ಸೋಮವಾರ, ಏಪ್ರಿಲ್ 29, 2024
ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸ ಮುಖದ ಬಗ್ಗೆ ರಾಹುಲ್ ಗಾಂಧಿ ಒಲವು. ಕೊಡಗಿನಲ್ಲಿ ಪೊನ್ನನ್ನ,ಡಾ. ಮಂತರ್ ಗೌಡ, ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಬಹುತೇಕ ಫಿಕ್ಸ್.

Twitter
Facebook
LinkedIn
WhatsApp
Woman video 1200x675 3

ಬೆಂಗಳೂರು: ಕಾಂಗ್ರೆಸ್ನ ನ ಅಭ್ಯರ್ಥಿಗಳು ಯಾರು ಆಗಬಹುದು ಎಂಬ ಕುತೂಹಲದ ನಡುವೆ ರಾಹುಲ್ ಗಾಂಧಿ ನಡೆಸಿರುವ ಆಂತರಿಕ ಸಮೀಕ್ಷೆಯ ವರದಿ ಈಗ ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ಆ ಪ್ರಕಾರ ಹೊಸ ಮುಖಗಳಿಗೆ ಆದ್ಯತೆ ನೀಡಲು ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಮಾತನಾಡಿದ್ದಾರೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಈ ಆಧಾರದ ಮೇಲೆ ಕೊಡಗಿನ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫಿಕ್ಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್ ಮೂಲಗಳ ಪ್ರಕಾರ ವಿರಾಜಪೇಟೆ ಕ್ಷೇತ್ರಕ್ಕೆ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಎಎಸ್ ಪೊನ್ನಣ್ಣ ಫಿಕ್ಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ತನ್ನ ಟ್ರಸ್ಟ್ ಮೂಲಕ ನೂರಾರು ಜನರಿಗೆ ಸಹಾಯ ಮಾಡಿದ ಪೊನ್ನನ್ನ ವಿರಾಜಪೇಟೆಯಲ್ಲಿ ಇಮೇಜ್ ಇರುವ ಅಭ್ಯರ್ಥಿಯಾಗಿದ್ದಾರೆ.

ಅದೇ ರೀತಿ ಮಡಿಕೇರಿ ಕ್ಷೇತ್ರಕ್ಕೆ ಕರ್ನಾಟಕದಲ್ಲಿ ಗಮನ ಸೆಳೆದ ಅಭಿವೃದ್ಧಿ ಚಿಂತಕ ಎಂದು ಖ್ಯಾತಿಗಳಿಸಿದ ಡಾ. ಮಂತರ್ ಗೌಡ ಫಿಕ್ಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ತಂದೆ ಜೆಡಿಎಸ್ ಅಭ್ಯರ್ಥಿಯಾಗುತ್ತಿರುವ ಬಗ್ಗೆ ಹೈಕಮಾಂಡ್ ತಲೆಕೆಡಿಸಿಕೊಳ್ಳದೆ ಯುವ ನಾಯಕ ಡಾ. ಮಂತರ್ ಗೌಡ ರವರನ್ನು ಫಿಕ್ಸ್ ಮಾಡಿದೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದುಬಂದಿದೆ. ಜಾರಕಿಹೊಳಿ, ಬಚ್ಚೇಗೌಡ ಕುಟುಂಬ ಬೇರೆ ಪಕ್ಷದಲ್ಲಿ ಇದ್ದಾರೆ. ಹೈಕಮಾಂಡ್ ಗೆ ಶಕ್ತಿಶಾಲಿ ಯುವ ನಾಯಕತ್ವ ಭವಿಷ್ಯದ ಕಾಂಗ್ರೆಸ್ ಗೆ ಅಗತ್ಯ ಎಂಬುದು ತಿಳಿದಿದೆ, ಉಳಿದ ವಿಷಯಗಳು ಅಲ್ಲ ಎಂದು ಹೈಕಮಾಂಡಿನ ಹಿರಿಯ ನಾಯಕರು ಒಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನು ಬೆಳ್ತಂಗಡಿ ಕ್ಷೇತ್ರಕ್ಕೆ ಹೊಸಮುಖವಾದ ರಕ್ಷಿತ ಶಿವರಾಂ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ. ಬೆಸ್ಟ್ ಫೌಂಡೇಶನ್ ನ ಮೂಲಕ ನೂರಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿರುವ ರಕ್ಷಿತ್ ಶಿವರಾಂ ಬೆಳ್ತಂಗಡಿ ಅಭ್ಯರ್ಥಿ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ರಾಹುಲ್ ಗಾಂಧಿ ಕಾಂಗ್ರೆಸ್ಸಿನ ಹೊಸ ಮುಖಗಳ ಪಟ್ಟಿಯನ್ನು ತಂದು ಅದರ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಪಟ್ಟಿಯಲ್ಲಿ ಪೊನ್ನನ್ನ, ಮಂಥರ್ ಗೌಡ, ರಕ್ಷಿತ್ ಶಿವರಾಂ ಇರುವುದು ಈಗ ಕುತೂಹಲ ಮೂಡಿಸಿದೆ. ಈ ಸಮರ್ಥ ನಾಯಕರುಗಳ ಕೈಗೆ ಕಾಂಗ್ರೆಸ್ ನಾಯಕತ್ವ ಕೊಡಲು ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ