ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಾರ್ಮಾಡಿ ಘಾಟ್ ನಲ್ಲಿರುವ ದೇವರಿಗೆ ನಿತ್ಯ ಶಾಸ್ತ್ರೋಕ್ತ ಪೂಜೆಗೆ ಸ್ಥಳೀಯರ ಒತ್ತಾಯ

Twitter
Facebook
LinkedIn
WhatsApp
ಚಾರ್ಮಾಡಿ ಘಾಟ್ ನಲ್ಲಿರುವ ದೇವರಿಗೆ ನಿತ್ಯ ಶಾಸ್ತ್ರೋಕ್ತ ಪೂಜೆಗೆ ಸ್ಥಳೀಯರ ಒತ್ತಾಯ

ಚಿಕ್ಕಮಗಳೂರು (ಫೆ.14): ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಸಂಪರ್ಕ ಸೇತುವೆ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಇರುವ ಅಣ್ಣಪ್ಪ ಸ್ವಾಮಿ ದೇಗುಲದಲ್ಲಿ ನಿತ್ಯ ಶಾಸ್ತ್ರೋಕ್ತ ಪೂಜೆ ನಡೆಯಲಿ ಎಂದು ಸ್ಥಳೀಯರ ಆಗ್ರಹ ಮಾಡಿದ್ದಾರೆ. ಐತಿಹಾಸಿಕ ಹಾಗೂ ಇತಿಹಾಸ ಪ್ರಸಿದ್ಧ ಅಣ್ಣಪ್ಪ ಸ್ವಾಮಿ ದೇವಾಲಯದಲ್ಲಿ ನಿತ್ಯ ವೇಧ-ಮಂತ್ರಗಳಿಂದ ಪೂಜೆ ಆಗಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ. 

 

ಮೂಲಭೂತ ಸೌಕರ್ಯಗಳ ಜೊತೆಗೆ  ನಿತ್ಯ ಪೂಜೆಗೆ ಆಗ್ರಹ:
ಸರ್ಕಾರ, ಮುಜರಾಯಿ ತಹಶೀಲ್ದಾರ್ ಹಾಗೂ ಎಸಿ ಅವರಿಗೆ ಆಗ್ರಹಿಸಿರೋ ಸ್ಥಳಿಯರು ಚಾರ್ಮಾಡಿಯ ಅಣ್ಣಪ್ಪ ಸ್ವಾಮಿ ದೇಗುದಲ್ಲಿ ನಿತ್ಯ ಪೂಜೆ ನಡೆಯುತ್ತಿದೆ. ಆದರೆ, ವೇಧ-ಮಂತ್ರಗಳಿಂದ ಪೂಜೆ ನಡೆಯುತ್ತಿಲ್ಲ. ಇನ್ಮು ಮುಂದೆ ಸರ್ಕಾರ ಹಾಗೂ ಅಧಿಕಾರಿಗಳು ವೇಧ ಹಾಗೂ ಮಂತ್ರಗಳಿಂದ ಪೂಜೆಯಾಗುವಂತೆ ನೋಡಿಕೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲ ಅಂದ್ರೆ ಈ ಭಾಗದಲ್ಲಿ ಓಡಾಡುವ ಪ್ರವಾಸಿಗರಿಗೆ ಭಕ್ತಿ-ಭಯ ಹಾಗೂ ಗೌರವ. ಈ ಭಾಗದಲ್ಲಿ ಸಂಚರಿಸುವ ಅನ್ಯಕೋಮಿನ ವಾಹನಹಳನ್ನ ಹೊರತು ಪಡಿಸಿ ಪ್ರತಿಯೊಂದು ವಾಹನಗಳು ನಿತ್ಯ ಇಲ್ಲಿ ಸಂಚರಿಸುವಾಗ ಇಲ್ಲಿ ನಿಲ್ಲಸಿ, ಪೂಜೆ ಮಾಡಿಸಿ, ಕಾಣಿಕೆ ಹಾಕಿಯೇ ಮುಂದೆ ಹೋಗೋದು. ಇಲ್ಲಿ ಕೈಮುಗಿದು, ಪೂಜೆ ಮಾಡಿಸಿಕೊಂಡು ಮುಂದೆ ಹೋದರೆ ಚಾರ್ಮಾಡಿ ಘಾಟಿಯಂತಹಾ ಅಪಾಯಕಾರಿ ಹಾಗೂ ಹಾವು-ಬಳುಕಿನ ಮೈಕಟ್ಟಿನ ರಸ್ತೆಯಲ್ಲಿ ಯಾವ ಅನಾಹುತವೂ ಸಂಭವಿಸೋದಿಲ್ಲ ಅನ್ನೋದು ಈ ಭಾಗದ ಪ್ರಯಾಣಿಕರ ನಂಬಿಕೆ. ಹಾಗಾಗಿ, ಈ ಭಾಗದಲ್ಲಿ ಸಂಚಾರ ಮಾಡುವ ಪ್ರತಿಯೊಂದು ವಾಹನಗಳು ಇಲ್ಲಿ ನಿಲ್ಲಿಸಿ ಪೂಜೆ ಮಾಡಿಸಿ, ಕೈ ಮುಗಿದು, ಕಾಣಿಕೆ ಹಾಕಿಯೇ ಮುಂದೆ ಹೋಗೋದು. ನಿತ್ಯ ಸಂಚರಿಸುವ ಕೆ.ಎಸ್.ಆರ್.ಟಿ.ಸಿ. ಬಸ್ಗಳು ಕೂಡ.

ಆದರೆ, ಮುಜರಾಯಿ ಇಲಾಖೆ ಒಳಪಡುವ ಈ ದೇಗುಲಕ್ಕೆ ನಿತ್ಯ ಸಾವಿರಾರು ರೂಪಾಯಿ ಆದಾಯವಿದೆ. ಆದರೆ, ಇಲ್ಲಿ ನಿತ್ಯ ಪೂಜೆ ನಡೆದರೂ ಕೂಡ ಮಾಮೂಲಿ ಪೂಜೆಯಂತೆ ನಡೆಯುತ್ತಿದೆ. ಇದೊಂದು ಐತಿಹಾಸಿಕ ಹಾಗೂ ಇತಿಹಾಸ ಪ್ರಸಿದ್ಧ ದೇವಾಲಯ. ಈ ಅಣ್ಣಪ್ಪಸ್ವಾಮಿಗೂ ಧರ್ಮಸ್ಥಳದ ಮಂಜುನಾಥ ಸ್ವಾಮಿಗೂ ಸಂಬಂಧವಿದೆ ಎಂಬ ಮಾತುಗಳು ಇವೆ. ಈ ಅಣ್ಣಪ್ಪ ಸ್ವಾಮಿ ಅತ್ಯಂತ ಶಕ್ತಿಶಾಲಿ ದೈವ ಕೂಡ. ಹಾಗಾಗಿ, ಇಲ್ಲಿಗೆ ನಿತ್ಯ ಬರುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಜೊತೆಗೆ ವೇಧಮಂತ್ರ ಘೋಷಗಳೊಂದಿಗೆ ನಿತ್ಯ ಪೂಜೆ ನಡೆಯಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist