ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿ, ಸವಾರ ದುರ್ಮರಣ

Twitter
Facebook
LinkedIn
WhatsApp
ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿ, ಸವಾರ ದುರ್ಮರಣ

ಬೆಂಗಳೂರು(ಜ.14): ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು ಮೂಲದ ತೇಜಸ್ವಿ(21) ಮೃತ ಸವಾರ. ದ್ವಿಚಕ್ರ ವಾಹನದಲ್ಲಿ ಗುರುವಾರ ರಾತ್ರಿ 11.50ರ ಸುಮಾರಿಗೆ ರಾಯಲ್‌ ಆರ್ಕಿಡ್‌ ರೆಸಾರ್ಟ್‌ ಕಡೆಯಿಂದ ಯಲಹಂಕ ಉಪನಗರದ ಕಡೆಗೆ ಬರುವಾಗ ಮಾರ್ಗ ಮಧ್ಯೆ ಅಲ್ಲಾಳಸಂದ್ರ ಕೆರೆ ಸಮೀಪದ ಕೋಡಿ ಕರಿಮಾರಿಯಮ್ಮ ದೇವಸ್ಥಾನ ಬಳಿ ಅಪಘಾತವಾಗಿದೆ.

ಮೈಸೂರು ಮೂಲದ ತೇಜಸ್ವಿ ಯಲಹಂಕ ಉಪನಗರದಲ್ಲಿರುವ ದೊಡ್ಡಮ್ಮನ ಮನೆಯಲ್ಲಿ ಉಳಿದುಕೊಂಡು ನಗರದ ಸಿಂಧಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಗುರುವಾರ ಬೆಳಗ್ಗೆ ಕಾಲೇಜಿಗೆ ಹೋಗಿ ರಾತ್ರಿ ಮನೆಗೆ ವಾಪಾಸಾಗುವಾಗ ರಸ್ತೆ ಬದಿ ನಿಂತಿದ್ದ ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ತೇಜಸ್ವಿ ರಸ್ತೆಗೆ ಬಿದ್ದಿದ್ದಾನೆ. ಹೆಲ್ಮೆಟ್‌ ಧರಿಸಿರಲಿಲ್ಲ. ಹಾಗಾಗಿ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ.

ಕೂಡಲೇ ಸ್ಥಳೀಯರು ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಪರೀಕ್ಷೆ ಮಾಡಿದ ವೈದ್ಯರು, ತಲೆಗೆ ಏಟು ಬಿದ್ದು ತೀವ್ರ ರಕ್ತಸ್ರಾವವಾಗಿ ಮಾರ್ಗ ಮಧ್ಯೆಯೇ ತೇಜಸ್ವಿ ಮೃತಪಟ್ಟಿರುವುದಾಗಿ ಘೋಷಿಸಿದರು. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ರಸ್ತೆ ಬದಿ ಶಾಲಾ ವಾಹನ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಮೃತನ ತಂದೆ ದೂರು ನೀಡಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ