ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Nepal Plane Crashː ನಾಲ್ವರು ಭಾರತೀಯರು ಸೇರಿ ಮೃತರ ಸಂಖ್ಯೆ 68ಕ್ಕೆ ಏರಿಕೆ, ಇಂದು ರಾಷ್ಟ್ರೀಯ ಶೋಕಾಚರಣೆ

Twitter
Facebook
LinkedIn
WhatsApp
woman rape 0 sixteen nine 1

ಕಠ್ಮಂಡು: ನೆರೆರಾಷ್ಟ್ರ ನೇಪಾಳದಲ್ಲಿ (Nepal) ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ (Nepal Plane Crash) ನಾಲ್ವರು ಭಾರತೀಯರು ಸೇರಿದಂತೆ ಒಟ್ಟು ಮೃತಪಟ್ಟವರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ. ಮೃತರಿಗೆ ಸಂತಾಪ ಸೂಚಿಸಲು ಜನವರಿ 16ರಂದು ನೇಪಾಳದಲ್ಲಿ ರಾಷ್ಟ್ರೀಯ ಶೋಕದಿನ ಆಚರಿಸಲಾಗುತ್ತಿದೆ.

 

ಯೇತಿ ಏರ್‌ಲೈನ್ಸ್‌ನ (Yeti Airlines) ಈ ವಿಮಾನದಲ್ಲಿ ನಾಲ್ವರು ಸಿಬ್ಬಂದಿ, ಐವರು ಭಾರತೀಯರು, 10 ವಿದೇಶಿಗರು ಸೇರಿ 72 ಜನ ಪ್ರಯಾಣಿಕರಿದ್ದರು. ದುರಂತದಲ್ಲಿ ಐವರಲ್ಲಿ ನಾಲ್ವರು ಭಾರತೀಯರು ಸೇರಿ 68 ಜನ ಸಾವನ್ನಪ್ಪಿದ್ದಾರೆ. ಓರ್ವ ಭಾರತೀಯ ಪತ್ತೆಯಾಗಿಲ್ಲ. ಇದರಲ್ಲಿ 9 ಮಕ್ಕಳು ಕೂಡ ಇದ್ದರು ಎಂಬುದು ತಿಳಿದುಬಂದಿದೆ.

3

ಇಬ್ಬರು ನೇಪಾಳಿಗರು ಜೀವನ್ಮರಣದ ಹೋರಾಟ ನಡೆಸ್ತಿದ್ದು, ಇಬ್ಬರ ಶವ ಪತ್ತೆಯಾಗಿಲ್ಲ. ರಾಜಧಾನಿ ಕಠ್ಮಂಡುವಿನಿಂದ ಟೇಕಾಫ್ ಆದ ಯೇತಿ ಏರ್‌ಲೈನ್ಸ್‌ ವಿಮಾನ ಪೋಖ್ರಾದಲ್ಲಿ ಲ್ಯಾಂಡಿಂಗ್ 2 ಕಿ.ಮೀ. ದೂರ ಇರುವಾಗ ಪತನವಾಗಿದೆ. 2 ನಿಲ್ದಾಣಗಳ ನಡುವೆ ಒಟ್ಟು 25 ನಿಮಿಷಗಳ ಪ್ರಯಾಣವಾಗಿದ್ದು, 20 ನಿಮಿಷಗಳ ಪ್ರಯಾಣ ಮಾಡಿದ್ದ ವಿಮಾನ ಲ್ಯಾಂಡಿಂಗ್ ಗೆ 5 ನಿಮಿಷ ಬಾಕಿ ಇರುವಾಗ ರನ್‌ವೇನಲ್ಲಿ ವಿಮಾನ ಪತನಗೊಂಡಿದೆ.

4

ಈ ವಿಮಾನದಲ್ಲಿ ಒಟ್ಟು 53 ನೇಪಾಳ, 5 ಭಾರತ, 4 ರಷ್ಯಾ, 2 ಕೊರಿಯಾ, ಅರ್ಜೆಂಟೀನಾ, ಆಸ್ಟ್ರೇಲಿಯಾ, ಐರ್ಲೆಂಡ್ ಹಾಗೂ ಫ್ರಾನ್ಸ್ನ ತಲಾ ಒಬ್ಬರು ಪ್ರಜೆಗಳು ದುರ್ಮರಣಕ್ಕೀಡಾಗಿದ್ದಾರೆ. ಭಾರತೀಯರಾದ ಅಭಿಷೇಕ್ ಕುಶ್ವಾಹ, ಬಿಶಾಲ್ ಶರ್ಮಾ, ಅನಿಲ್ ಕುಮಾರ್ ರಾಜ್‌ಭರ್ , ಸೋನು ಜೈಸ್ವಾಲ್, ಸಂಜಯ್ ಜೈಸ್ವಾಲ್ ಸಜೀವ ದಹನಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಇದನ್ನು ಅರಿಯುವ ಪ್ರಯತ್ನವೂ ನಡೆದಿದೆ. ತಾಂತ್ರಿಕ ಕಾರಣವಾ ಅಥವಾ ಪೈಲಟ್ ನಿರ್ಲಕ್ಷö್ಯವಾ ಅನ್ನೋದು ಪರಿಶೀಲಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪ್ರಧಾನಿ ಪುಷ್ಪ ಕಮಲ್ ದಹಾಲ್ ಮತ್ತು ಗೃಹ ಸಚಿವ ರಬಿ ಲಮಿಚಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ವಿಮಾನ ಸಂಚಾರ ಬಂದ್ ಮಾಡಲಾಗಿದೆ. ನೇಪಾಳದಲ್ಲಿ 8 ತಿಂಗಳ ಅಂತರದಲ್ಲಿ 2ನೇ ಹಾಗೂ 30 ವರ್ಷಗಳಲ್ಲಿ ಅತಿದೊಡ್ಡ ದುರಂತ ಇದಾಗಿದೆ. ಮೃತರಿಗೆ ಸಂತಾಪ ಸೂಚಿಸಲು ಜನವರಿ 16ರಂದು ನೇಪಾಳ ಸರ್ಕಾರ ರಾಷ್ಟ್ರೀಯ ಶೋಕಾಚರಣೆ ದಿನವನ್ನಾಗಿ ಘೋಷಣೆ ಮಾಡಿದೆ. ಪ್ರಯಾಣದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

5

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist