ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಊಟದ ಪ್ಲೇಟ್ ನೀಡಲು ಲೇಟ್ ಮಾಡಿದ್ದಕ್ಕೆ ಅಡುಗೆ ಸಿಬ್ಬಂದಿಯನ್ನೇ ಹೊಡೆದು ಕೊಂದ್ರು

Twitter
Facebook
LinkedIn
WhatsApp
ಊಟದ ಪ್ಲೇಟ್ ನೀಡಲು ಲೇಟ್ ಮಾಡಿದ್ದಕ್ಕೆ ಅಡುಗೆ ಸಿಬ್ಬಂದಿಯನ್ನೇ ಹೊಡೆದು ಕೊಂದ್ರು

ನವದೆಹಲಿ: ಮದುವೆಯೊಂದರಲ್ಲಿ (Wedding) ಊಟದ ತಟ್ಟೆಗಳನ್ನು (Food Plate) ನೀಡುವುದರ ಕುರಿತು ನಡೆದ ವಾಗ್ವಾದದಲ್ಲಿ ಮ್ಯೂಸಿಕ್ ಬ್ಯಾಂಡ್‌ನ (Music Band) ಸದಸ್ಯರು ಅಡುಗೆ ಸಿಬ್ಬಂದಿಯನ್ನು ಹೊಡೆದು ಹತ್ಯೆಗೈದ ಘಟನೆ ದೆಹಲಿಯಲ್ಲಿ (New Delhi) ನಡೆದಿದೆ.

ಅಡುಗೆ ಸಿಬ್ಬಂದಿ ಸಂದೀಪ್‌ ಮೃತ ವ್ಯಕ್ತಿ. ದೆಹಲಿಯ ಪ್ರಶಾಂತ್ ವಿಹಾರ್‌ನಲ್ಲಿ ಈ ಘಟನೆ ನಡೆದಿದೆ. ಡಿಜೆ ಸೇರಿದಂತೆ ಮ್ಯೂಸಿಕ್ ಬ್ಯಾಂಡ್‍ನ ಸದಸ್ಯರು ಸಂದೀಪ್ ಸಿಂಗ್ ಬಳಿ ಊಟಕ್ಕೆ ಪ್ಲೇಟ್‍ಗಳನ್ನು ಕೇಳಿದ್ದರು.

ಈ ವೇಳೆ ಸಂದೀಪ್ ಸಿಂಗ್, ಸ್ವಚ್ಛಗೊಳಿಸಲಾಗುತ್ತಿದೆ. ಹಾಗಾಗಿ ಸ್ವಲ್ಪ ಸಮಯದ ನಂತರ ಪ್ಲೇಟ್‍ಗಳನ್ನು ನೀಡುತ್ತೇವೆ ಎಂದು ಆ ವಾದಕರಿಗೆ ತಿಳಿಸಿದ್ದಾನೆ.

ಪ್ಲೇಟ್ ನೀಡುವುದು ತಡವಾಗಿದ್ದರಿಂದ ಕೋಪಗೊಂಡ ಬ್ಯಾಂಡ್ ಸದಸ್ಯರು ಸಂದೀಪ್‍ನನ್ನು ಪ್ಲಾಸ್ಟಿಕ್ ಕ್ರೇಟ್‍ನಿಂದ ಥಳಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಸಂದೀಪನನ್ನು ಆಸ್ಪತ್ರೆಗೆ ಸಾಗಿಸಿದ್ದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. 

ವಾಗ್ವಾದದಲ್ಲಿ ನಾಲ್ವರು ಭಾಗಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇತರ ಇಬ್ಬರು ಆರೋಪಿಗಳಿಗಾಗಿ ಹುಡುಕಾಡುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ