ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಪತ್ ಸುವರ್ಣ, ಉಮಾನಾಥ ಕೋಟ್ಯಾನ್, ಸತೀಶ್ ಕುಂಪಲ. ಮೂರು ಬಿಲ್ಲವರಿಗೆ ಅವಕಾಶ ನೀಡಿ ಕಾಂಗ್ರೆಸ್ ವಿರುದ್ಧ ತಂತ್ರಗಾರಿಕೆ ಮೆರೆಯಲು ಬಿಜೆಪಿ ತಯಾರಿ?

Twitter
Facebook
LinkedIn
WhatsApp
ಸಂಪತ್ ಸುವರ್ಣ, ಉಮಾನಾಥ ಕೋಟ್ಯಾನ್, ಸತೀಶ್ ಕುಂಪಲ . ಮೂರು ಬಿಲ್ಲವರಿಗೆ ಅವಕಾಶ ನೀಡಿ ಕಾಂಗ್ರೆಸ್ ವಿರುದ್ಧ ತಂತ್ರಗಾರಿಕೆ ಮೆರೆಯಲು ಬಿಜೆಪಿ ತಯಾರಿ?

ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಕುತೂಹಲ ಕೆರಳಿಸುತ್ತದೆ. ಈ ನಡುವೆ ಬಿಜೆಪಿ ಮಹತ್ವದ ತಂತ್ರಗಾರಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ತಂತ್ರಗಾರಿಕೆ ಭಾಗವಾಗಿ ಬೆಳ್ತಂಗಡಿ, ಮೂಡಬಿದ್ರೆ ಹಾಗೂ ಮಂಗಳೂರು ಕ್ಷೇತ್ರಗಳಲ್ಲಿ ಬಿಲ್ಲವ ಸಮುದಾಯಕ್ಕೆ ಅವಕಾಶ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಲ್ಲಿ ಬಿಲ್ಲವ ಸಮುದಾಯಕ್ಕೆ ಸರಿಯಾದ ಸ್ಥಾನ ಮಾನ ನೀಡಲು ಅಸಾಧ್ಯವಾಗುತ್ತದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಿಜೆಪಿ ಈ ಬಹುದೊಡ್ಡ ಮಾಸ್ಟರ್ ಸ್ಟ್ರೋಕ್ ಎಸೆಯಲು ಮುಂದಾಗಿದ್ದು, ಒಂದು ವೇಳೆ ಬಿಜೆಪಿ ಈ ತಂತ್ರಗಾರಿಕೆ ಅನುಸರಿಸಿದ ಪಕ್ಷದಲ್ಲಿ ಕಾಂಗ್ರೆಸ್ ಎಂಟು ಕ್ಷೇತ್ರಗಳಲ್ಲಿ ಕಠಿಣ ಸ್ಪರ್ಧೆ ಎದುರಿಸಬೇಕಾಗಿ ಬರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಈ ತಂತ್ರಗಾರಿಕೆ ಭಾಗವಾಗಿ ಬೆಳ್ತಂಗಡಿಯಿಂದ ಸಂಪತ್ ಸುವರ್ಣ, ಮೂಡಬಿದ್ರೆಯಿಂದ ಉಮಾನಾಥ ಕೋಟ್ಯಾನ್, ಮಂಗಳೂರಿನಿಂದ ಸತೀಶ್ ಕುಂಪಲ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ, ಬಿಜೆಪಿ ಮೂಲಗಳಿಂದ ವರದಿಯಾಗಿದೆ.

ಇದಕ್ಕೆ ಪ್ರತಿಯಾಗಿ ಬಂಟರಿಗೆ ಬಂಟ್ವಾಳ, ಮಂಗಳೂರು ಉತ್ತರ ನೀಡಲಾಗುತ್ತದೆ. ಅಲ್ಲದೆ ಲೋಕಸಭಾ ಸದಸ್ಯ ಸ್ಥಾನ ಆ ಸಮುದಾಯಕ್ಕೆ ಈ ಮೊದಲು ನೀಡಲಾಗಿದ್ದ ವಿಷಯವನ್ನು ಪರಿಗಣಿಸಿ ಎರಡು ಸಮುದಾಯದ ನಡುವೆ ಬ್ಯಾಲೆನ್ಸ್ ಮಾಡಲು ಬಿಜೆಪಿ ಯೋಚಿಸಿದೆ ಎಂದು ತಿಳಿದುಬಂದಿದೆ. ಎರಡು ಪ್ರಬಲ ಪಂಗಡಕ್ಕೆ ಸಮಾನ ಸ್ಥಾನಮಾನ ನೀಡಲು ಬಿಜೆಪಿ ಯೋಚಿಸಿದೆ ಎಂದು ಮಾಹಿತಿ ಬಿಜೆಪಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ