ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆ.3ರಂದು ಹಾಸನ ಜಿಲ್ಲೆಯ ಎಲ್ಲ ಕ್ಷೇತ್ರದ ಟಿಕೆಟ್‌ ಫೈನಲ್‌: ಎಚ್‌.ಡಿ.ಕುಮಾರಸ್ವಾಮಿ

Twitter
Facebook
LinkedIn
WhatsApp
ಬಾಗೇಪಲ್ಲಿಯಲ್ಲಿ ಯಾವುದೇ ಕಾರಣಕ್ಕೂ ಸಿಪಿಎಂ ಜತೆ ಹೊಂದಾಣಿಕೆ ಇಲ್ಲ: ಎಚ್‌ಡಿಕೆ

ಸಂಡೂರು (ಫೆ.01): ಹಾಸನ ಜಿಲ್ಲೆಯ ಪಕ್ಷದ ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಫೆ.3ರಂದು ಜಿಲ್ಲೆಯ ಎಲ್ಲ 7 ಕ್ಷೇತ್ರಗಳ ಟಿಕೆಟ್‌ ಫೈನಲ್‌ ಮಾಡಲಾಗುವುದು. ಫೆ.4ರಂದು ಜೆಡಿಎಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪಂಚರತ್ನ ರಥಯಾತ್ರೆ ಅಂಗವಾಗಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೆಕುಪ್ಪ ಹಾಗೂ ದಾವಣಗೆರೆ ಜಿಲ್ಲೆ ಕೊಂಡಜ್ಜಿಯಲ್ಲಿ ಮಾತನಾಡಿ, ಹಾಸನ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಪಕ್ಷದಿಂದ ಒಳ್ಳೆಯ ಅಭ್ಯರ್ಥಿ ಹಾಕಿ. ನಾವು ನಿಮ್ಮ ಋುಣ ತೀರಿಸುತ್ತೇವೆ ಎಂದು ಜನರೇ ಹೇಳುತ್ತಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚಿಸಿ ಫೆ.ರಂದು 40-50 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ?. ಸಿದ್ದರಾಮಯ್ಯ ಯಾಕೆ ವರುಣ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟುಕೊಟ್ಟರು? ಅವರೂ ಮಗನ ರಾಜಕೀಯದ ಬಗ್ಗೆ ಯೋಚಿಸುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೂ ತಮ್ಮ ಮಗನ ರಾಜಕೀಯ ಭವಿಷ್ಯ ಮುಖ್ಯವಾಗಿದೆ. ಯಡಿಯೂರಪ್ಪ ಸಹ ತಮ್ಮ ಮಗನ ಭವಿಷ್ಯ ಕಟ್ಟುವ ಯೋಚನೆಯಲ್ಲಿದ್ದಾರೆ. ಆದರೆ, ಜೆಡಿಎಸ್‌ ವಿಚಾರ ಬಂದಾಗ ಕುಟುಂಬ ರಾಜಕಾರಣ ಎನ್ನುತ್ತಾರೆ. ಕಾಂಗ್ರೆಸ್‌ ಮತ್ತು ಬಿಜೆಪಿಯವರಿಗೆ ತಮ್ಮ ಮಕ್ಕಳ ಭವಿಷ್ಯದ ಚಿಂತೆಯಾದರೆ, ನಾನು ನಾಡಿನ ಆರು ಕೋಟಿ ಜನರ ಬಗ್ಗೆ ಚಿಂತೆ ಮಾಡುತ್ತಿದ್ದೇನೆ ಎಂದರು.

ಅಧಿಕಾರಕ್ಕಾಗಿ ಸಿದ್ದು ಪಕ್ಷಾಂತರ: ಸಿದ್ದರಾಮಯ್ಯ ಜೆಡಿಎಸ್‌ನಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಮುಖ್ಯಮಂತ್ರಿ ಆಗಬೇಕೆಂದು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರಿದರು. ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದಲ್ಲೇ ಬೆಳೆದವರು, ಈಗ ಅದನ್ನು ಮರೆತಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಕ್ಷೇತ್ರ ಹುಡುಕಾಟ ಮಾಡುವವರಿಗೆ ನಮ್ಮ ಪಕ್ಷದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮನ್ನು ಗುಲಾಮರಂತೆ ಟ್ರೀಟ್‌ ಮಾಡಿದರು. ಅನ್‌ ಕಂಡಿಷನಲ್‌ ಬೆಂಬಲ ಎಂದೇಳಿ, ಕಂಡಿಷನ್‌ ಹಾಕುತ್ತಿದ್ದರು ಎಂದು ಆರೋಪಿಸಿದರು.

ಅಂದು ಬಳ್ಳಾರಿ ಗಣಿಗಾರಿಕೆ ಹಗರಣ ಹೊರಬರಲು ನಾನೇ ಕಾರಣ. ನನ್ನ ಬಗ್ಗೆ .150 ಕೋಟಿ ಸಿಡಿ ಬಿಡುಗಡೆ ಮಾಡುವೆ ಎಂದರು. ಅದು ಏನಾಯ್ತು?. ಬಳ್ಳಾರಿ ಜಿಲ್ಲೆಯನ್ನು ಲೂಟಿ ಮಾಡಿ ವಾಮಮಾರ್ಗದ ಮೂಲಕ ಹಣ ಗಳಿಸಿ ನಿಮ್ಮ ಮುಂದೆ ದಾನಶೂರ ಕರ್ಣರಂತೆ ಬರುವ ಬೂಟಾಟಿಕೆ ಶ್ರೀಮಂತರಿಗೆ ಬುದ್ದಿ ಕಲಿಸಿ. ಕಾಂಗ್ರೆಸ್‌, ಬಿಜೆಪಿ ಹಣದ ಹೊಳೆಯನ್ನೇ ಹರಿಸಿದರೂ ಅವರ ಮಾತುಗಳಿಗೆ ಬೆಲೆ ಕೊಡಬೇಡಿ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ