ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರು – ಬೈಕ್ ಸವಾರ ದುರಂತ ಸಾವು.

Twitter
Facebook
LinkedIn
WhatsApp
ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರು – ಬೈಕ್ ಸವಾರ ದುರಂತ  ಸಾವು.

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಬೈಕ್ ಸವಾರ ಬಾಗಲಕೋಟೆ ತಾಲೂಕಿನ ಚಿಕ್ಕಹಂಡರಗಲ್ ನಿವಾಸಿ ಕೂಡಲೆಪ್ಪ ಬೋಳಿ(58) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿ 12 ಜನರು 2 ಕಾರಿನಲ್ಲಿ ಪ್ರವಾಸಕ್ಕೆ ತೆರಳಿ ವಾಪಸಾಗ್ತಿದ್ರು. ವಿಜಯಪುರ ಮಾರ್ಗವಾಗಿ ತೆರಳ್ತಿದ್ದ ಚಿದಾನಂದ ಕಾರು ಹೊಲದಿಂದ ವಾಪಸಾಗುತ್ತಿದ್ದ ಸವಾರ ಕೂಡಲೆಪ್ಪನ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ.

ಲಕ್ಷ್ಮಣ ಸವದಿ ಮಗ ಚಿದಾನಂದ ಕೆಎ22 ಎಂಸಿ5151 ನಂ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಸವಾರನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಆಸ್ಪತ್ರೆಗೆ ಸೇರಿದ ಕೆಲವೇ ಕ್ಷಣಗಳಲ್ಲಿ ಕೂಡಲೆಪ್ಪ ಮೃತಪಟ್ಟಿದ್ದಾರೆ. ವಿಪರ್ಯಾಸವೆಂದರೆ ಬೈಕ್‌ಗೆ ಡಿಕ್ಕಿ ಬಳಿಕ ಸವಾರನನ್ನು ಆಸ್ಪತ್ರೆಗೆ ಸೇರಿಸುವ ಬದಲು ತಮ್ಮ ವಾಹನದ ನಂಬರ್ ಜಖಂಗೊಳಿಸಿ ಹೊರಡಲು ಯತ್ನಿಸಿದ್ದಾರೆ. ಚಿದಾನಂದ ಮತ್ತೊಂದು ವಾಹನದಲ್ಲಿ ತೆರಳಲು ಮುಂದಾಗಿದ್ದ. ಅಪಘಾತ ಮಾಡಿದ ಕಾರು ಯಾರದ್ದೆಂದು ತಿಳಿಯದಂತೆ ನೋಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದ್ರೆ ಸ್ಥಳೀಯರು ಚಿದಾನಂದನನ್ನು ತಪ್ಪಿಸಿಕೊಳ್ಳಲು ಬಿಡದೆ ಕೆಲಹೊತ್ತು ಹಿಡಿದು ಕೂರಿಸಿದ್ದಾರೆ. ಬಳಿಕ ಹುನಗುಂದ ಪೊಲೀಸರು ಚಿದಾನಂದನನ್ನು ಬಿಡಿಸಿ ಕಳಿಸಿದ್ದಾರೆ. ಈ ಬಗ್ಗೆ ಹುನಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿದಾನಂದ ಬದಲು ಚಾಲಕ ಹನುಮಂತ ಸಿಂಗ್ ಹೆಸರಲ್ಲಿ ದೂರು ದಾಖಲಾಗಿದೆ. ಅಪಘಾತ ಬಳಿಕ ಮೃತನ ಸಂಬಂಧಿಕರಿಗೆ ನಾನು ಡಿಸಿಎಂ ಮಗ ಹುಷಾರ್ ಎಂದು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೃತನ ಸಂಬಂಧಿಕರು ಚಿದಾನಂದ ಸವದಿ ವಿರುದ್ಧ ಬೆದರಿಕೆ ಆರೋಪ ಮಾಡಿದ್ದಾರೆ. ಅಪಘಾತದ ಬಳಿಕ ತಮ್ಮ ಕಾರಿನ ನಂಬರ್ ಪ್ಲೇಟ್ ಜಖಂಗೊಳಿಸಿ ಬಳಿಕ ಮತ್ತೊಂದು ವಾಹನದಲ್ಲಿ ತೆರಳಲು ಯತ್ನಿಸಿದ್ದಾರೆ ಎಂದು ಮೃತ ಕೂಡಲೆಪ್ಪ ಬೋಳಿ ಸಂಬಂಧಿ ಸಿದ್ದಪ್ಪ ತಿಳಿಸಿದ್ದಾರೆ. ಅಪಘಾತವಾದ ಕಾರಿನ ನಂಬರ್ ಪ್ಲೇಟ್, ದಾಖಲೆಗಳನ್ನು ಮತ್ತೊಂದು ವಾಹನದಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದ್ರು. ಈ ವೇಳೆ ಕೂಡಲೆಪ್ಪ ಮಕ್ಕಳು, ಸ್ಥಳೀಯರು ಬಂದ್ರು. ಬಳಿಕ ಯುವಕನೊಬ್ಬ ಚಿದಾನಂದನ ಕಾರಿನ ಫೋಟೋ ತೆಗೆದಿದ್ದ. ಆಗ ಯುವಕನಿಗೆ ಚಿದಾನಂದ ಸವದಿ ಬೆದರಿಕೆ ಹಾಕಿ ಮೊಬೈಲ್‌ನಲ್ಲಿದ್ದ ಫೋಟೋ ಡಿಲೀಟ್ ಮಾಡಿದ್ದಾರೆ ಎಂದು ಸಿದ್ದಪ್ಪ ಹೇಳಿದ್ರು.

ಮನೆ ದೇವರಾಣೆಗೂ ನಾನು ಯಾರಿಗೂ ಧಮ್ಕಿ ಹಾಕಿಲ್ಲ. ಆಕಸ್ಮಿಕವಾಗಿ ಕಾರಿಗೆ ಅಡ್ಡಬಂದಿದ್ದರಿಂದ ಅಪಘಾತವಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಹೇಳಿಕೆ ನೀಡಿದ್ದಾರೆ. ಅಪಘಾತವಾದ ಕಾರಿನಲ್ಲಿ ನಾನು ಇರಲಿಲ್ಲ. ಅಪಘಾತವಾಗಿರುವುದು ನಿಜ, ಸ್ಥಳದಲ್ಲಿ ಯಾರೂ ಇರಲಿಲ್ಲ. ಅಪಘಾತವಾದ ತಕ್ಷಣ ಆ್ಯಂಬುಲೆನ್ಸ್‌ಗೆ ಕರೆ ಮಾಡಿ ಅವರನ್ನು ನಾನೇ ಆಸ್ಪತ್ರೆಗೆ ದಾಖಲಿಸಿದ್ದೆ. ದೇವರಾಣೆಗೂ ನಾನೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೆ. ಮಾನವೀಯತೆ ದೃಷ್ಟಿಯಿಂದ ಮೃತನ ಕುಟುಂಬಕ್ಕೆ ನಾನು ಸಹಾಯವನ್ನು ಮಾಡುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಹೇಳಿದ್ರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು