನಡ ಭಾಷೆ, ನನ್ಮುಂದೆ ಮಾತನಾಡಬೇಡ ಅಂತ, ತಲೆಗೆ ರಕ್ತ ಹೆಪ್ಪುಗಟ್ಟುವಂತೆ ಕನ್ನಡದ ಯುವತಿಗೆ, ಕೇರಳ (Kerala) ದ ಯುವತಿ ಹಲ್ಲೆ ಮಾಡಿದ್ದಾರೆ.

ಹೌದು. ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿ ಸೃಷ್ಟಿ ಬಿಟಿಎಂ ಲೇಔಟ್‍ನ ಪಿಜಿಯಲ್ಲಿದ್ರು. ಇವರಿಗೆ ಕೇರಳ ಮೂಲದ ಅಸ್ಸೇಲಾ ಎಂಬ ಯುವತಿ ರೂಂಮೇಟ್ ಆಗಿದ್ರು. ಮೊನ್ನೆ ಸೃಷ್ಟಿ ಫೋನಲ್ಲಿ ಕನ್ನಡ (Kannada Language) ಮಾತನಾಡ್ತಿರುವಾಗ, ನನಗೆ ಕನ್ನಡ ಅರ್ಥ ಆಗಲ್ಲ. ಇಂಗ್ಲೀಷ್‍ನಲ್ಲೇ ಮಾತನಾಡು ಅಂತ ಕನ್ನಡ ಭಾಷೆಗೆ ಅವಮಾನಿಸಿ, ಧಮ್ಕಿ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಸೃಷ್ಟಿ ತಲೆಗೆ ಬಲವಾಗಿ ಹೊಡೆದಿದ್ದಾರೆ. ಪರಿಣಾಮ ತಲೆಯಲ್ಲಿ ರಕ್ತಹೆಪ್ಪುಗಟ್ಟಿದ್ದು, ಸಿಟಿ ಸ್ಕ್ಯಾನಿಂಗ್‍ಗೆ ನಿಮಾನ್ಸ್ ಆಸ್ಪತ್ರೆಗೆ ಹೋಗುವಂತೆ ಸೂಚಿಸಲಾಗಿದೆ. 

2 ವರ್ಷದಿಂದ ಒಟ್ಟಿಗೆ ವಾಸವಿರುವ ಇವರಿಬ್ಬರ ಮಧ್ಯೆ ಆಗಾಗ ಸಣ್ಣಪುಟ್ಟ ಮನಸ್ತಾಪ, ಗಲಾಟೆಗಳು ಭಾಷೆಯ ವಿಚಾರವಾಗಿ ನಡೆದಿತ್ತಂತೆ. ಆದರೆ ಮೊನ್ನೆ ಕನ್ನಡ ಭಾಷೆಯನ್ನ ತೀರಾ ಕೆಟ್ಟದಾಗಿ ಮಾತನಾಡಿದ್ದಕ್ಕೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಘಟನೆ ಬಳಿಕ ಪಿಜಿ ಮಾಲೀಕರು ಕೇರಳ ಮೂಲದ ಅಸ್ಸೇಲಾ ಎಂಬ ಯುವತಿಯನ್ನ ಹೊರ ಕಳಿಸಿದ್ದಾರೆ. ಇನ್ನೂ ಸೃಷ್ಟಿ ಅಸ್ಸೇಲಾ ವಿರುದ್ದ ಮೈಕೋಲೇಔಟ್ ಪೊಲೀಸ್ ಠಾಣೆ (Mico Layout Police Station) ಯಲ್ಲಿ ದೂರು ದಾಖಲಿಸಿದ್ದಾರೆ.

ವಿವಿಧ ಕನ್ನಡ ಪರ ಸಂಘಟನೆಗಳು, ಕರ್ನಾಟಕದ ಯುವತಿ ಸೃಷ್ಟಿ ಬೆಂಬಲಕ್ಕೆ ನಿಂತಿದ್ದು, ಹಲ್ಲೆ ಮಾಡಿದ ಯುವತಿಯ ಮೇಲೆ ಕ್ರಮಕ್ಕೆ ಆಗ್ರಹಿಸಿವೆ. ಅದೇನೆ ಆಗ್ಲಿ, ಕನ್ನಡದ ನೆಲದಲ್ಲಿ, ಕನ್ನಡ ಭಾಷೆಗೆ ಅವಮಾನ ಮಾಡಿ, ಕರ್ನಾಟಕದ ಯುವತಿಯ ಮೇಲೆನೇ ಹಲ್ಲೆ ಮಾಡಿದ್ದಕ್ಕೆ ಕನ್ನಡ ಸಂಘಟನೆಗಳು ನಿಗಿನಿಗಿ ಕೆಂಡ ಕಾರುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist